2:00 AM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ರೋಟರಿ ಕ್ಲಬ್ ವತಿಯಿಂದ ಆರಕ್ಷಕ ಮಣಿಕಂಠ ಸಹಿತ ಹಲವು ಸಾಧಕರಿಗೆ ಸನ್ಮಾನ

19/01/2022, 21:37

ಮಂಗಳೂರು :(Reporterkarnataka news) : ಮಂಗಳೂರು ಉತ್ತರ ರೋಟರಿ ಕ್ಲಬ್ ವತಿಯಿಂದ ವೃತ್ತಿಪರರಿಗೆ ಸನ್ಮಾನ ಕಾರ್ಯಕ್ರಮ ಇತ್ತೀಚೆಗೆ ನಗರದ ಬಾಲ ಭವನದಲ್ಲಿ ನಡೆಯಿತು.

ಮಂಗಳೂರು ನಗರ ಅಪರಾಧ ಹಾಗೂ ಸಂಚಾರ ವಿಭಾಗದ ಡಿಸಿಪಿ ಬಿ ಪಿ ದಿನೇಶ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಈ ಸಂದರ್ಭ ಮಂಗಳೂರು ನಗರ ಪಶ್ಚಿಮ ಪೋಲಿಸ್ ಠಾಣೆ ಪಾಂಡೇಶ್ವರದಲ್ಲಿ ಮುಖ್ಯ ಆರಕ್ಷಕರಾಗಿರುವ ಮಣಿಕಂಠ ಸೇರಿದಂತೆ
ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಉಮೇಶ್ ಶೆಟ್ಟಿ, ಸರಕಾರಿ ಲೇಡೀಗೋಷನ್ ಆಸ್ಪತ್ರೆಯ ನರ್ಸಿಂಗ್ ಆಫೀಸರ್ ಅಂಬಿಕಾ,ಮಂಗಳೂರು ಕೆ. ಎಸ್. ಅರ್. ಟಿ. ಸಿ ನಿಗಮದ ಬಸ್ ಚಾಲಕ ಹನುಮಂತ ಮೇಗಳ ಮನಿ, ಉಪ್ಪಿನಂಗಡಿ ಗೃಹ ರಕ್ಷಕ ದಳದ ಸೆಕ್ಷನ್ ಲೀಡರ್, ಪ್ರಭಾರ ಘಟಕಾಧಿಕಾರಿ ದಿನೇಶ್. ಬಿ, ಕೆ.ಪಿ.ಟಿ ಉದಯ ನಗರ ಅಂಗನವಾಡಿ ಕಾರ್ಯಕರ್ತೆ ಮೋಹಿನಿ, ಪಾಂಡೇಶ್ವರ ಪ್ರಧಾನ ಅಂಚೆಕಛೇರಿಯ ಸಿಬ್ಬಂದಿ ಅನುಸೂಯ.ಪಿ ಯವರನ್ನು ಸನ್ಮಾನ ಕಾರ್ಯಕ್ರಮ ನಡೆಯಿತು.

ಕ್ಲಬ್‌ನ ಅಧ್ಯಕ್ಷ ಅರ್ ಟಿ ಎನ್ ದೇವದಾಸ್ ರಾವ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು