1:02 PM Friday19 - April 2024
ಬ್ರೇಕಿಂಗ್ ನ್ಯೂಸ್
ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ…

ಇತ್ತೀಚಿನ ಸುದ್ದಿ

ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ಮತ್ತೊಂದು ಹಗರಣ ಬೆಳಕಿಗೆ: ಹಾಲಿಗೆ ನೀರಾಯ್ತು, ಈಗ ರಾಸಾಯನಿಕ ಮಿಶ್ರಣ

22/01/2022, 08:42

ಮಂಡ್ಯ(reporterkarnataka.com): ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ. ಹಾಲಿಗೆ ನೀರು ಮಿಶ್ರಣ ಹಗರಣ ಆಯ್ತು, ಇದೀಗ ಹಾಲಿಗೆ ರಾಸಾಯನಿಕ ಬೆರಕೆ ಮಾಡುವುದು ಗೊತ್ತಾಗಿದೆ. ಇದರೊಂದಿಗೆ

ರೈತರಲ್ಲಿ ಹಾಗೂ ಸಾರ್ವಜನಿಕರಲ್ಲಿ ಮನ್‌ಮುಲ್‌ ಮೇಲಿನ ವಿಶ್ವಾಸ ಕಡಿಮೆಯಾಗುತ್ತಿದೆ.

ಕಳೆದ ವರ್ಷವಷ್ಟೇ ಮನ್‌ಮುಲ್‌‌ಗೆ ಸರಬರಾಜು ಆಗುವ ಹಾಲಿಗೆ ನೀರು ಮಿಶ್ರಣವಾಗುತ್ತಿದೆ ಎಂಬ ಹಗರಣ ಬೆಳಕಿಗೆ ಬಂದಿತ್ತು. ಪ್ರಕರಣ ಸಿಐಡಿ ತನಿಖೆಯಲ್ಲಿರುವಾಗಲೇ ಹಾಲಿಗೆ ರಾಸಾಯನಿಕ ಕಲಬೆರಕೆ ಹಗರಣ ಬೆಳಕಿಗೆ ಬಂದಿರುವುದು ರೈತರಲ್ಲಿ ಆತಂಕ ಮೂಡಿದೆ.

ಏನಿದು ಹಾಲಿಗೆ ರಾಸಾಯನಿಕ ಬೆರಕೆ.?: ಪರೀಕ್ಷೆಯಲ್ಲಿ ಹಾಲಿನ ಗುಣಮಟ್ಟ ಹೆಚ್ಚು ತೋರಿಸುವಂತೆ ರಾಸಾಯನಿಕ ಬೆರಕೆ ಮಾಡಲಾಗುತ್ತಿತ್ತು. ಹಾಲಿಗೆ ನೀರು ಹಾಕಿದಾಗ ಕಡಿಮೆ ಕೊಬ್ಬಿನಾಂಶ ತೋರಬಾರದೆಂದು ರಾಸಾಯನಿಕ ಬೆರಕೆ ಮಾಡಲಾಗುತ್ತಿತ್ತು. ಉಪ್ಪಿನಾಂಶದ ರಾಸಾಯನಿಕ ಕಲಬೆರಕೆಯನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಟ್ಯಾಂಕರ್‌ನೊಳಗೆ ಮತ್ತೊಂದು ಬೇಬಿ ಟ್ಯಾಂಕ್ ನಿರ್ಮಿಸಿ ಕೋಟಿ ಕೋಟಿ ಹಣವನ್ನು ಹಾಲಿನ ರೂಪದಲ್ಲಿ ಮನ್‌ಮುಲ್‌ಗೆ ವಂಚಿಸುತ್ತಿದ್ದ ಖತರ್ನಾಕ್ ಗ್ಯಾಂಗ್‌ನ ನಿಜರೂಪ ಬಯಲಾಗಿದೆ.

ಹೇಗೆ ಬೆಳಕಿಗೆ ಬಂತು?: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಹೊನ್ನಗೆರೆ ಡೈರಿಯಿಂದ ಪೂರೈಕೆಯಾಗುತ್ತಿದ್ದ ಹಾಲಿನಲ್ಲಿ ಮೊದಲಿಗೆ ರಾಸಾಯನಿಕ ಮಿಶ್ರಣ ಪತ್ತೆಯಾಗಿದೆ. ಗ್ರಾಮದಲ್ಲಿ ಶೇಖರಣೆಯಾದ ಹಾಲಿಗೆ ನೀರು ಹಾಗೂ ರಾಸಾಯನಿಕ ಬೆರಸಿ ಮನ್‌ಮುಲ್‌ಗೆ ವಂಚನೆ ಮಾಡುತ್ತಿರುವ ಬಗ್ಗೆ ಅಧಿಕಾರಿಗಳಿಗೆ ಅನುಮಾನ ಬಂದಿದೆ. ನಂದಿನಿ ಹಾಲಿನ ಮೇಲೆ ಅನುಮಾನ ಮೂಡುವಂತೆ ವಂಚಕರು ಪ್ಲ್ಯಾನ್ ಮಾಡಿದ್ದಾರೆ. ಪ್ರತಿನಿತ್ಯ 35 ಕ್ಯಾನ್ ಹಾಲು ಸರಬರಾಜು ಮಾಡುತ್ತಿದ್ದ ಕೆ.ಹೊನ್ನಲಗೆರೆ ಡೈರಿಯ ಮೇಲೆ ಅನುಮಾನ ವ್ಯಕ್ತಪಡಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಇದು ಬೆಳಕಿಗೆ ಬಂದಿದೆ. ಇದೀಗ ಕೆ.ಹೊನ್ನಲಗೆರೆ ಡೈರಿಯಲ್ಲಿ ಹಾಲು ಶೇಖರಣೆ ಸ್ಥಗಿತಗೊಳಿಸುವಂತೆ ಮನ್‌ಮುಲ್ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು