12:08 PM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಬದುಕು ಕಟ್ಟಿಕೊಳ್ಳಲು ನೆರವಾದ ಕಾಫಿದೊರೆ ಸಿದ್ದಾರ್ಥ ಗೆ  ಮದುವೆ ಮನೆಯಲ್ಲಿ ನುಡಿ ನಮನ 

27/01/2022, 09:48

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಉದ್ಯೋಗ ನೀಡಿ ಉತ್ತಮ ಬದುಕು ಕಟ್ಟಿಕೊಳ್ಳಲು ಕಾರಣರಾದ ಸಿದ್ದಾರ್ಥ ಹೆಗ್ಗಡೆ ಅವರಿಗೆ ಯುವಕನೊಬ್ಬ ತನ್ನ ಮದುವೆಯ ದಿನ ವೇದಿಕೆಯಲ್ಲಿ ನುಡಿನಮನ ಸಲ್ಲಿಸಿದ್ದಾರೆ.


ಮೂಡಿಗೆರೆ ತಾಲ್ಲೂಕಿನ ನಿಡ್ನಳ್ಳಿ ಸಮೀಪದ ಹೊಳೆಕೂಡಿಗೆಯ ಸಂತೋಷ್ ಹಾಗೂ ಬಾಳೆಹೊನ್ನೂರು ಗಡಿಗೇಶ್ವರದ ಪ್ರಮೀತಾ ಅವರ ವಿವಾಹದ ಹಿನ್ನಲೆಯಲ್ಲಿ ಮದುಮಗ ಸಂತೋಷ್ ಅವರ ಮನೆ ಹೊಳೆಕೂಡಿಗೆಯಲ್ಲಿ ಮಂಗಳವಾರ ಮೆಹಂದಿ ಶಾಸ್ತ್ರ ನಡೆದಿದ್ದು ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಸಿದ್ದಾರ್ಥ  ಅವರ ಭಾವಚಿತ್ರವನ್ನು ಇಟ್ಟು ಪುಷ್ಪ ನಮನ ಹಾಗೂ ನುಡಿನಮನ ವನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮದುಮಗ ಸಂತೋಷ್, ಬಡ ಕುಟುಂಬದಿಂದ ಬಂದ ನನಗೆ ಸಿದ್ದಾರ್ಥ ಹೆಗ್ಗಡೆ ಅವರು ತಮ್ಮ ಸಂಸ್ಥೆಯಲ್ಲಿ ಉದ್ಯೋಗ ಕೊಟ್ಟ ಕಾರಣದಿಂದ ಉತ್ತಮ ಬದುಕು ಕಟ್ಟಿಕೊಳ್ಳಲು ಸಾದ್ಯವಾಯಿತು ಎಂದರು. 


ಬಿಜೆಪಿ ಮುಖಂಡರಾದ ಸಂಜಯ ಗೌಡ, ಪರೀಕ್ಷಿತ್ ಗೌಡ ಮುಂತಾದವರು ಆಗಮಿಸಿ ಸಿದ್ದಾರ್ಥ ಹೆಗ್ಗಡೆ ಅವರ ಭಾವಚಿತ್ರಕ್ಕೆ ನುಡಿನಮನ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು