7:43 AM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ವಿಟಮಿನ್ ‘ಎ’ ಪ್ರಾಮುಖ್ಯತೆ: ಯಾವುದರಲೆಲ್ಲ ಇದು ಸಿಗುತ್ತದೆ?; ಕೊರತೆಯ ಲಕ್ಷಣಗಳೇನು ?

28/01/2022, 23:31

ಮೊಟ್ಟ ಮೊದಲು ಕಂಡುಹಿಡಿದ ವಿಟಮಿನ್ ಅಂದರೆ ವಿಟಮಿನ್ A. ಇದು ಕಣ್ಣಿನ ಆರೋಗ್ಯಕ್ಕೆ ಬೇಕಾದ ಅತೀ ಮುಖ್ಯವಾದ ಅಂಶವಾಗಿದೆ. ಇದು ಸಸ್ಯಾಹಾರ ಹಾಗು ಮಾಂಸಾಹಾರ ಎರಡೂ ಮೂಲಗಳಿಂದ ದೊರೆಯುತ್ತದೆ.

ಮೊಟ್ಟೆ, ಕೋಳಿ ಮಾಂಸ, ಲಿವರ್, ಹಾಲು, ತುಪ್ಪ ,ಬೆಣ್ಣೆ, ಕಾಳುಗಳು , ಹಸಿರು ತರಕಾರಿ, ಕ್ಯಾರಟ್, ಸಿಹಿಗುಂಬಳಕಾಯಿ, ಹಳದಿ ಬಣ್ಣದ ಹಣ್ಣು ಪಪ್ಪಾಯ, ಮಾವಿನಕಾಯಿ, ಫಿಶ್ ಲಿವರ್ ಆಯಿಲ್ ಇವುಗಳಲ್ಲಿ ಹೇರಳವಾಗಿ ವಿಟಮಿನ್ A ಕಂಡು ಬರುತ್ತದೆ.

ಬೇರೆ ಬೇರೆ ಕಾರಣಗಳಿಂದ ಇದರ ಅಂಶದ ಕೊರತೆ  ನಮ್ಮ ದೇಹದಲ್ಲಿ ಕಂಡುಬರುತ್ತದೆ.

* ಜೀರ್ಣನಾಂಗವ್ಯೂಹದಲ್ಲಿನ ತೊಂದರೆಯಿಂದಾಗಿ ನಾವು ಸೇವಿಸಿದ ವಿಟಮಿನ್ಅನ್ನು ನಮ್ಮ ದೇಹ ಸರಿಯಾಗಿ ಹೀರಿಕೊಳ್ಳದೇ ಇರುವುದರಿಂದ

* ಲಿವರ್ /ಪಿತ್ತಜನಕಾಂಗದ ಖಾಯಿಲೆ

* ಗರ್ಭಿಣಿಯರಲ್ಲಿ, ಬೆಳೆಯುವ ಮಕ್ಕಳಲ್ಲಿ ಅಧಿಕ  ಬೇಡಿಕೆ  ಇದ್ದಾಗ ಸರಿಯಾಗಿ ಆಹಾರದಲ್ಲಿ ಪೂರೈಕೆ ಆಗದೇ ಇರುವುದರಿಂದ ವಿಟಮಿನ್ A ಕೊರತೆ ಉಂಟಾಗುತ್ತದೆ.

ಲಕ್ಷಣಗಳು ಏನು?:

ಮೊತ್ತ ಮೊದಲಿಗೆ ಕಂಡು ಬರುವ ಲಕ್ಷಣ ಎಂದರೆ ಇರುಳುಗಣ್ಣು, ಮಂದ ಬೆಳಕಿನಲ್ಲಿ ಸರಿಯಾಗಿ ಕಾಣಿಸದೇ ಇರುವುದು, ಒಣ ಚರ್ಮ, ಮೂಳೆಗಳ ಸರಿಯಾದ ಬೆಳವಣಿಗೆ ಆಗದೆ ಮಕ್ಕಳಲ್ಲಿ ಬೆಳವಣಿಗೆ ಕುಂಠಿತವಾಗುವುದು, ರೋಗ ನಿರೋಧಕ ಶಕ್ತಿ ಕಡಿಮೆ ಆಗಿ ಸೋಂಕು  ಸುಲಭವಾಗಿ ತಗಲುವುದು , ನರಗಳ ಕಾರ್ಯಕ್ಷಮತೆ ತಗ್ಗುವುದು, ಕಣ್ಣಿನ ಬಿಳಿಭಾಗಕ್ಕೆ ಸಂಬಂಧಿಸಿದ ತೊಂದರೆ, ಕೆಲವೊಮ್ಮೆ ಶಾಶ್ವತವಾಗಿ ದೃಷ್ಟಿಹೀನರನ್ನಾಗಿ ಮಾಡಬಹುದು.

RDA ಪ್ರಕಾರ ಒಬ್ಬ ಆರೋಗ್ಯವಂತನಿಗೆ, ಮಗುವಿನಿಂದ ಹಿಡಿದು ವಯಸ್ಕರವರೆಗೆ ದಿನವೊಂದಕ್ಕೆ ಸುಮಾರು 350ರಿಂದ 950 ಮೈಕ್ರೋ ಗ್ರಾಂನಷ್ಟು ವಿಟಮಿನ್ A ಆಹಾರದ ಮೂಲಕ ಸೇವನೆ ಮಾಡುವುದದಿಂದ ಈ ಎಲ್ಲಾ ತೊಂದರೆಗಳು ಬಾರದಂತೆ ತಡೆಗಟ್ಟಬಹುದು. ಹಾಗೆಂದು ಅತಿಯಾದ ಸೇವನೆಯೂ ಸಹ ತೊಂದರೆಯನ್ನ ಉಂಟುಮಾಡಬಹುದು. ಆದ್ದರಿಂದ ದೇಹಕ್ಕೆ ಅನುಗುಣವಾಗಿ ಸರಿಯಾದ ಪ್ರಮಾಣವನ್ನು ಸೇವನೆ ಮಾಡುವುದು ಒಳಿತು.

✍️ ಡಾ. ಭವ್ಯ ಶೆಟ್ಟಿ

ಹೋಮಿಯೋಪತಿ ವೈದ್ಯರು

ಶ್ರೀ ಗುರು ಹೋಮಿಯೋಪತಿ ಕ್ಲೀನಿಕ್ ಬೆಳುವಾಯಿ

ಇತ್ತೀಚಿನ ಸುದ್ದಿ

ಜಾಹೀರಾತು