9:45 PM Saturday18 - May 2024
ಬ್ರೇಕಿಂಗ್ ನ್ಯೂಸ್
ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ…

ಇತ್ತೀಚಿನ ಸುದ್ದಿ

ಅರಣ್ಯ ಇಲಾಖೆಯ ಮಹಿಳಾ ಅಧಿಕಾರಿ ವರ್ಗಾವಣೆ: ವಿಜಿಲೆನ್ಸ್ ಕಮಿಟಿಯಿಂದ ಸೂಕ್ತ ತನಿಖೆಗೆ ಮಾಜಿ ಸಚಿವ ಖಾದರ್ ಒತ್ತಾಯ

29/01/2022, 22:40

ಮಂಗಳೂರು(reporterkarnataka.com): ರಕ್ಷಿತಾರಣ್ಯದಿಂದ ಯಾವುದೇ ಭಯವಿಲ್ಲದೇ ಮರ ಕಡಿದುಕೊಂಡು ಹೋದವರನ್ನು ತಡೆಯಲು ಯತ್ನಿಸಿದ ಅಧಿಕಾರಿಯನ್ನೇ ವರ್ಗಾವಣೆ ಮಾಡಿರುವುದು ಅತ್ಯಂತ ಗಂಭೀರವಾದ ವಿಚಾರ. ಈ ಬಗ್ಗೆ ರಾಜ್ಯ ಸರಕಾರಕ್ಕೆ ಪತ್ರ ಬರೆದು ವಿಜಿಲೆನ್ಸ್ ಕಮಿಟಿಯಿಂದ ಸಂಪೂರ್ಣವಾಗಿ ತನಿಖೆ ಮಾಡಬೇಕೆಂದು ಆಗ್ರಹಿಸುತ್ತೇನೆ ಎಂದು ಶಾಸಕ ಯು.ಟಿ.ಖಾದರ್ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಿಸರ್ವ್ ಫಾರೆಸ್ಟ್ ನಿಂದ ವ್ಯಕ್ತಿಯೋರ್ವರು ನೂರಾರು ಮರ ಕಡಿದು ಸಾಗಿಸುತ್ತಿರುವಾಗ ವಾಹನಕ್ಕೆ ಮುಟ್ಟುಗೋಲು ಹಾಕಲಾಗಿದೆ. ಈ ಸಂದರ್ಭ ಆತನ ಬಿಡುಗಡೆಗೆ ರಾಜಕೀಯ ಒತ್ತಡ ತಂದಾಗ, ಬಿಡುಗಡೆ ಮಾಡದ ವಲಯ ಅರಣ್ಯಾಧಿಕಾರಿಯನ್ನು ವರ್ಗಾವಣೆ ಮಾಡಿರುವ ಮಾಹಿತಿ ಇದೆ. ರಿಸರ್ವ್ ಫಾರೆಸ್ಟ್ ನಿಂದ ಒಬ್ಬರು ಯಾವುದೇ ಭಯವಿಲ್ಲದೇ ಮರ ಕಡಿದುಕೊಂಡು ಹೋಗುತ್ತಾರೆ, ಅದನ್ನು ತಡೆಯಲು ಯತ್ನಿಸಿದ ಅಧಿಕಾರಿಯನ್ನು ವರ್ಗಾವಣೆ ಮಾಡುತ್ತಾರೆ ಅಂದ್ರೆ ಇದು ಬಹಳ ಗಂಭೀರವಾದ ವಿಚಾರ. ಈ ಬಗ್ಗೆ ರಾಜ್ಯ ಅರಣ್ಯ ವಿಜಿಲೆನ್ಸ್ ಸ್ಕ್ಯಾಡ್ ನಿಂದ ಸೂಕ್ತ ತನಿಖೆಗೆ ಆಗ್ರಹಿಸಿ ಪತ್ರ ಬರೆಯುವುದಾಗಿ ಖಾದರ್ ನುಡಿದರು.

ಉಡುಪಿ ಅರಣ್ಯ ಸಂಚಾರಿ ದಳದಲ್ಲಿ ವಲಯ ಅರಣ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂಧ್ಯಾ ಎಂಬವರನ್ನು ಶಾಸಕ ಹರೀಶ್ ಪೂಂಜ, ವಿನಾಕಾರಣ ರಾಜಕೀಯ ದ್ವೇಷದಿಂದ ಬೀದರ್ ಗೆ ವರ್ಗಾಯಿಸಿರುವ ಬಗ್ಗೆ ಆರೋಪವಿದೆ. ಈ ಸಂಬಂಧ ಅಧಿಕಾರಿ ಸಂಧ್ಯಾ ಬಿಲ್ಲವ ಸಂಘಕ್ಕೆ ದೂರು ನೀಡಿರುವ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, `ತಾಲೂಕಿನ ಅಕ್ರಮ ಮರಗಳ ಸಾಗಾಟಗಾರರ ಮರಮಟ್ಟು ಹಾಗೂ ವಾಹನ ಇಲಾಖೆ ವಶಪಡಿಸಿದೆ. ಮೇಲಿನ ಅಧಿಕಾರಿಗಳ ಆದೇಶದ ಮೇರೆಗೆ ಅಕ್ರಮ ಮರ ದಾಸ್ತಾನುಗಳಿಗೆ ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದೇನೆ. ಆದರೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವೈಯಕ್ತಿಕ ದ್ವೇಷದಿಂದ, ಅಕ್ರಮ ಮರಗಳ್ಳರಿಗೆ ಅನುಕೂಲ ಮಾಡಿಕೊಡುವ ಎದ್ದೇಶದಿಂದ ದ ಬೀದರ್ ಗೆ

ವರ್ಗಾಯಿಸಿರುತ್ತಾರೆ’ ಎಂಬುದಾಗಿ ಆರೋಪಿಸಿದ್ದು, ನ್ಯಾಯ ನೀಡುವಂತೆ ಕೋರಿದ್ದಾರೆ. ಇದರೊಂದಿಗೆ ಅಧಿಕಾರಿಯನ್ನು ವರ್ಗಾವಣೆ ಮಾಡುವಂತೆ ಕೋರಿ ಶಾಸಕ ಹರೀಶ್ ಪೂಂಜ ಸಿಎಂಗೆ ಬರೆದ ಪತ್ರ ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು