7:31 PM Saturday18 - May 2024
ಬ್ರೇಕಿಂಗ್ ನ್ಯೂಸ್
ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ…

ಇತ್ತೀಚಿನ ಸುದ್ದಿ

ಖ್ಯಾತ ಪತ್ರಕರ್ತ ಸುರೇಶ್ ಬೆಳಗಜೆ ಪುತ್ರನ ಕಲ್ಯಾಣ ವೈಭವ: ಕೋವಿಡ್ ಶಿಷ್ಟಾಚಾರದಲ್ಲಿ ಸರಳವಾಗಿ ನಡೆದ ವಿವಾಹ ಮಹೋತ್ಸವ

30/01/2022, 21:54

ಮಂಗಳೂರು(reporterkarnataka.com) ಹಿರಿಯ ಪತ್ರಕರ್ತ ಸುರೇಶ್ ಬೆಳಗಜೆ ಹಾಗೂ ಉಷಾ ಬೆಳಗಜೆ ಅವರ ಪುತ್ರ ಸುಕೇಶ್ ಬೆಳಗಜೆ ಅವರ ವಿವಾಹ ಶ್ರೀರಂಜಿತಾ ಅವರ ಜತೆ ಬಂಟ್ವಾಳದಲ್ಲಿ ಮಾಣಿಯ ಜನಭವನದಲ್ಲಿ ನಡೆಯಿತು.

ಸುರೇಶ್ ಬೆಳಗಜೆ ಅವರು ಪ್ರಜಾವಾಣಿಯಲ್ಲಿ ಸುಮಾರು 23 ವರ್ಷ, ಉದಯವಾಣಿಯಲ್ಲಿ 9 ವರ್ಷ, ಸುದ್ದಿ ಬಿಡುಗಡೆಯಲ್ಲಿ ಒಂದು ವರ್ಷ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದರು. ಹಾಗೆ ಸಾಕಷ್ಟು ಕಿರಿಯ ಪತ್ರಕರ್ತರಿಗೆ ಗುರುವಿನ ಸ್ಥಾನದಲ್ಲಿ ನಿಂತು ಮಾರ್ಗದರ್ಶನ ಮಾಡಿದ್ದರು.

ಸುರೇಶ ಬೆಳಗಜೆ-  ಉಷಾ ಬೆಳಗಜೆ ಅವರ ಪುತ್ರ ಸುಕೇಶ್ ಬೆಳಗಜೆ ಅವರನ್ನು ವರಿಸಿದ ವಧು ಶ್ರೀರಂಜಿತಾ ಅವರು ಮಂಗಳೂರು ಮಹಾನಗರ ಪಾಲಿಕೆಯ ನಿವೃತ್ತ ಅಧಿಕಾರಿ ಸತ್ಯನಾರಾಯಣ ಭಟ್ ಮತ್ತು ಪಾರ್ವತಿ ದಂಪತಿಯ ಪುತ್ರಿ.

ಮದುವೆ ಸಮಾರಂಭ ಜನವರಿ 26ರಂದು ನಡೆಯಿತು. ಕೋವಿಡ್ ಕಾರಣಕ್ಕೆ ನಿಗದಿತ ಮಿತಿಯಲ್ಲಿ ಆಹ್ವಾನಪತ್ರ ನೀಡಿದ್ದು, ಕಡಿಮೆ ಜನರ ಉಪಸ್ಥಿತಿಯಲ್ಲಿ ವಿವಾಹ ನೆರವೇರಿತು. ಬಳಿಕ ರಾತ್ರಿ ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಬೆಳಗಜೆ ಮನೆಯಲ್ಲಿ ವಧೂ ಗೃಹಪ್ರವೇಶವೂ ಕೋವಿಡ್ ಶಿಷ್ಟಾಚಾರದೊಂದಿಗೆ ನೆರವೇರಿತು.

ಇತ್ತೀಚಿನ ಸುದ್ದಿ

ಜಾಹೀರಾತು