10:34 AM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

‘ಏನ್ಷಿಯೆಂಟ್ ಸೀಕ್ರೆಟ್ಸ್ ಟು ರಿವರ್ಸ್ ಡಯಾಬಿಟೀಸ್’ ಕೃತಿ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ

05/02/2022, 20:49

ಬೆಂಗಳೂರು(reporterkarnataka.com): ಮಧುಮೇಹ ನಿವಾರಣೆಗಾಗಿ ಪ್ರಾಚೀನ ಆಯುರ್ವೇದ ಚಿಕಿತ್ಸಾ ಪದ್ಧತಿಯ ಅಂಶಗಳನ್ನು ಒಳಗೊಂಡಿರುವ ಮಹತ್ವದ ಕೃತಿಯೊಂದನ್ನು ಹೊರತರಲಾಗಿದೆ. ಖ್ಯಾತ ಆಯುರ್ವೇದ ತಜ್ಞ ಡಾ. ಮೃತ್ಯುಂಜಯ ಸ್ವಾಮಿ ಅವರು ಬರೆದಿರುವ ‘ಏನ್ಷಿಯೆಂಟ್ ಸೀಕ್ರೆಟ್ಸ್ ಟು ರಿವರ್ಸ್ ಡಯಾಬಿಟೀಸ್’ ಕೃತಿ ಇದಾಗಿದ್ದು, ಈ ಕೃತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಬಿಡುಗಡೆ ಮಾಡಿದರು.

ಮಧುಮೇಹ ರೋಗಕ್ಕೆ ತುತ್ತಾಗಿರುವವರು, ಪ್ರಿ ಡಯಾಬಿಟಿಕ್‌ ಹಾಗೂ ಇನ್ಸುಲಿನ್‌ ಚಿಕಿತ್ಸೆಯಲ್ಲಿರುವವರಿಗೆ ಹೇಗೆ ಮಧುಮೇಹವನ್ನು ನಿವಾರಿಸಬಹುದು ಎನ್ನುವ ಅತ್ಯಂತ ಮಹತ್ವದ ಸಂಗತಿಗಳು ಈ ಕೃತಿಯಲ್ಲಿ ಅಡಗಿವೆ. 

ಕೃತಿಯ ಲೇಖಕ ಡಾ. ಮೃತ್ಯುಂಜಯ ಸ್ವಾಮಿ ಮಾತನಾಡಿ, ‘ಭಾರತ ದೇಶ ಮಧುಮೇಹದ ರಾಜಧಾನಿಯಾಗುವತ್ತ ದಾಪುಗಾಲು ಹಾಕುತ್ತಿದೆ. ಬದಲಾದ ಜೀವನಶೈಲಿಯಿಂದ ಬರುವ ಪ್ರಮುಖ ರೋಗಗಳಲ್ಲಿ ಮಧುಮೇಹ ಕೂಡ ಒಂದು. ಈ ರೋಗಕ್ಕೆ ತುತ್ತಾಗುವವರು ತಾವು ಸಾಯುವವರೆಗೂ

ಮಾತ್ರೆಗಳನ್ನು ನುಂಗುತ್ತಲೇ ಇರಬೇಕು ಎನ್ನುವ ಸ್ಥಿತಿಯಾಗಿದೆ. ಆಧುನಿಕ ವೈದ್ಯಶಾಸ್ತ್ರದ ಪ್ರಕಾರ ಮಧುಮೇಹವನ್ನು ನಿವಾರಿಸಲು ಸಾಧ್ಯವಿಲ್ಲ. ಕೇವಲ ಅದನ್ನು ನಿಭಾಯಿಸಲು ಮಾತ್ರ ಸಾಧ್ಯ ಎನ್ನುವ ಮಾತುಗಳು ಜನಜನಿತ. ಆದರೆ, ನಮ್ಮ ಪಾರಂಪರಿಕ ಔಷಧ ಪದ್ಧತಿಯಲ್ಲಿ ಮಧುಮೇಹ ರೋಗವನ್ನು ಕೇವಲ ನಿಭಾಯಿಸುವುದಷ್ಟೇ ಅಲ್ಲ ದೇಹವನ್ನು ಮಧುಮೇಹದಿಂದ ಮುಕ್ತಗೊಳಿಸಹುದು ಎನ್ನುವ ಅಂಶಗಳು ಅಡಕವಾಗಿವೆ. ಆ ಅಂಶಗಳ ಆಧಾರದಲ್ಲಿ ಪುಸ್ತಕವನ್ನು ಬರೆಯಲಾಗಿದೆ’ ಎಂದರು.

ಪುಸ್ತಕವನ್ನು ಲೋಕಾರ್ಪಣೆಗೊಳಿಸಿದ ಹರಿಹರ ವೀರಶೈವ ಲಿಂಗಾಯಿತ ಪಂಚಮಸಾಲಿ ಜಗದ್ಗುರು ಪೀಠದ ಪೀಠಾಧೀಕಾರಿ ಶ್ರೀ ವಚನಾನಂದ ಸ್ವಾಮೀಜಿ ಅವರು ಮಾತನಾಡಿ, ಜೀವನ ಶೈಲಿ ರೋಗಗಳು ನಮ್ಮ ಯುವ ಜನಾಂಗದ ಬಹುಭಾಗದ ಜನರನ್ನು ಅನಾರೋಗ್ಯಕ್ಕೀಡು ಮಾಡುತ್ತಿವೆ. ಇದರಲ್ಲಿ ಹೆಚ್ಚು ಸಮಸ್ಯೆ ಉಂಟುಮಾಡುತ್ತಿರುವುದು ಮಧುಮೇಹ. ಈ ರೋಗಕ್ಕೆ ತುತ್ತಾಗಿರುವವರು ತಮ್ಮ ಜೀವನ ಶೈಲಿಯಲ್ಲಿ ಬದಲಾವಣೆ ಮಾಡಿಕೊಂಡಲ್ಲಿ ಅನೇಕ ಅನುಕೂಲಗಳನ್ನು ನಾವು ಯೋಗಭ್ಯಾಸದಲ್ಲಿ ಕಂಡಿದ್ದೇವೆ. ಈ ಪುಸ್ತಕದಲ್ಲಿ ಅಳವಡಿಸಿರುವಂತಹ ಪ್ರಾಚೀನ ಆರೋಗ್ಯ ಪದ್ದತಿಗಳ ಅಂಶಗಳು ಹಾಗೂ ಯೋಗಭ್ಯಾಸದಂತಹ ಅಳವಡಿಕೆಗಳು ಬಹಳ ಉಪಯೋಗ. ಸ್ವತಃ ಆಯುರ್ವೇದ ವೈದ್ಯರಾಗಿರುವ ಡಾ. ಮೃತ್ಯುಂಜಯ ಅವರು ತಮ್ಮ ಪುಸ್ತಕದಲ್ಲಿ ತಾವು ಆಳವಾಗಿ ಆಧ್ಯಯನ ಮಾಡಿದ ಅಂಶಗಳನ್ನು ನಮೂದಿಸಿದ್ದಾರೆ ಎಂದು ಹೇಳಿದರು.

ಅತಿ ಹೆಚ್ಚು ಮಾರಾಟವಾಗುತ್ತಿರುವ ಕೃತಿ: ಡಾ. ಮೃತ್ಯುಂಜಯ ಸ್ವಾಮಿ ಅವರ ಮೊದಲ ಪುಸ್ತಕ ‘ಏನ್ಷಿಯೆಂಟ್ ಸೀಕ್ರೆಟ್ ಆಫ್ ಹೆಲ್ದಿ ಲಿವಿಂಗ್’ ಕೃತಿಯು ಆಮೆಜಾನ್‌ನಲ್ಲಿ ಅತಿ ಹೆಚ್ಚು ಮಾರಾಟವಾಗುತ್ತಿರುವ ಕೃತಿಗಳಲ್ಲಿ ಒಂದಾಗಿದೆ. ಈ ಪುಸ್ತಕದಲ್ಲಿ ಮಧುಮೇಹವನ್ನು ನಿವಾರಿಸುವುದು, ಅದನ್ನು ಸುಲಭ ವಿಧಾನದಲ್ಲಿ ನಿಭಾಯಿಸುವುದು. ಹಾಗೆಯೇ ಅದಕ್ಕೆ  ಬೇಕಾದ ಆಹಾರ ಪದ್ಧತಿ ಜೀವನ ಶೈಯಲ್ಲಿ ಆಗಬೇಕಾದ ಮಾರ್ಪಾಡು ಹೀಗೆ ಹತ್ತು ಹಲವು ಅಂಶಗಳನ್ನು ವಿಸ್ತೃತವಾಗಿ ಚರ್ಚಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು