2:29 AM Saturday4 - May 2024
ಬ್ರೇಕಿಂಗ್ ನ್ಯೂಸ್
ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ…

ಇತ್ತೀಚಿನ ಸುದ್ದಿ

ಸಂಸ್ಕೃತಿ – ಪರಂಪರೆಯ ಪ್ರತೀಕ: ವೈಭವದ ಮಂಗಳೂರು ರಥೋತ್ಸವ ಸಂಪನ್ನ

08/02/2022, 13:04

ಚಿತ್ರ : ಮಂಜು ನೀರೇಶ್ವಾಲ್ಯ
ಮಂಗಳೂರು(reporterkarnataka.com):
ಶ್ರೀ ಮಂಗಳಾದೇವಿಯ ನೆಲೆ ಬೀಡಾದ ಮಂಗಳೂರು ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಪಾಲಿಗೂ ಸಾಧನೆಯ ಕ್ಷೇತ್ರ. ಇಲ್ಲಿನ ರಥಬೀದಿಯ ಶ್ರೀ ವೆಂಕಟರಮಣ ದೇವಳ ಸಮಾಜದ ಧರ್ಮ ಪೀಠಗಳಲ್ಲೊಂದಾದ ಶ್ರೀ ಕಾಶೀಮಠ ಸಂಸ್ಥಾನ್ ವಾರಾಣಸಿಯ ಒಂದು ಕಣ್ಣಿನಂತೆ  ಮತ್ತು ದೇಶದ ಪ್ರಮುಖ ದೇವಾಲಯ ಎಂದು ಬಿಂಬಿತವಾಗಿದೆ ಕಾಲ ಉರುಳಿದ ಪ್ರಭಾವ ಇಲ್ಲಿನ ವಾರ್ಷಿಕ ರಥೋತ್ಸವ ಒಂದು. ಸಮಗ್ರ  ಭಜಕ ವೃಂದದವರಿಗೆ ಅವರ್ಣನೀಯ ಪುಳಕೋತ್ಸವ, ಧನ್ಯತೆಯಿಂದ ಬೀಗುವ  ಸಂದರ್ಭ.

ಪ್ರತಿ ಮಾಘ ಮಾಸದ ಶುದ್ಧ ತದಿಗೆಯಂದು ಆರಂಭವಾಗಿ ಅಷ್ಟಮಿಯಂದು ಮುಕ್ತಾಯಗೊಳ್ಳುವ ರಥೋತ್ಸವ ಕಾರ್ಯಕ್ರಮದಲ್ಲಿ ರಥಸಪ್ತಮಿಯ ಶುಭದಿನ ದಂದು  ಆ ಬ್ರಹ್ಮರಥೋತ್ಸವ ನಡೆಯುವುದು ವಾಡಿಕೆ. ಮಂಗಳೂರು ರಥ ಎಂದು ಅಭಿದಾನಗೈದಿರುವ ಶ್ರೀ ರಥೋತ್ಸವ ಧಾರ್ಮಿಕ ವಿಧಿ ಆಚರಣೆಗೆ ಮಾತ್ರ ಸೀಮಿತಗೊಳ್ಳದ ಲೌಕಿಕ-ಪಾರಲೌಕಿಕ ಸಾಮಾಜಿಕ, ಸೌಹಾರ್ದತೆಗಳನ್ನೊಳಗೊಂಡು ಸಂಸ್ಕೃತಿ – ಪರಂಪರೆಯ ಕೊಂಡಿಯಾಗಿ ಅನುಸೂತ್ರವಾಗಿ ಮುಂದುವರಿದು ಭಾವೀ ಪೀಳಿಗೆಗೆ ವರ್ಗಾಯಿಸುವ ಸಂಪ್ರದಾಯಗಳ ಹಿನ್ನೆಲೆಯ ಮಹಾಪರ್ವ ಮತ್ತು ದಕ್ಷಿಣ ಭಾರತದ ಮಹೋತ್ಸವಗಳ ಪೈಕಿ ಒಂದು ಪ್ರಮುಖ ಮಹೋತ್ಸವವಾಗಿ ರೂಪುಗೊಂಡಿದೆ . ಶ್ರೀ ಕಾಶಿ ಮಠದ ಪೀಠಾಧಿಪತಿ ಶ್ರೀಮದ್ ಸಂಯಮೀಂದ್ರತೀರ್ಥ ಸ್ವಾಮೀಜಿಗಳವರ ಈ ಬಾರಿಯ ಉಪಸ್ಥಿತಿ ರಥೋತ್ಸವವನ್ನು ಚಂದಗಾಣಿಸಲು ಸಂಭ್ರಮಿಸಲು ಕಾರಣವಾಗುತ್ತದೆ.

ಈ ಬಾರಿ 201ನೇ ವರ್ಷಾಚರಣೆಯಲ್ಲದೆ ನೂತನ ಬ್ರಹ್ಮರಥದಲ್ಲಿ ರಥೋತ್ಸವ ದೇಶ ವಿದೇಶಗಳಿಂದ ಸಹಸ್ರಾರು ಭಜಕರು ಪಾಲ್ಗೊಂಡು ಪುನೀತರಾದರು . ಶ್ರೀ ದೇವಳದ ಮೊಕ್ತೇಸರರಾದ ಸಿ. ಎಲ್. ಶೆಣೈ , ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ , ಕೊಡುಗೈ ದಾನಿ ಪಿ . ದಯಾನಂದ ಪೈ , ಮುಂಡ್ಕುರ್ ರಾಮದಾಸ್ ಕಾಮತ್ , ಮಂಗಳೂರು ದಕ್ಷಿಣ ಶಾಸಕ ಡಿ . ವೇದವ್ಯಾಸ್ ಕಾಮತ್ ಉಪಸ್ಥಿತರಿದ್ದರು 

ಇತ್ತೀಚಿನ ಸುದ್ದಿ

ಜಾಹೀರಾತು