1:09 PM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಭಗವಾನ್ ಬಾಹುಬಲಿ ಬಗ್ಗೆ ವಿವಾದಾತ್ಮಕ ಹೇಳಿಕೆ: ಅಥಣಿ ಜೈನ ಸಮಾಜದ ಮುಖಂಡರಿಂದ ಖಂಡನೆ

10/02/2022, 15:19

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ವಿಶ್ವದ ಅದ್ಭುತಗಳಲ್ಲೊಂದಾದ ಶ್ರವಣಬೆಳಗೊಳದ ಏಕ ಶಿಲಾಮೂರ್ತಿ ಭಗವಾನ ಬಾಹುಬಲಿ ಸ್ವಾಮಿಯ ಬಗ್ಗೆ, ಜೈನ ಧರ್ಮದ ಬಗ್ಗೆ ಅಯೂಬ್ ಖಾನ್ ವಿವಾದಾತ್ಮಕ ಹೇಳಿಕೆ ನೀಡಿರುವುದನ್ನು ಅಥಣಿ ಜೈನ ಸಮಾಜ ಖಂಡಿಸಿದೆ. 


ಸಮಾಜದಲ್ಲಿ ಸಾಮರಸ್ಯ ಕದಡುವ ಇಂತಹ ಹೇಳಿಕೆ ನೀಡಿದವರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಅಥಣಿ ಜೈನ ಸಮಾಜದ  ಒತ್ತಾಯಿಸಿದರು.

ಜೈನ ಸಮಾಜದ ಬುಧವಾರ ತಹಶೀಲ್ದಾರ್ ದುಂಡಪ್ಪ ಕೋಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಿ ನಂತರ ಅಥಣಿ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಕುಮಾರ್ ಹಾಡ್ಕಾರ ಅವರಿಗೆ ದೂರು ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. 

ಒಂದು ಧರ್ಮದ ಭಾವನೆಗಳ ಹಾಗೂ ನಮ್ಮ ದೇಶದ ಕೀರ್ತಿಯ ಕಳಸವಾಗಿರುವ ಗೊಮ್ಮಟೇಶನಿಗೆ ಬಟ್ಟೆ ಧರಿಸುವ ಬಗ್ಗೆ ಹೇಳಿಕೆ ನೀಡಿರುವುದು. ಜೈನ ಧರ್ಮಿಯರ ಭಾವನೆಗಳಿಗೆ ಧಕ್ಕೆ ತಂದಿರುತ್ತದೆ.  ಆಯೂಬ್ ಖಾನ್ ವಿರುದ್ದ ಶಿಸ್ತಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಜೈನ ಸಮಾಜದ ಮುಖಂಡ ರಾಜು ನಾಡಗೌಡ ಮಾತನಾಡಿ, ನಮ್ಮ ಜೈನ ಧರ್ಮದ ಆರಾಧ್ಯ ದೇವರಾದ ಭಗವಾನ ಬಾಹುಬಲಿ ಸ್ವಾಮಿಯ ಕುರಿತು ಮೈಸೂರಿನ  ಅಯೂಬ್ ಖಾನ್ ಎಂಬ ಮುಸ್ಲಿಮ್ ವ್ಯಕ್ತಿ ಅವಹೇಳನಕಾರಿಯಾಗಿ ಖಾಸಗಿ ಸುದ್ದಿವಾಹಿನಿಯೊಂದರಲ್ಲಿ ಮಾತನಾಡಿರುವದು ಜೈನ ಧರ್ಮಿಯರ ಭಾವನೆಗಳಿಗೆ ಧಕ್ಕೆ ಉಂಟುಮಾಡಿದೆ. ಇಂತಹ ಘಟನೆಗಳು ಮರುಕಳಿಸಬಾರದು  ಮತ್ತು ಈ ರೀತಿ ಹೇಳಿಕೆ ನೀಡಿದ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ನ್ಯಾಯವಾದಿ ಕಲ್ಲಪ್ಪ ವಣಜೋಳ ಮಾತನಾಡಿ ಬಾಹುಬಲಿ ಮೂರ್ತಿಗೆ  ಚಡ್ಡಿ ಹಾಕಬೇಕು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ ಅಯೂಬ್ ಖಾನ್  ವಿರುದ್ಧ  ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಆತನ ವಿರುದ್ಧ  ಅಥಣಿ ಪೊಲೀಸ್ ಠಾಣೆಯಲ್ಲಿ ನೋವು ದೂರು ನೀಡಿದ್ದೇವೆ. ರಾಜ್ಯಾದ್ಯಂತ ಈ ವಿವಾದಾತ್ಮಕ ಹೇಳಿಕೆಯನ್ನು ಜೈನ ಮುಖಂಡರು ಖಂಡಿಸಿದ್ದಾರೆ.  ರಾಜ್ಯ ಸರ್ಕಾರ ಅಯೂಬ್ ಖಾನ್  ವಿರುದ್ಧ  ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.


ಈ ವೇಳೆ  ಜೈನ ಸಮಾಜದ ಮುಖಂಡರಾದ ಅರುಣ್ ಯಲಗುದ್ರಿ, ಅಮರ ದುರ್ಗಣ್ಣವರ, ದೀಪಕ್ ಕಡೋಲಿ, ಅಶೋಕ ದಾನಗೌಡರ, ಅಪ್ಪಾಸಾಬ ಪಾಟೀಲ, ಅಶೋಕ ಪಡನಾಡ, ರಾಜೇಂದ್ರ ಪಾಟೀಲ್, ಶ್ರೀಕಾಂತ್ ಅಸ್ಕಿ, ಪುಷ್ಪಕ ಪಾಟೀಲ, ವಿದ್ಯಾಧರ ಡುಮ್ಮನವರ ,  ಅಮೂಲ ಕಾಂತೆ, ರಾಘವೇಂದ್ರ ಹಳಿಂಗಳಿ, ನೇಮಿನಾಥ ನಂದಗಾವ, ಬಸಗೌಡ ಮುಗ್ಗನವರಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು