9:46 AM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಅತ್ಯಧಿಕ ಮಾದಕ ವಸ್ತುಗಳ ಬಳಕೆ: ಕೇಂದ್ರ ಸರಕಾರದ ಪಟ್ಟಿಯಲ್ಲಿ ಉಡುಪಿ, ಕೊಡಗು ಸೇರಿ ರಾಜ್ಯದ 6 ಜಿಲ್ಲೆ

12/02/2022, 12:07

ಹೊಸದಿಲ್ಲಿ(reporterkarnataka.com): ಮಾದಕ ವಸ್ತುಗಳನ್ನು ಅತ್ಯಧಿಕವಾಗಿ ಬಳಕೆ ಮಾಡುತ್ತಿರುವ 272 ಜಿಲ್ಲೆಗಳನ್ನು ಕೇಂದ್ರ ಸರಕಾರ ಪಟ್ಟಿ ಮಾಡಿದ್ದು, ಇದರಲ್ಲಿ ಕೊಡಗು, ಉಡುಪಿ ಸೇರಿದಂತೆ ಕರ್ನಾಟಕದ ಆರು ಜಿಲ್ಲೆಗಳು ಸೇರಿವೆ.

ಬಿಜೆಪಿಯ ಕೆ.ಸಿ.ರಾಮಮೂರ್ತಿ ಅವರು ಕೇಳಿದ ಪ್ರಶ್ನೆಗೆ ರಾಜ್ಯಸಭೆಯಲ್ಲಿ ಉತ್ತರಿಸಿರುವ ಕೇಂದ್ರದ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಅವರು ಈ ವಿಷಯ ತಿಳಿಸಿದ್ದಾರೆ.

ದೇಶದ 272 ಜಿಲ್ಲೆಗಳನ್ನು ಅತ್ಯಧಿಕ ಮಾದಕವಸ್ತು ಬಳಸುವ ಜಿಲ್ಲೆಗಳೆಂದು ಪಟ್ಟಿ ಮಾಡಲಾಗಿದ್ದು, ಇದರಲ್ಲಿ ಕರ್ನಾಕರದ ಬೆಂಗಳೂರು, ಕೋಲಾರ, ಮೈಸೂರು, ಕೊಡಗು, ಉಡುಪಿ ಮತ್ತು ರಾಮನಗರ ಜಿಲ್ಲೆಗಳೂ ಸೇರಿವೆ. ಈ ಜಿಲ್ಲೆಗಳಲ್ಲಿ ‘ನಶೆ ಮುಕ್ತ ಭಾರತ ಅಭಿಯಾನ’ ಜಾರಿಗೊಳಿಸಲಾಗುತ್ತಿದೆ ಎಂದು ಸಚಿವರು ವಿವರಿಸಿದ್ದಾರೆ.

ನಶೆ ಮುಕ್ತ ಭಾರತ ಅಭಿಯಾನದಡಿ ಮಾದಕವಸ್ತು ವ್ಯಸನಿಗಳನ್ನು ಗುರುತಿಸಿ ಸ್ವಯಂಸೇವಕರು ಸಮಾಲೋಚನೆ ನಡೆಸಲಿದ್ದು, ಅವರನ್ನು ವ್ಯಸನ ಮುಕ್ತರನ್ನಾಗಿಸಲು ಒತ್ತು ನೀಡುವರು. ಈ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸೇವಾ ಸಂಸ್ಥೆಗಳೂ ಈ ಕಾರ್ಯಕ್ಕೆ ನೆರವಾಗಲಿದ್ದು, ಸಹಜ ಜೀವನಕ್ಕೆ ಮರಳುವಂತೆ ವ್ಯಸನಿಗಳಿಗೆ ಚಿಕಿತ್ಸೆ ನೀಡುವುದರೊಂದಿಗೆ ಅವರನ್ನು ಸಮಾಜದ‌ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು