1:49 PM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಚಳ್ಳಕೆರೆ ತಾಪಂ ಇಒ ಮೇಲೆ ಬಿಜೆಪಿ ಕಾರ್ಯಕರ್ತರ ಹಲ್ಲೆ: ಕಾಂಗ್ರೆಸ್ ನಿಂದ ಭಾರೀ ಪ್ರತಿಭಟನೆ, ಮಾನವ ಸರಪಳಿ

17/02/2022, 11:21

ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹ ಅಧಿಕಾರಿ ಮಡುಗಿನ ಬಸಪ್ಪ ಅವರ ಮೇಲೆ ಬಿಜೆಪಿ ಕಾರ್ಯಕರ್ತರು ನಡೆಸಿದ ಹಲ್ಲೆಯನ್ನು ಖಂಡಿಸಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ವಾಲ್ಮೀಕಿ ವೃತ್ತದಿಂದ ಪ್ರತಿಭಟನ ಆರಂಭಿಸಿ ನೆಹರು ಸರ್ಕಲ್ ಬಳಿ ಮಾನವ ಸರಪಳಿ ನಿರ್ಮಿಸಿ ಇಓ ಮೇಲೆ ಹಲ್ಲೆ ನಡೆಸಿರುವ ಬಿಜೆಪಿ ಕಾರ್ಯಕರ್ತರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಘೊಷಣೆಗಳನ್ನು ಕೂಗಿ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚೌಳೂರು ಪ್ರಕಾಶ ಮಾತನಾಡಿ ಸರ್ಕಾರಿ ಅಧಿಕಾರಿಯು ಕರ್ತವ್ಯ ನಿರ್ವಹಿಸುವಾಗ ಹಲ್ಲೆ ನಡೆಸಿದ್ದಾರೆ, ಇದು ಬಿಜೆಪಿ ಕಾರ್ಯಕರ್ತರ ಗುಂಡಾಗಿರಿ, ಒಬ್ಬ ಅಧಿಕಾರಿ ಮೇಲೆ ಹಲ್ಲೆ ನಡೆಸಿದರೆ, ಜನಸಾಮಾನ್ಯರ ಗತಿಯೇನು, ಕೇಂದ್ರ ಮತ್ತು ರಾಜ್ಯದಲ್ಲಿ ನಮ್ಮದೇ ಸರ್ಕಾರ ಇದೆ ಎಂದು ಬಿಜೆಪಿ ಕಾರ್ಯಕರ್ತರು ಗುಂಡಾಗಿರಿ ಮಾಡುತ್ತಿದ್ದಾರೆ. ಇಂತಹ ಗುಂಡಾಗಳನ್ನು ಬಂಧಿಸಿ, ಕಾನೂನು ಕ್ರಮ ಜರುಗಿಸುವಂತೆ ಆಕ್ರೋಶ ವ್ಯಕ್ತ ಪಡಿಸಿದರು.

ನಂತರ ತಾಲ್ಲೂಕು ಕಚೇರಿ ಬಳಿ ತಹಶೀಲ್ದಾರ್ ಎನ್. ರಘುಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ತಿಪ್ಪೇಸ್ವಾಮಿ, ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಿರಣ್ ಶಂಕರ್, ಜಿಪಂ ಮಾಜಿ ಸದಸ್ಯ ಪ್ರಕಾಶ ಮೂರ್ತಿ, ನಗರಸಭೆ ಅಧ್ಯಕ್ಷೆ ಸುಮಕ್ಕ, ಸದಸ್ಯರಾದ ರಮೇಶ್ ಗೌಡ, ವೈ. ಪ್ರಕಾಶ್, ರಾಘವೇಂದ್ರ, ಮಲ್ಲಿಕಾರ್ಜುನ, ವೀರಭದ್ರಪ್ಪ, ಮುಖಂಡರಾದ ರವಿಕುಮಾರ್, ಡಿ.ಕೆ. ಕಾಟಯ್ಯ, ಸಿ.ಟಿ. ಶ್ರೀನಿವಾಸ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು