11:18 AM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಹಲ್ಯಾಳ ಗ್ರಾಮದ ಯುವಕರಿಂದ ಕೃಷ್ಣಾ ನದಿ ಸ್ವಚ್ಛತೆ: ಸಾರ್ವಜನಿಕರಿಂದ ಶ್ಲಾಘನೆ

18/02/2022, 14:18

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಒಂದು ಕಡೆ ರಾಜ್ಯದಲ್ಲಿ ಹಿಜಾಬ್ /ಕೇಸರಿ ವಿವಾದ ತಲೆದೋರಿದರೆ, ಇನ್ನೊಂದು ಕಡೆ ಅಥಣಿ ತಾಲೂಕಿನ ಹಲ್ಯಾಳ ಯುವಕರು ಸ್ವಯಂ ಪ್ರೇರಣೆಯಿಂದ ಕೃಷ್ಣಾ ನದಿ ಸ್ವಚ್ಛತೆಗೆ  ಮುಂದಾಗಿ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾಗಿದೆ.


ಹಲ್ಯಾಳ ಗ್ರಾಮದ ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರವ್ವ ಪರಸಪ್ಪ ಮಾದರ, ಅವರ ಮಗನಾದ ರಾಹುಲ್ ಪರಸಪ್ಪ, ಮಾದರ್ ಹಾಗೂ ವಿನೋದ್ ಅರ್ಜುನ್ ಕುರಣಿ, ಪುಂಡಲಿಕ್ ಚಂದ್ರಪ್ಪ ಮಾದರ ಅವರು ಸ್ವಯಂ ಪ್ರೇರಿತವಾಗಿ ನದಿ ದಡದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.


ಚಿಂಚಲಿ ಮಯಕ್ಕಾ ದೇವಿಯ ಜಾತ್ರೆ ನಿಮಿತ್ಯ ಸಾವಿರಾರು ಭಕ್ತಾದಿಗಳು ಮೊದಲು ಕೃಷ್ಣ ನದಿ ಪವಿತ್ರ ಸ್ನಾನಕ್ಕೆ ಹೆಚ್ಚಿನ ಆದ್ಯತೆ ನೀಡಿ ತದನಂತರ ದೇವಿಯ ದರ್ಶನಕ್ಕೆ ಹೋಗುತ್ತಾರೆ. ಹೋದ ವರ್ಷ ಪ್ರವಾಹದಿಂದ ನದಿ ತೀರಕ್ಕೆ ಅಪಾರ ಪ್ರಮಾಣದಲ್ಲಿ ಮುಳ್ಳುಗಳು ತುಂಬಿ ಜನಗಳಿಗೆ ಸಮಸ್ಯೆ ಆಗುವುದನ್ನು ಅರಿತು ಖುದ್ದಾಗಿ ಗೆಳೆಯರೊಂದಿಗೆ ನದಿ ಸ್ವಚ್ಛತೆ ಕಾರ್ಯವನ್ನು  ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು