5:10 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಹೀಗೊಂದು ಹೇಯ ಕೃತ್ಯ: ಹೆತ್ತಬ್ಬೆಗೆ ಜೀಪ್‌ನಿಂದ ಗುದ್ದಿಸಿ ಕೊಲೆ ಮಾಡಿದ ದುಷ್ಟ ಪುತ್ರ

18/02/2022, 19:52

ಮೈಸೂರು(reporterkarnataka.com): ನಡೆದುಕೊಂಡು ಹೋಗುತ್ತಿದ್ದ ತನ್ನ ತಾಯಿಗೆ ಪುತ್ರನೊಬ್ಬ ಜೀಪ್ ನಿಂದ ಗುದ್ದಿಸಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಸೂಳೆಕೋಟೆ (ಹನುಮಂತಪುರ) ಗ್ರಾಮದಲ್ಲಿ ಗುರುವಾರ ನಡೆದಿದೆ.

ನಾಗಮ್ಮ(65) ಹತ್ಯೆಯಾದ ತಾಯಿ. ಮೃತಳ ಪುತ್ರ ಹೇಮರಾಜ್(45) ಎಂಬಾತನೇ ಕೃತ್ಯವೆಸಗಿದ ಆರೋಪಿ. ಹಣಕಾಸಿನ ವಿಚಾರಕ್ಕೆ ಸಂಬoಧಿಸಿದoತೆ ತಾಯಿ ಮಗನ ನಡುವೆ ಆಗಾಗ ಗಲಾಟೆಯಾಗುತ್ತಿತ್ತು. ಇಂದು ತಾಯಿಯ ವಿರುದ್ಧ ಕುಪಿತಗೊಂಡಿದ್ದ ಮಗ ಹೇಮರಾಜ್, ರಸ್ತೆ ಬದಿಯಲ್ಲಿ ತೆರಳುತ್ತಿದ್ದ ತಾಯಿ ನಾಗಮ್ಮಗೆ ಟ್ರಾವೆಲ್ ಜೀಪ್ ನಿಂದ ಡಿಕ್ಕಿಹೊಡೆಸಿದ್ದಾನೆ.

ಡಿಕ್ಕಿ ಹೊಡೆದ ರಭಸಕ್ಕೆ ತೀವ್ರವಾಗಿ ಗಾಯಗೊಂಡ ನಾಗಮ್ಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ ಬೆಟ್ಟದಪುರ ಠಾಣೆಯ ಪೊಲೀಸರು ಆರೋಪಿ ಹೇಮರಾಜನನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು