4:20 AM Monday6 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಕಠಿಣ ಪರಿಶ್ರಮ ಮತ್ತು ಆತ್ಮ ವಿಶ್ವಾಸದಿಂದ ಸಿಎ ಪದವಿಯನ್ನು ಪಡೆದ ಕೆನರಾ ಸಂಧ್ಯಾ ಕಾಲೇಜು ವಿದ್ಯಾರ್ಥಿಗಳಿಗೆ ಸನ್ಮಾನ

28/02/2022, 22:10

ಮಂಗಳೂರು(reporterkarnataka.com); ಡಿಸೆಂಬರ್ 2021ನೇ ವರ್ಷದಲ್ಲಿ ನಡೆದ ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾದ ಕೆನರಾ ಸಂಧ್ಯಾ ಕಾಲೇಜಿನ ಹಳೆಯ ವಿದ್ಯಾರ್ಥಿಗಳಾದ ಗೋಕುಲ್ ಪೈ, ಪೂರ್ಣಿಮಾ ರಾವ್ ಹಾಗೂ ಸಂಜನಾ ಪೈ ಅವರಿಗೆ  ಸನ್ಮಾನ ಮಾಡಲಾಯಿತು.

“ನಾವು ನಿಷ್ಠಾವಂತರು ಮತ್ತು ಶ್ರಮದಾಯಕರಾಗಿದ್ದರೆ  ಏನನ್ನೂ ಸಾಧಿಸಬಹುದು. ನಮ್ಮಲ್ಲಿ ಆತ್ಮವಿಶ್ವಾಸ , ದೇವರಲ್ಲಿ ನಂಬಿಕೆ ಮತ್ತು ಭಕ್ತಿ ಇದ್ದರೆ ಯಾವ ಎತ್ತರಕ್ಕಾದರೂ ನಾವು ತಲುಪಬಹುದು. ಮೊದಲಾಗಿ ನಮ್ಮ ಜೀವನದಲ್ಲಿ ಶಿಸ್ತನ್ನು ಅಳವಡಿಸಬೇಕು ಮತ್ತು ನಾವು ಮಾಡುವ ಕಾರ್ಯದಲ್ಲಿ ನಂಬಿಕೆ ಇರುವುದು ಮುಖ್ಯ” ಎಂದು ಕಾಲೇಜಿನ ಸಂಚಾಲಕ  ಸಿಎ ಜಗನ್ನಾಥ ಕಾಮತ್ ನುಡಿದರು.


ಸನ್ಮಾನ ಸ್ವೀಕರಿಸಿದ ವಿದ್ಯಾರ್ಥಿಗಳು ತಮ್ಮ ಯಶಸ್ಸಿನ ಗುಟ್ಟನ್ನು ಎಲ್ಲಾ ವಿದ್ಯಾರ್ಥಿಗಳ ಜೊತೆ ಹಂಚಿಕೊಂಡರು.

ಕಾಲೇಜಿನ ವಿದ್ಯಾರ್ಥಿನಿ ಸಹನಾ ಪ್ರಾರ್ಥನೆಗೈದರು, ಕಾಲೇಜಿನ ಪ್ರಾಂಶುಪಾಲರಾದ  ಪ್ರೊ. ಅನಿಲಾ ಕಾಮತ್ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಕಾವ್ಯಶ್ರೀ ವಂದಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಸ್ಮಿತಾ ಎಂ. ಕಾರ್ಯಕ್ರಮವನ್ನು ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು