1:42 AM Monday6 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

Good News: ಮಂಗಳೂರಿನಲ್ಲಿ ಉದ್ಯೋಗಾಕಾಂಕ್ಷಿಗಳಿಗಾಗಿ ನಾಳೆ ಬೃಹತ್ ಉದ್ಯೋಗ ಮೇಳ

02/03/2022, 10:15

ಮಂಗಳೂರು(reporterkarnataka.com):

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾಡಳಿತ ದಕ್ಷಿಣ ಕನ್ನಡ ಇವರ ಸಹಯೋಗದಲ್ಲಿ ಮಾರ್ಚ್ 3 ರ  ಗುರುವಾರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕೊಟ್ಟಾರ – ಕೂಳೂರು ಪ್ರಮುಖ ರಸ್ತೆಯಲ್ಲಿರುವ ಗೋಲ್ಡ್ ಪಿಂಚ್ ಸಿಟಿ ಮೈದಾನದ ಮುಂಭಾಗದ ಎಜೆ ಇಂಜಿನಿಯರಿಂಗ್ ಕಾಲೇಜ್ ನಲ್ಲಿ‌ “ಬೃಹತ್ ಉದ್ಯೋಗ ಮೇಳ” ವನ್ನು ಆಯೋಜಿಸಲಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.

ಉದ್ಯೋಗ ಮೇಳದಲ್ಲಿ‌ ಹೆಸರಾಂತ ಕಂಪನಿಗಳಾದ ಟೀಮ್ ಲೀಸ್, ಸಿನೋಪ್ ಟೆಕ್, ಹೆಚ್.ಜಿ.ಎಸ್, ಬಿ.ಓ.ಎಸ್.ಸಿ.ಹೆಚ್, ಬೈಜೂಸ್, ಟಾಟಾ ಕಮ್ಯುನಿಕೇಷನ್ಸ್, ಟೊಯೊಟಾ ಕಿರ್ಲೋಸ್ಕರ್ ಮೋಟರ್, ಎನ್.ಟಿ.ಟಿ.ಎಫ್ ಸೇರಿದಂತೆ ಮುಂತಾದ 100ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿವೆ.

ಬಿಎ, ಬಿ.ಎಸ್ಸಿ, ಬಿಕಾಂ, ಐಟಿಐ, ಡಿಪ್ಲೋಮಾ, ಬಿಇ ಅರ್ಹತೆಯನ್ನು ಹೊಂದಿರುವ ವಿದ್ಯಾರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಆಸಕ್ತ ಅಭ್ಯರ್ಥಿಗಳು ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ, ಪಾಸ್ ಪೋರ್ಟ್ ಫೋಟೋ, ಆಧಾರ್ ಕಾರ್ಡ್ ಹಾಗೂ ಸ್ವವಿವರದ ಅರ್ಜಿಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಓರ್ವ ಅಭ್ಯರ್ಥಿಗೆ ಗರಿಷ್ಠವೆಂದರೆ 3 ಕಂಪನಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ತಮ್ಮ ವಿದ್ಯಾರ್ಹತೆಗೆ ಸರಿಹೊಂದುವ 3 ಕಂಪನಿಗಳನ್ನು ಆಯ್ಕೆಮಾಡಿ ಅರ್ಜಿ ಸಲ್ಲಿಸಿ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಈ ಕಾರ್ಯಕ್ರಮಕ್ಕೆ ರಾಜ್ಯ ಉನ್ನತ ಶಿಕ್ಷಣ ಸಚಿವರು ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ‌ ಶ್ರೀ ಅಶ್ವತ್ ನಾರಾಯಣ್ ಅವರು ಆಗಮಿಸಲಿದ್ದಾರೆ ಎಂದು ಹೇಳಿದ್ದಾರೆ.

ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಕಾರ್ಯಕ್ರಮದ ಸದಾವಕಾಶ ಪಡೆದುಕೊಳ್ಳಿ. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವವರು 

 www.skillconnet.kaushalkar.com ಇಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿರುವ ವೇದವ್ಯಾಸ್ ಕಾಮತ್ ಅವರ ಶಾಸಕರ ಕಚೇರಿಗೆ ಭೇಟಿ ನೀಡಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು