6:28 PM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಅಥಣಿ: 4.80 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕುಮಠಳ್ಳಿ ಚಾಲನೆ 

04/03/2022, 11:24

ರಾಹುಲ್ ಅಥಣಿ ಬೆಳಗಾವಿ

info.reporterkarnataka.com

ಬೆಳಗಾವಿ ಜಿಲ್ಲೆ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ತಾಲೂಕಿನ ಬನ್ನೂರ್ ಸವದಿ ನಂದಗಾವ ಶೇಗುಣಸಿ ಸತ್ತಿ ಗ್ರಾಮಗಳಲ್ಲಿ ಸುಮಾರು 4 ಕೋಟಿ 80 ಲಕ್ಷ ರೂ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು,ಕ್ಷೇತ್ರದ ಅಭಿವೃದ್ಧಿಯಲ್ಲಿ ಯಾವುದೇ ಹಿಂಜರಿಕೆಯಿಲ್ಲ. ಇನ್ನೂ ಹತ್ತು ಹಲವಾರು ಅಭಿವೃದ್ಧಿ ಯೋಜನೆಗಳು ಮಾಡುವುದಾಗಿ ಭರವಸೆ ನೀಡಿದರು. ನೆರೆ ಸಂತ್ರಸ್ತರ ಮನೆ ಹಂಚಿಕೆಯಲ್ಲಿ ಅಲ್ಪ ದೋಷದ ಬಗ್ಗೆ ನನ್ನ ಗಮನಕ್ಕೆ ಬಂದಿದೆ ಅದನ್ನು ಕೂಡಲೇ ಸರಿಪಡಿಸಿ ತಕ್ಕ ಫಲಾನುಭವಿಗಳಿಗೆ ನ್ಯಾಯ ಕೊಡಿಸುವುದು ನಮ್ಮ ಧರ್ಮ. ಕೃಷ್ಣ ತೀರದ ನೆರೆಪೀಡಿತ ಸುಮಾರು 23 ಗ್ರಾಮಗಳ ಸವಳು ಜವಳಿನ ಅಭಿವೃದ್ಧಿ ಯೋಜನೆ ಹಾಗೂ ಬರಪೀಡಿತ ಭಾಗವಾದ ಕಕಮರಿ ಕೊಟ್ಟಲಗಿ ಏತನೀರಾವರಿ ಸುಮಾರು 948 ಕೋಟಿ ರೂಪಾಯಿ ಬೋರ್ಡ್ ಕ್ಲಿಯರನ್ಸ್ ಆಗಿದ್ದು ಅದನ್ನು ಕೂಡ ಬಹುಬೇಗನೆ ಮುಗಿಸಿಕೊಡುವ ಭರವಸೆ  ನೀಡಿದರು. ಮಹಾರಾಷ್ಟ್ರದಿಂದ ಬೇಸಿಗೆ ಕಾಲದಲ್ಲಿ ಕೃಷ್ಣಾನದಿಗೆ ಸುಮಾರು 4 ಟಿಎಂಸಿ ನೀರು ತರುವ ನಿರೀಕ್ಷೆಯಲ್ಲಿದ್ದೇವೆ ಎಂದು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದರು ಇದೇ ಸಂದರ್ಭದಲ್ಲಿ ಬಿಜೆಪಿ ಯುವ ಮುಖಂಡರಾದ ವಿವೇಕ್ ನರಗೊಂಡ್ ಮಾತನಾಡಿ,ಶಾಸಕ ಮಹೇಶ್ ಕುಮಠಳ್ಳಿ ಅವರ ಕಾರ್ಯಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ ಬರುವ ದಿನಮಾನಗಳಲ್ಲಿ ಇನ್ನು ಹೆಚ್ಚಿನ ಅಭಿವೃದ್ಧಿ ಯೋಜನೆಗಳ ನಿರೀಕ್ಷೆಯಲ್ಲಿದ್ದೇವೆ ಪೂರ್ಣಗೊಳಿಸುತ್ತಾರೆ ಎನ್ನುವ ಭರವಸೆಯೂ ಇದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು