4:22 PM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ಪತಿ-ಪತ್ನಿ ಮಧ್ಯೆ ಮನಸ್ತಾಪ: ಗಂಡ ನೇಣಿಗೆ ಶರಣು; ಅಂತ್ಯ ಸಂಸ್ಕಾರಕ್ಕೂ ಬಾರದ ಸತಿ!!

05/03/2022, 09:30

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಗಂಡ ಹೆಂಡಿರು ಜಗಳ ಉಂಡು ಮಲಗುವ ತನಕ ಎಂಬ ಗಾದೆ ಮಾತಿದೆ. ಆದರೆ ಇಲ್ಲೊಬ್ಬ ಗಂಡ ಪತ್ನಿಯ ವಿಷಯದಲ್ಲಿ ಮನನೊಂದ ನೇಣಿಗೆ ಶರಣಾದ ದಾರುಣ ಘಟನೆ ನಡೆದಿದೆ.

ಅಥಣಿ ತಾಲೂಕಿನ ತಾಂವಶಿ ಗ್ರಾಮದ ಸುನೀಲ ಅರ್ಜುನ್ ಹೊಕ್ಕುಂಡಿ”(26) ಆತ್ಮಹತ್ಯೆಗೆ ಶರಣಾದ ಯುವಕ.

ಒಂದು ವರ್ಷದ ಹಿಂದೆ ಅಷ್ಟೇ ಮಹಾರಾಷ್ಟ್ರದ ಸಾಂಗ್ಲಿ ನಗರದ ಯೋಗೀತಾ ಜೋತೆ ಸುನೀಲ ವಿವಾಹವಾಗಿತ್ತು. ಮದುವೆಯ ನಂತರ ಆರು ತಿಂಗಳ ವರೆಗೆ ದಾಂಪತ್ಯ ಜೀವನ ಚನ್ನಾಗಿಯೇ ನಡೆದಿತ್ತು. ಸುನೀಲ ತನ್ನ ದಿನನಿತ್ಯದ ಬಾರ್ ಬೆಂಡಿಂಗ್ ಕೆಲಸ ಮಾಡಿಕೊಂಡು ತಂದೆ,ತಾಯಿ ಹಾಗೂ ಒಬ್ಬ ಸಹೋದರನ ಜತೆ ಒಂದೇ ಕುಟುಂಬದಲ್ಲಿ ವಾಸವಿದ್ದರೂ.

ಎರಡು ತಿಂಗಳ ಹಿಂದೆ ಸುನೀಲ ಪತ್ನಿ ಯೋಗೀತಾ  ತವರಮನೆಗೆ ಹೋಗಿ ಬರುತ್ತೇನೆ ಅಂತಾ ಹೋದವಳು ನಂತರ ಮರಳಿ ಗಂಡನ ಮನೆಗೆ ಬರಲು ನಿರಾಕರಿಸಿದ್ದಾಳೆ. ಸುನೀಲ ತಂದೆ ತಾಯಿ ಕೂಡಾ ಯೋಗೀತಾ ಬರಲು ಮನವಲಿಸಿದರು ಕೂಡಾ ಬಾರಲು ನಿರಾಕರಿದದಕ್ಕೆ ಮನ ನೊಂದು ಸುನೀಲ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. 

ಮೃತನ ಪತ್ನಿ ಯೋಗೀತಾ ಕೊನೆಯ ಪಕ್ಷ ಅಂತ್ಯ ಸೌಂಸ್ಕಾರಕ್ಕೂ ಬಾರದೆ ಇರೋದು ಹಲವು ಅನುಮಾನಕ್ಕೆ ಕಾರಣವಾಗಿದೆ. ಈ ಕುರಿತು ಮೃತ ಸುನೀಲ ತಂದೆ ಅರ್ಜುನ್ ಹೊಕ್ಕುಂಡಿ ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು