12:36 AM Thursday16 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಮಂಗಳೂರು: ಚಿಕ್ಕಮ್ಮನ ಮನೆಗೆ ಜಾತ್ರೆಗೆಂದು ಬಂದ ಯುವಕ ನೇಣು ಬಿಗಿದು ಆತ್ಮಹತ್ಯೆ 

08/03/2022, 11:42

ತೊಕ್ಕೊಟ್ಟು (reporterkarnataka.com): 

ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಪ್ರಕಾಶ್ ನಗರ ಎಂಬಲ್ಲಿ ಭಾನುವಾರ ನಡೆದಿದೆ.

ಪಿಲಾರು ಜಾತ್ರೆಗೆಂದು ಚಿಕ್ಕಮ್ಮನ ಮನೆಗೆ ಬಂದಿದ್ದ ಪಡೀಲ್ ನಿವಾಸಿ ಸೌರವ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ.

ಸೋಮೇಶ್ವರ ಗ್ರಾಮದ ಪಿಲಾರಿನಲ್ಲಿ ಪಂಜಂದಾಯ ದೈವದ ದೊಂಪದ ಬಲಿ ಉತ್ಸವ ನಡೆಯುತ್ತಿದ್ದು, ಹೀಗಾಗಿ ಪಿಲಾರು ಪ್ರಕಾಶ್ ನಗರದಲ್ಲಿರುವ ಚಿಕ್ಕಮ್ಮನ ಮನೆಗೆ ಸೌರವ್ ತನ್ನ ತಾಯಿ ಜತೆ ಆಗಮಿಸಿದ್ದ. 

ಜಾತ್ರೆಗೆ ತೆರಳಿ ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿದ್ದ ಸೌರವ್ ನಿದ್ದೆ ಬರುತ್ತದೆ ಎಂದು ಹೇಳಿ ಕೋಣೆಗೆ ತೆರಳಿದ್ದಾನೆನ್ನಲಾಗಿದೆ. ಸಂಜೆಯ ವೇಳೆ ತಾಯಿ ಮಗನನ್ನ ಎಬ್ಬಿಸಲು ಹೋದಾಗ ಸೌರವ್ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಗೈದ ವಿಚಾರ ಬೆಳಕಿಗೆ ಬಂದಿದೆ ಎಂದು ಪೊಲೀಸ್‍ ದೂರಿನಲ್ಲಿ ತಿಳಿಸಲಾಗಿದೆ.

ಮೃತರು ತಂದೆ ತಾಯಿ ಸಹೋದರ ಸಹೋದರಿಯರನ್ನು ಅಗಲಿದ್ದಾನೆ.ಉಳ್ಳಾಲ ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು