6:23 PM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಮಂಗಳೂರು: ಯೋಗ ಕುರಿತು 30 ಗಂಟೆಯ ಸರ್ಟಿಫಿಕೇಟ್ ಕೋರ್ಸ್ ಸಮಾರೋಪ

14/03/2022, 00:01

ಮಂಗಳೂರು(reporterkarnataka.com): ಕೆನರಾ ಸಂಧ್ಯಾ ಕಾಲೇಜು ಹಾಗೂ ಶ್ರೀ ಪತಂಜಲಿ ಯೋಗ ಪ್ರತಿಷ್ಠಾನ ಮಂಗಳೂರು (ರಿ) ಇದರ ಜಂಟಿ ಆಶ್ರಯದಲ್ಲಿ 30 ಗಂಟೆಯ ಸರ್ಟಿಫಿಕೇಟ್ ಕೋರ್ಸ್ ನ ಸಮಾರೋಪ ಸಮಾರಂಭ ಶನಿವಾರ ನಡೆಯಿತು.

ಮುಖ್ಯ ಅತಿಥಿಯಾಗಿ ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಖಜಾಂಜಿ ಸಿಎ ವಾಮನ್ ಕಾಮತ್ ಮಾತನಾಡಿ, ಯೋಗದಿಂದ ಆತ್ಮಶಕ್ತಿ, ಮನಸ್ಸಿಗೆ ನೆಮ್ಮದಿ ಗಳಿಸಲು ಸಾಧ್ಯ ಹಾಗೂ ಇದನ್ನು ವಿದ್ಯಾರ್ಥಿ ಜೀವನದಿಂದಲೇ ಬೆಳೆಸಿಕೊಳ್ಳಬೇಕು ಎಂದು ನುಡಿದರು.


ಯೋಗ ಸರ್ಟಿಫಿಕೇಟ್ ಕೋರ್ಸನ ಸಂಪನ್ಮೂಲ ವ್ಯಕ್ತಿ ಏಕನಾಥ್ ಬಾಳಿಗ ಮಾತನಾಡಿ, ಯೋಗಾಭ್ಯಾಸವು ನಮ್ಮ ಜೇವನದ ಅವಿಭಾಜ್ಯ ಅಂಗವಾಗಿರಬೇಕು, ನಿತ್ಯ ಯೋಗಾಭ್ಯಾಸದಿಂದ ಮಾನಸಿಕ ನೆಮ್ಮದಿ ಹಾಗೂ ಶಿಸ್ತುಬದ್ಧ ಜೀವನ ನಡೆಸಲು ಸಾಧ್ಯ ಎಂದರು. ಇಂತಹ ಸರ್ಟಿಫಿಕೇಟ್ ಕೋರ್ಸಿನಿಂದ ಮುಂದಕ್ಕೆ ಹಲವಾರು ಯೋಗಶಿಕ್ಷಕರು ಸಮಾಜಕ್ಕೆ ಸಿಗಲಿದ್ದಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ,ಕೆನರಾ ಸಂಧ್ಯಾ ಕಾಲೇಜಿನ ಸಂಚಾಲಕರಾದ ಸಿಎ ಜಗನ್ನಾಥ ಕಾಮತ್ ವಹಿಸಿ, ಸರ್ಟಿಫಿಕೇಟ್ ಕೋರ್ಸ್ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಜೀವನದಲ್ಲಿ ಉನ್ನತ ಸ್ಥಾನ ತಲುಪಲು ಸೂಕ್ತ ಮನೋಭಾವ ಅಗತ್ಯ,ಈ ನಿಟ್ಟಿನಲ್ಲಿ ಇಂತಹ ಸರ್ಟಿಫಿಕೇಟ್ ಕೋರ್ಸಗಳು ಅನುಕೂಲ ಎಂದರು.

ಸರ್ಟಿಫಿಕೇಟ್ ಕೋರ್ಸ್ ಸಂಯೋಜಕಿ, ಉಷಾ ನಾಯಕ್ ಕಾರ್ಯಕ್ರಮದ ಸಂಕ್ಷಿಪ್ತ ವರದಿ ಪ್ರಸ್ತುತ ಪಡಿಸಿದವರು.ಯೋಗ ವಿದ್ಯಾರ್ಥಿಗಳಿಗೆ ಸಂಪನ್ಮೂಲ ಸಾಮಾಗ್ರಿಗಳನ್ನು ಹಾಗೂ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.

ಕೆನರಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಪ್ರೊ.ಅನಿಲಾ ಅತಿಥಿಗಳನ್ನು ಸ್ವಾಗತಿಸಿದರು.

ಕೆನರಾ ಕಾಲೇಜು ಪ್ರಾಂಶುಪಾಲೆ ಡಾ.ಪ್ರೇಮಲತಾ.ವಿ, ಆಂತರಿಕ ಗುಣಮಟ್ಟ ಸಂಯೋಜಕರಾದ ದೇಜಮ್ಮ, ಹಾರ್ದಿಕ್ ಚೌಹಾನ್, ಪತಂಜಲಿ ಯೋಗ ಪ್ರತಿಷ್ಠಾನದ ಟ್ರಷ್ಟಿ ಪ್ರತಿಭಾ ನಾಯಕ್, ಶಿಕ್ಷಕರಾದ ಪ್ರಭಾ ಎನ್.ವಿ, ಸಂಜನಾ ಮೂರ್ತಿ, ಉಪಸ್ಥಿತರಿದ್ದರು.

ಈ ಸಂಧರ್ಭದಲ್ಲಿ ಯೋಗಗುರು ಏಕನಾಥ್ ಬಾಳಿಗ ಇವರಿಗೆ ಸನ್ಮಾನಿಸಲಾಯಿತು.ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.


ಸರ್ಟಿಫಿಕೇಟ್ ಕೋರ್ಸ್ ಸಂಯೋಜಕಿ ಉಷಾ ನಾಯಕ್ ವಂದನಾರ್ಪಣೆಗೈದರು. ಸೀಮಾ ಪ್ರಭು ಕಾರ್ಯಕ್ರಮ ನಿರೂಪಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು