7:42 AM Thursday25 - April 2024
ಬ್ರೇಕಿಂಗ್ ನ್ಯೂಸ್
ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ…

ಇತ್ತೀಚಿನ ಸುದ್ದಿ

ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ ಹಾಗೂ ಅಂತಾರಾಷ್ಟ್ರೀಯ ಜನಾಂಗೀಯ ತಾರತಮ್ಯ ನಿರ್ಮೂಲನ ದಿನಾಚರಣೆ

26/03/2022, 23:15

ಮಂಗಳೂರು(reporterkarnataka.com): ದಕ್ಷಿಣ ಕನ್ನಡ  ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ  ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಯೇನಪೋಯ ವಿಶ್ವವಿದ್ಯಾನಿಲಯ, ಯೇನಪೋಯ  ನರ್ಸಿಂಗ್ ಕಾಲೇಜ್, ರಾಷ್ಟ್ರೀಯ ಸೇವಾ ಯೋಜನೆ ಘಟಕ, ಹಾಗೂ ರೆಡ್ ರಿಬ್ಬನ್ ಕ್ಲಬ್ ಮತ್ತು ರೆಡ್ ಕ್ರಾಸ್, ಜಿಲ್ಲಾ ರಕ್ತ ನಿಧಿ ಕೇಂದ್ರ, ವೆನ್ ಲಾಕ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಹಾಗೂ ಅಂತಾರಾಷ್ಟ್ರೀಯ ಜನಾಂಗೀಯ ತಾರತಮ್ಯ ನಿರ್ಮೂಲನ ದಿನಾಚರಣೆ ಯೇನಪೋಯ ನರ್ಸಿಂಗ್ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಜರುಗಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಬ್ಲಡ್ ಬ್ಯಾಂಕ್ ವೆನ್ ಲಾಕ್ ನ ವೈದ್ಯಾಧಿಕಾರಿ ಡಾ.ಶರತ್ ಕುಮಾರ್ ಮಾತನಾಡಿ, ರಕ್ತದಾನ ಬಹಳ ಮುಖ್ಯವಾದದ್ದು, ಒಬ್ಬ ಪುರುಷ ತಿಂಗಳಲ್ಲಿ ಮೂರು ಬಾರಿ ರಕ್ತದಾನ ಮಾಡಿದರೆ ನಿಮ್ಮಿಂದ ಐದು ಸಾವಿರ  ಜೀವಗಳನ್ನು ಉಳಿಸಬಹುದು. ನಿಮ್ಮ ಹುಟ್ಟುಹಬ್ಬದಂದು ರಕ್ತ ದಾನ ಮಾಡಿ ಇನ್ನೊಬ್ಬರ ಬಾಳಿಗೆ ಬೆಳಕಾಗಿ ಎಂದು ಕಿವಿ ಮಾತು ಹೇಳಿದರು.


ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ.ಎ ಮಾತನಾಡಿ, ಮಾನವನ ರಕ್ತದಲ್ಲಿ ಮೈಕ್ರೋ ಪ್ಲಾಸ್ಟಿಕ್ ನ ಅಂಶ ಕಂಡು ಬಂದಿದೆ ಎಂದು ನೆದರ್ ಲ್ಯಾಂಡ್ ನ ಸಂಶೋಧನಾ ಮಂಡಳಿ ವರದಿ ಮಾಡಿದೆ. ಹಾಗಾಗಿ ಪ್ಲಾಸ್ಟಿಕ್ ಬಳಕೆ ಆದಷ್ಟು ಕಡಿಮೆ ಮಾಡಿ ಎಂದು ಕರೆ ನೀಡಿದರು.

ಯೇನಪೋಯ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ.ಲೀನಾ.ಕೆ.ಸಿ ಅಧ್ಯಕ್ಷತೆ ವಹಿಸಿದ್ದರು.


ಯೇನಪೋಯ ನರ್ಸಿಂಗ್ ಕಾಲೇಜಿನ ರೆಡ್ ರಿಬ್ಬನ್ ಕ್ಲಬ್ ನ ಯೋಜನಾಧಿಕಾರಿ ನವ್ಯ,ರೆಡಿಕ್ರಾಸ್ ಕೋಡಿನೆಟರ್, ಆರೋಗ್ಯ ಇಲಾಖೆಯ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸತತವಾಗಿ ರಕ್ತದಾನ ಮಾಡಿದವರನ್ನು ಸನ್ಮಾನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು