12:32 PM Saturday20 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

ಎಂ.ಕಾಂ ಪರೀಕ್ಷೆ: ಕುಡ್ಲದ ಪೊಣ್ಣು, ನಟಿ- ನಿರೂಪಕಿ ಶೀತಲ್ ಮಂಗಳೂರು ಪ್ರಥಮ Rank

18/04/2022, 21:19

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ನಗರದ ಬೆಸೆಂಟ್ ಸಂಧ್ಯಾ ಕಾಲೇಜಿನ ವಿದ್ಯಾರ್ಥಿನಿ,ನಟಿ, ನಿರೂಪಕಿ ಶೀತಲ್ ಅವರು ಎಂ.ಕಾಂ ಪರೀಕ್ಷೆಯಲ್ಲಿ ಪ್ರಥಮ rank ಪಡೆದಿದ್ದಾರೆ.


ಮಂಗಳೂರಿನ ಕೆನರಾ ಶಿಕ್ಷಣ ಸಂಸ್ಥೆಯಲ್ಲಿ ಪ್ರಾಥಮಿಕ ಶಿಕ್ಷಣದಿಂದ ಪದವಿ ವರೆಗೆ ವಿದ್ಯಾಭ್ಯಾಸವನ್ನು ಪೂರೈಸಿದ ಅವರು ಬೆಸೆಂಟ್ ಸಂಧ್ಯಾ ಕಾಲೇಜಿನಲ್ಲಿ ಎಂ.ಕಾಂ ಶಿಕ್ಷಣ ಪಡೆದರು.


ಅತೀ ಸಣ್ಣ ವಯಸ್ಸಿನಲ್ಲಿ ತುಳು ರಂಗಭೂಮಿ ಪ್ರವೇಶಿಸಿದರು. ನಾಯಕಿ ನಟಿಯಾಗಿ ನಟನೆಯಲ್ಲೂ ಎತ್ತಿದ ಕೈ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಖಾಸಗಿ ಟಿವಿ ವಾಹಿನಿಯಲ್ಲಿ ನಿರೂಪಕಿಯಾಗಿ ಕಾರ್ಯ ನಿರ್ವಹಿಸಿದರು.

ಈಕೆ ಕೆ.ಪ್ರಕಾಶ್ ಹಾಗೂ ಗೀತಾ ದಂಪತಿಯ ಏಕೈಕ ಪುತ್ರಿ. ಪ್ರಸ್ತುತ ಅವರು ಎ. ಜೆ. ಸಂಸ್ಥೆಯಲ್ಲಿ  ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತನ್ನ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದೆಂದು ನಟನೆಯಿಂದ ದೂರ ಸರಿದಿದ್ದಾರೆ.


ಬೇರೆ ಭಾಷೆಗಳಲ್ಲಿ ನಟನೆ ಮಾಡುವ ಆಸಕ್ತಿ ಸದ್ಯಕ್ಕಿಲ್ಲ. ತುಳು ಭಾಷೆಯ ಮೇಲೆ ಅಭಿಮಾನ ಮತ್ತು ಪ್ರೀತಿ ಇದೆ. ಹಾಗಾಗಿ ಅವಕಾಶ ಸಿಕ್ಕಾಗ ಬಳಸಿಕೊಂಡೆ. ನಟಿಯಾಗಬೇಕೆಂಬ ಕನಸು ಯಾವತ್ತು ಕಂಡಿಲ್ಲ. ಕಾಲೇಜು ಜೀವನದಲ್ಲಿ ನಟನೆಯಿಂದ ಬರುತ್ತಿದ್ದ ಹಣ ನನ್ನ ವಿದ್ಯಾಭ್ಯಾಸಕ್ಕೆ ಸಹಾಯವಾಗುತ್ತಿತ್ತು. ಮೊದಲು ಓದಿಗೆ ಪ್ರಾಮುಖ್ಯತೆ, ಆಮೇಲೆ ಇತರ ವಿಷಯಕ್ಕೆ ಎಂದು ರಿಪೋರ್ಟರ್ ಕರ್ನಾಟಕ ಜತೆ ಮಾತನಾಡಿದ ಅವರು ನುಡಿದರು.

ನನ್ನ ತಂದೆ-ತಾಯಿ ಯಾವತ್ತು ಒತ್ತಡ ಮಾಡಿಲ್ಲ ಇಷ್ಟೇ ಅಂಕ ಗಳಿಸಬೇಕು ಅಥವಾ ಇದೇ ಫೀಲ್ಡಿಗೆ ಹೋಗಬೇಕು ಎಂದು ಒತ್ತಡ ಹೇರಿಲ್ಲ.


ಯಾವುದೇ ರಂಗಕ್ಕೆ ಹೋಗು ನಮ್ಮ ಸಹಾಯ ಇದೆ ಎಂದು ಇವತ್ತಿಗೂ ಬೆನ್ನು ತಟ್ಟುತ್ತಿರುವ ತಂದೆ-ತಾಯಿಯೇ ನನಗೆ ಸ್ಪೂರ್ತಿ ಎಂದು ಶೀತಲ್ ಹೇಳುತ್ತಾರೆ. ನನಗೆ ಸಹಕಾರ ನೀಡಿದ ಎಲ್ಲಾ ಶಿಕ್ಷಕರಿಗೂ ಹಾಗೂ ನನಗೆ ಹಾರೈಸಿದ ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ.



ದಬಕ್ ದಬ ಐಸಾ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ. ಇವರು ಮೆಹಂದಿ ಆರ್ಟಿಸ್ಟ್, ಡ್ಯಾನ್ಸರ್ ಕೂಡ ಹೌದು.

ಇತ್ತೀಚಿನ ಸುದ್ದಿ

ಜಾಹೀರಾತು