1:11 AM Saturday18 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಅಥಣಿ: ಒಂದೇ ದಿನ ಅಂಚೆ ಕಚೇರಿ ಹಾಗೂ 6 ಮನೆಗಳಿಗೆ ಕನ್ನ; ಲಕ್ಷಾಂತರ ಮೌಲ್ಯದ ನಗ, ನಗದು ಕಳವು

25/04/2022, 09:14

ಬೆಳಗಾವಿ(reporterkarnataka.com):

ಅಥಣಿ ಖಿಳೆಗಾಂವ ಗ್ರಾಮದಲ್ಲಿ ಒಂದೇ ದಿನ 6 ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗ, ನಗದು ಕಳ್ಳತನ ಮಾಡಿದ ಘಟನೆ ನಡೆದಿದೆ.

ಖಿಳೇಗಾಂವ ಗ್ರಾಮದಲ್ಲಿ ಒಂದೇ ದಿನ 6 ಮನೆಗಳ ಹಾಗೂ ಅಂಚೆ ಕಛೇರಿಯ ಬೀಗ ಮುರಿದು ಲಕ್ಷಾಂತರ ರೂ.ಗಳ ಚಿನ್ನಾಭರಣ, ಮೋಟಾರ್ ಬೈಕ್, ಆಡಿನ ಮರಿ, ಟಿವಿ ಮತ್ತು ನಗದು ಹಣ ದೋಚಿಕೊಂಡು ಹೋದ ಘಟನೆ ನಡೆದಿದೆ

ಖಿಳೇಗಾಂವ ಗ್ರಾಮದ ಸುಶೀಲಾಬಾಯಿ ಹೊನ್ನಾಗೋಳ ಮನೆಯಲ್ಲಿ 25 ಸಾವಿರ ನಗದು ಹಾಗೂ 1 ತೊಲೆ ಬಂಗಾರದ ಆಭರಣ, ಶೀತಲ್ ಸುರೇಶ ಚಂಡಿ ಮನೆಯಲ್ಲಿ 3 ತೊಲೆ ಬಂಗಾರ ಹಾಗೂ ಸ್ಮಾರ್ಟ ಟಿವಿಯನ್ನು ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದಲ್ಲದೆ  ಸಾಗರ ಸದಾಶಿವ ದಿವಾನಗೋಳ ಮನೆಯ ಹೊರಗಿದ್ದ ಮೋಟಾರ್ ಬೈಕ್ ಹಾಗೂ ಒಂದು ಆಡಿನ ಮರಿಯನ್ನು ಹೊತ್ತುಕೊಂಡು ಹೋಗಿದ್ದಾರೆ. ಗ್ರಾಮದಲ್ಲಿರುವ ಅಪ್ಪಾಸಾಹೇಬ ಮಲ್ಲಾಸಾಹೇಬ ಬಸರಗಿ ಮನೆಯ ಬೀಗ ಮುರಿದು ಎಲ್ಲ ಕಡೆ ಹುಡುಕಿದ ಕಳ್ಳರು ಅಲ್ಲಿ ಎನೂ ಸಿಗದೇ ಇದ್ದಾಗ ಮನೆಯ ಇನ್ನೊಂದು ಭಾಗದಲ್ಲಿದ್ದ ಅಂಚೆ ಕಛೇರಿಯ ಬೀಗವನ್ನೂ ಕೂಡ ಮುರಿದು ದಾಖಲೆಗಳನ್ನು ತಡಕಾಡಿ ಏನೂ ಸಿಗದೇ ಅಲ್ಲಿಂದ ಕಾಲ್ಕಿತ್ತಿದ್ದಾರೆ. 

ಸುದ್ದಿ ತಿಳಿದ ತಕ್ಷಣ ಅಥಣಿ ಪೊಲೀಸ್ ಠಾಣೆಯ ಪಿಎಸ್‍ಐ ಕುಮಾರ ಹಾಡಕರ ಖಿಳೇಗಾಂವ ಗ್ರಾಮಕ್ಕೆ ಭೇಟಿ ನೀಡಿ ಕಳ್ಳತನವಾದ ಎಲ್ಲ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ಅವರು ಮನೆಗೆ ಬೀಗ ಹಾಕಿ ಬೇರೆ ಊರಿಗೆ ಹೋಗುವ ಮುನ್ನ ಪಂಚಾಯತ ಸಿಬ್ಬಂದಿ ಮೂಲಕ ಗ್ರಾಮದ ಬೀಟ್ ಪೊಲೀಸ್ ರಿಗೆ ಮಾಹಿತಿ ನೀಡಿ ಅಥವಾ ಪಕ್ಕದ ಮನೆಯವರಿಗೆ ಮಾಹಿತಿ ನೀಡಿ ಹೋಗಿ ಜೊತೆಗೆ ಮನೆಯಲ್ಲಿದ್ದ ಚಿನ್ನಾಭರಣ ಮತ್ತು ನಗದು ಹಣವನ್ನು ನಿಮಗೆ ವಿಶ್ವಾಸ ಎನಿಸಿದ ಸಂಬಂಧಿಕರ ಅಥವಾ ಹಿತೈಶಿಗಳ ಮನೆಯಲ್ಲಿಟ್ಟು ಹೋಗಿ ಎಂದು ಮನವಿ ಮಾಡಿದರು. 

ಖಿಳೇಗಾಂವ ಗ್ರಾಮ ಪಂಚಾಯತ ಅಧ್ಯಕ್ಷ ರವಿ ನಾಗಗೋಳ ಮಾತನಾಡಿ, ಕೆಲವೇ ದಿನಗಳಲ್ಲಿ ಗ್ರಾಮದ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುತ್ತೇವೆ ಅಲ್ಲದೆ ಗ್ರಾಮಸ್ಥರು ಕೂಡ ಮನೆಯಿಂದ ಹೊರ ಹೋಗುವಾಗ ಮನೆಯಲ್ಲಿ ಹಣ ಮತ್ತು ಬೆಲೆ ಬಾಳುವ ವಸ್ತುಗಳನ್ನು ಇಡಬೇಡಿ ಹಾಗೇನಿದ್ದರೂ ಕೂಡ ಹಣ ಮತ್ತು ಚಿನ್ನಾಭರಣಗಳನ್ನು ಸಂಬಂಧಿಕರ ಮನೆಯಲ್ಲಿ ಇಟ್ಟು ಹೋಗಿ ಎಂದು ಮನವಿ ಮಾಡಿದರು.

ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

ಇತ್ತೀಚಿನ ಸುದ್ದಿ

ಜಾಹೀರಾತು