2:35 AM Saturday18 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಪಿಎಸ್ ಐ ನೇಮಕಾತಿ ಹಗರಣ: ಮೊದಲ Rank ಪಡೆದ ರಚನಾ ವಿರುದ್ಧವೂ ಸಿಐಡಿಯಿಂದ ಕೇಸು ದಾಖಲು

02/05/2022, 19:10

ಬೆಂಗಳೂರು(reporterkarnataka.com): ಕಡು ಬಡತನದಲ್ಲಿ ಓದಿ ಪಿಎಸ್ ಐ ನೇಮಕಾತಿಯಲ್ಲಿ ಪಾಸ್ ಆಗಿ, ಹುದ್ದೆ ಪಡೆದಿದ್ದೇನೆ ಎಂದು ಪ್ರತಿಭಟನೆಯಲ್ಲಿ ಕಣ್ಣೀರ ಕತೆ ಹೇಳಿದ್ದ ಮೊದಲ Rank ಬಂದಿದ್ದ ರಚನಾ ವಿರುದ್ಧವೂ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಕಳೆದ ಏ.30ರಂದು ಫ್ರೀಡಂ ಪಾರ್ಕ್ ನಲ್ಲಿ ರಾಜ್ಯ ಸರ್ಕಾರ ಪಿಎಸ್ ಐ ನೇಮಕಾತಿ ಮರು ಪರೀಕ್ಷೆ ವಿರೋಧಿಸಿ ನಡೆಸಿದ ಆಯ್ಕೆ ಪಟ್ಟಿಯಲ್ಲಿನ ಅಭ್ಯರ್ಥಿಗಳ ಪ್ರತಿಭಟನೆಯಲ್ಲಿ, ಮಹಿಳಾ ವಿಭಾಗದಲ್ಲಿ ಮೊದಲ Rank ಪಡೆದ ಅಭ್ಯರ್ಥಿ ರಚನಾ ಭಾಗಿಯಾಗಿ ತನ್ನ ಕಡು ಬಡತನದಲ್ಲಿ ಓದಿ ಪರೀಕ್ಷೆ ಪಾಸ್ ಮಾಡಿದ್ದನ್ನು ಹೇಳಿಕೊಂಡಿದ್ದರು.

ನಮ್ಮ ತಂದೆ ಹೆಣ್ಣು ಮಗು ಎನ್ನುವ ಕಾರಣಕ್ಕೆ ನನ್ನನ್ನು ಬಿಟ್ಟು ಹೋಗಿದ್ದರು. ತಾಯಿ ಸಾಕಿದ್ದು ಕಡು ಬಡತನದಲ್ಲಿ ಓದಿ ಪಿಎಸ್ ಐ ನೇಮಕಾತಿಯಲ್ಲಿ ಪಾಸ್ ಆಗಿ, ಹುದ್ದೆ ಪಡೆದಿದ್ದು ಪರೀಕ್ಷೆ ರದ್ದುಪಡಿಸಿರುವುದರಿಂದ ನಾನು ಸಂಕಷ್ಟಕ್ಕೆ ಸಿಲುಕಿದ್ದೇನೆ ಎಂದಿದ್ದರು

ಪಿಎಸ್ ಐ ನೇಮಕಾತಿ ಅಕ್ರಮದಲ್ಲಿ ನಾನು ಭಾಗಿಯಾಗೇ ಇಲ್ಲ. ಕಷ್ಟದಿಂದ ಬೆಳೆದು ಬಂದಿದ್ದೇನೆ. ನಾನು, ನಮ್ಮ ತಾಯಿ ಇಬ್ಬರೇ ಇದ್ದೇವೆ. ಕಡು ಬಡತನದಲ್ಲೇ ಓದಿ, ಪಿಎಸ್ ಐ ಪರೀಕ್ಷೆಯಲ್ಲಿ ಮಹಿಳಾ ವಿಭಾಗದಲ್ಲಿ ಮೊದಲ Rank ಪಡೆದಿದ್ದೇನೆ. ಆದರೆ ಸರ್ಕಾರ ಮರು ಪರೀಕ್ಷೆ ಆದೇಶ ಕೇಳಿ ಆತಂಕ ಗೊಂಡಿದ್ದೇನೆ ಎಂದು ಹೇಳಿದ್ದರು.

ಇದೀಗ ರಚನಾ ವಿರುದ್ಧವೂ ಎಫ್ ಐಆರ್ ದಾಖಲಾಗಿದೆ. ಅವರ ಒಎಂಆರ್ ಶೀಟ್ ಹಾಗೂ ಕಾರ್ನ್ ಶೀಟ್ ನಲ್ಲಿ ವ್ಯತ್ಯಾಸ ಕಂಡು ಬಂದ ಕಾರಣ, ಅವರ ವಿರುದ್ಧವೂ ಸಿಐಡಿ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಪರಿಣಾಮ, ಎಫ್ ಐಆರ್ ದಾಖಲಾಗಿದೆ. ಇವರಷ್ಟೇ ಅಲ್ಲದೇ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜಾಗೃತ್ ಸೇರಿದಂತೆ 22 ಮಂದಿಯ ವಿರುದ್ಧವೂ ದೂರು ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು