2:45 AM Friday26 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ವಾಯ್ಸ್ ಆಫ್ ಆರಾಧನಾ’: ಏಪ್ರಿಲ್ ತಿಂಗಳ ಟಾಪರ್ ಆಗಿ ಬಾಲಪ್ರತಿಭೆಗಳಾದ ಮೇಘನಾ ರಾವ್ ಹಾಗೂ ದೀಕ್ಷ್ಣಕಲ್ಮಾಡಿ ಆಯ್ಕೆ

07/05/2022, 17:45

ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದೊಂದಿಗೆ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಏಪ್ರಿಲ್ ತಿಂಗಳ ಟಾಪರ್ ಆಗಿ ಬಾಲಪ್ರತಿಭೆಗಳಾದ ಮೇಘನಾ ವಿ. ರಾವ್ ಹಾಗೂ ದೀಕ್ಷ್ಣಎನ್ . ಕಲ್ಮಾಡಿ ಆಯ್ಕೆಗೊಂಡಿದ್ದಾರೆ.

ಪಾಣೆಮಂಗಳೂರು ನಿವಾಸಿಯಾದ ವೆಂಕಟೇಶ್ ರಾವ್ ಬಿ. ಹಾಗೂ ರಶ್ಮಿ ವಿ. ರಾವ್ ಅವರ ಪುತ್ರಿಯಾದ ಮೇಘನಾ 7ನೇ ತರಗತಿಯ ವಿದ್ಯಾರ್ಥಿನಿ. ಬಂಟ್ವಾಳದ ಎಸ್. ವಿ.ಎಸ್. ಸ್ಕೂಲ್ ನಲ್ಲಿ ಶಿಕ್ಷಣ ಪಡೆಯುತ್ತಿದ್ದಾಳೆ.
ಸಂಗೀತ, ಚಿತ್ರಕಲೆ, ಡ್ಯಾನ್ಸ್ ನಲ್ಲಿ ಆಸಕ್ತಿ ಹೊಂದಿದ್ದಾಳೆ. ಶಾಸ್ತ್ರೀಯ ಸಂಗೀತದಲ್ಲಿ ಜೂನಿಯರ್ ಆಗಿದ್ದು ಸೀನಿಯರ್ ಕಲಿಯುತ್ತಿದ್ದಾಳೆ. ಗುರುಗಳು ವಿದ್ವಾನ್ ಕೃಷ್ಣ ಆಚಾರ್ಯ ಮತ್ತು ರಜತ ಆಚಾರ್ಯ ಅವರು ಮೇಘನಾಳ ಗುರುಗಳು.
ಸುಗಮ ಸಂಗೀತವನ್ನು ಯಶು ಸ್ನೇಹ ಗಿರಿ ಅವರ ಬಳಿ ಕಲಿಯುತ್ತಿದ್ದಾಳೆ. ಪ್ರತಿಭಾ ಕಾರಂಜಿಯಲ್ಲಿ ನಾಲ್ಕನೇ ತರಗತಿಯಲ್ಲಿ ತಾಲೂಕು ಮಟ್ಟದ ವರೆಗೆ ಹೋಗಿರುತ್ತಾಳೆ. ಸೂಕ್ತ ನ್ಯೂಸ್ ಆಯೋಜಿಸಿರುವ ಗಾನಸಿರಿ ಜೂನಿಯರ್ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾಳೆ. ಚಿನ್ನರ ಲೋಕ ಟ್ರಸ್ಟ್ ಆಯೋಜಿಸಿರುವ ಕರಾವಳಿ ಸರಿಗಮಪ ಸ್ಪರ್ಧೆಯಲ್ಲಿ(2021) ಸೆಮಿಫೈನಲಿಸ್ಟ್ ಆಗಿದ್ದಳು. ವಾಯ್ಸ್ ಆಫ್ ಕಲಾಂಜಲಿ ಜೂನಿಯರ್ ಆಡಿಷನ್ ನಲ್ಲಿ ಸೆಲೆಕ್ಟ್ ಆಗಿ ಮುಂದಿನ ಭಾಗಕ್ಕೆ ಆಯ್ಕೆಯಾಗಿದ್ದಾಳೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ನಡೆಸಿದ ಜೋಕುಲೆನ ತುಳು ಪದ ರಂಗಿತ ಪಂತ ದಲ್ಲಿ ಪ್ರಥಮ ಬಹುಮಾನವನ್ನು ಪಡೆದಿರುತ್ತಾಳೆ. ಮುಳಿಯ ಗಾನ ರಥ 2021 ಕಾರ್ಯಕ್ರಮದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಮುಂದಿನ ಸುತ್ತಿಗೆ ಆಯ್ಕೆಯಾಗಿರುತ್ತಾಳೆ.

ಇತ್ತೀಚಿನ ಸುದ್ದಿ

ಜಾಹೀರಾತು