10:29 PM Friday26 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರದಲ್ಲಿ ಯೂನಿವರ್ಸಲ್  ಚೆಕ್‍ಪೋಸ್ಟ್ ಗೆ ಚಿಂತನೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

14/05/2022, 11:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರದಲ್ಲಿ ಯೂನಿವರ್ಸಲ್ ಚೆಕ್‍ಪೋಸ್ಟ್ ನಿರ್ಮಾಣಕ್ಕೆ ಚಿಂತನೆ ನಡೆಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹೇಳಿದರು.

ಕೊಟ್ಟಿಗೆಹಾರದ ಚೆಕ್‍ಪೋಸ್ಟ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ಕೃಷಿ ಉತ್ಪನ್ನಗಳ ತನಿಖಾ ಠಾಣೆಯೂ ಎಲ್ಲವೂ ಒಂದೇಡೆ ಕಾರ್ಯ ನಿರ್ವಹಿಸುವಂತೆ ಯೂನಿವರ್ಸಲ್ ಚೆಕ್‍ಪೋಸ್ಟ್ ನಿರ್ಮಿಸಲು ಚಿಂತನೆ ನಡೆಸಲಾಗುವುದು. ಕೊಟ್ಟಿಗೆಹಾರದಲ್ಲಿ ಪೊಲೀಸ್ ಇಲಾಖೆ, ಜಿಲ್ಲಾಡಳಿತ ಹಾಗೂ ಸ್ಥಳೀಯ ವರ್ತಕರ ಸಹಕಾರದಿಂದ ಸಿಸಿ ಕ್ಯಾಮರಾ ಅಳವಡಿಸಲು ಉದ್ದೇಶಿಸಲಾಗಿದೆ. ಸ್ಥಳೀಯ ವರ್ತಕರ ಪಾಲುದಾರಿಕೆ ಇದ್ದರೆ ಸಿಸಿ ಕ್ಯಾಮರಾದ ಬಗ್ಗೆ ಮುತುವರ್ಜಿ ವಹಿಸಲು ಸಾಧ್ಯವಾಗುತ್ತದೆ ಎಂದರು.

ಚಾರ್ಮಾಡಿ ಘಾಟ್‍ನಲ್ಲಿ ಈಗಾಗಲೇ ಪೊಲೀಸ್ ಗಸ್ತು ವಾಹನ ಸಂಚರಿಸುತ್ತಿದ್ದು ಇದನ್ನು ಮತ್ತಷ್ಟು ಹೆಚ್ಚಿಸುವಂತೆ ವೃತ್ತ ನಿರೀಕ್ಷಕ ಸೋಮಶೇಖರ್ ಅವರಿಗೆ ಸೂಚಿಸಿದರು. ದರೋಡೆ ನಡೆದ ಕೇವಲ 10 ಗಂಟೆಯೊಳಗೆ ಆರೋಪಿಯನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಪ್ರಭು, ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಹರ್ಷಕುಮಾರ್, ತಾ.ಪಂ ಸಹಾಯಕ ನಿರ್ದೇಶಕರಾದ ಪ್ರಕಾಶ್, ನೌಕರರ ಸಂಘದ ಪ್ರತಿನಿಧಿ ಪದ್ಮರಾಜ್, ವೃತ್ತ ನಿರೀಕ್ಷಕ ಸೋಮಶೇಖರ್, ಬಣಕಲ್ ಠಾಣೆ ಪಿಎಸ್‍ಐ ಸತೀಶ್, ಅರಣ್ಯ ರಕ್ಷಕ ವಿಜಯಕುಮಾರ್, ಸಾಮಾಜಿಕ ಕಾರ್ಯಕರ್ತ ಸಂಜಯಗೌಡ ಕೊಟ್ಟಿಗೆಹಾರ, ದೇವೆಂದ್ರ ಮುಂತಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು