6:06 PM Tuesday23 - April 2024
ಬ್ರೇಕಿಂಗ್ ನ್ಯೂಸ್
ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್… ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ… ಗಾಳಿ ಮಳೆಗೆ ಮರ ಬಿದ್ದು ತಂಡಾದ ಪವರ್ ಲೈನ್: ವಿದ್ಯುತ್ ಶಾಕ್ ಹೊಡೆದು… ಕೊಲ್ಯದಿಂದ ಅಬ್ಬಕ್ಕ ರಾಣಿ ಸರ್ಕಲ್‌ ವರೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ… 91ರ ಹರೆಯದ ಮಾಜಿ ಪ್ರಧಾನಿ ದೇವೇಗೌಡರು ಮೋದಿ ಗೆಲ್ಲಿಸಿ ಎನ್ನುತ್ತಿದ್ದಾರೆ; ದಿನಬಳಕೆ ವಸ್ತುಗಳ…

ಇತ್ತೀಚಿನ ಸುದ್ದಿ

ಬಡವರ ಅನ್ನಕ್ಕೂ ಕನ್ನ: ಇಂದಿರಾ ಕ್ಯಾಂಟೀನ್ ಊಟ ಹೋಟೆಲ್ ಗಳಿಗೆ ಸಪ್ಲೈ: ದಿನಕ್ಕೆ ಲಕ್ಷಗಟ್ಟಲೆ ಖಮಾಯಿ! 

17/05/2022, 10:13

ಬೆಂಗಳೂರು(reporterkarnataka.com):  ಬಡ ಹಾಗೂ ಮದ್ಯಮ ವರ್ಗದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯಾದ್ಯಂತ ತೆರೆದಿರೋದೆ ಇಂದಿರಾ ಕ್ಯಾಂಟೀನ್ ನ ಬಹು ದೊಡ್ಡ ಕರ್ಮಕಾಂಡ ಹೊರಗೆ ಬಿದ್ದಿದೆ. ಇಲ್ಲಿ ಬೆಯಿಸಲಾದ ಊಟ, ತಿಂಡಿಯನ್ನು ಹೋಟೆಲ್ ಗಳಿಗೆ ಸೇಲ್ ಮಾಡಲಾಗುತ್ತಿದೆ.

ರಾಜ್ಯದ ರಾಜಧಾನಿ ಬೆಂಗಳೂರಿನ ಪ್ರತಿ ವಾರ್ಡ್ ಗಳಲ್ಲಿಯೂ ಇಂದಿರಾ ಕ್ಯಾಂಟೀನ್  ನಿರ್ಮಾಣ ಮಾಡಲಾಗಿದೆ. ಈ ಮೂಲಕ ಬಡ ವರ್ಗದವರ ಹಸಿವನ್ನು ನೀಗಿಸಲು ಕ್ರಮ ಕೈಗೊಳ್ಳಲಾಗಿತ್ತು.

ಆದರೆ ಇಂದಿರಾ ಕ್ಯಾಂಟೀನ್ ಗೆ ಬರೋ ಸಂಖ್ಯೆ ಕಡಿಮೆಯಾಗಿದ್ದನ್ನೇ ನೇಪವಾಗಿಟ್ಟುಕೊಂಡು, ಸಿಬ್ಬ ಕಳ್ಳಾಟ ಆರಂಭಿಸಲಾಗಿದೆ. ಇಂದಿರಾ ಕ್ಯಾಂಟೀನ್ ಸಿಬ್ಬಂದಿಗಳ ದೊಡ್ಡ ಕರ್ಮಕಾಂಡ ಇದೀಗ ಬಯಲಾಗಿದೆ.

ಇಂದಿರಾ ಕ್ಯಾಂಟೀನ್ ತಿಂಡಿ, ಊಟಕ್ಕೆ ಜನರು ಬಾರದ ಕಾರಣ, ಕೆಲ ಕ್ಯಾಂಟೀನ್ ಸಿಬ್ಬಂದಿಗಳು, ಹೋಟೆಲ್ ಮಾಲೀಕರೊಂದಿಗೆ ಶಾಮೀಲಾಗಿ, ಇಂದಿರಾ ಕ್ಯಾಂಟೀನ್ ಊಟವನ್ನು ಹೋಟೆಲ್ ಗಳಿಗೆ ಮಾರಾಟ ಮಾಡುತ್ತಿರೋದಾಗಿ ತಿಳಿದು ಬಂದಿದೆ.

ಬೆಂಗಳೂರಿನ ವಿಶ್ವನಾಥ ನಾಗೇನಹಳ್ಳಿಯ ವಾರ್ಡ್ ನಂ.22ರಲ್ಲಿ, ಹೆಬ್ಬಾಳ್ಳ ಪ್ಲೈಓವರ್, ಶಿವಾಜಿ ನಗರದ ವಾರ್ಡ್ ನಂ.92ರಲ್ಲಿ, ಡಾಲರ್ಸ್ ಕಾಲೋನಿ ಬಳಿಯ ರಾಧಾಕೃಷ್ಣ ದೇವಸ್ಥಾನದ ವಾರ್ಡ್ ನಂ.18ರಲ್ಲಿ ಸೇರಿದಂತೆ ಅನೇಕ ಕಡೆಗಳಲ್ಲಿ ಹೋಟೆಲ್ ಗೆ ಊಟ ಬೇಕು, ನಾವು ಬೇರೆ ಕಡೆ ಮಾರಿಕೊಳ್ಳುತ್ತೇವೆ ಅಂದ್ರೇ ಸಾಕು, ದಿನಾ ಬನ್ನಿ ಕೊಡ್ತೀವಿ ಎಂಬುದಾಗಿ ಕ್ಯಾಂಟೀನ್ ಸಿಬ್ಬಂದಿ ಹೇಳುತ್ತಿದ್ದಾರೆ.

ಇಂತಿಷ್ಟು ರೇಟ್ ಫಿಕ್ಸ್ ಮಾಡಿಕೊಂಡು ಹೋಟೆಲ್ ನವರು ಕೇಳುವಷ್ಟು ತಿಂಡಿ, ಊಟ ನೀಡಲಾಗುತ್ತದೆ. ಒಂದು ವೇಳೆ ಗ್ರಾಹಕರು ಹೆಚ್ಚು ಬಂದ್ರು, ಹೋಟೆಲ್ ಗೆ ಕ್ಯಾಂಟೀನ್ ತಿಂಡಿ, ಊಟ ಸೇಲ್ ಮಾಡಿದ ಕಾರಣ, ಇಲ್ಲ ಎಂದು ಹೇಳಲಾಗುತ್ತಿದೆ. ಈ ಮೂಲಕ ಇಂದಿರಾ ಕ್ಯಾಂಟೀನ್ ಊಟವನ್ನು, ಸಿಬ್ಬಂದಿಗಳು ಅಡ್ಡದಾರಿಯ ಮೂಲಕ ಹೋಟೆಲ್ ಗಳಿಗೆ, ಕೇಳಿದವರಿಗೆ ಮಾರಿಕೊಳ್ಳುತ್ತಿರೋ ವಿಷಯ ಬೆಳಕಿಗೆ ಬಂದಿದೆ. ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು