3:06 PM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಕುತುಬ್‌ ಮಿನಾರ್‌: ಪುರಾತತ್ವ ಇಲಾಖೆ ಮಾಜಿ ನಿರ್ದೇಶಕ ಧರಂವೀರ್ ಶರ್ಮಾ ಹೇಳಿದ್ದೇನು..?

19/05/2022, 12:51

ಹೊಸದಿಲ್ಲಿ(reporterkarnataka.com): ಕುತುಬ್ ಮಿನಾರ್ ಬಗ್ಗೆ ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ.ದೇಶದೆಲ್ಲೆಡೆ ಸ್ಮಾರಕಗಳ ಬಗ್ಗೆ ವಿವಾದಗಳು ಭುಗಿಲೇಳುತ್ತಿರುವ ಬೆನ್ನಲ್ಲೇ ಭಾರತೀಯ ಪುರಾತತ್ವ ಇಲಾಖೆಯ ಮಾಜಿ ನಿರ್ದೇಶಕರು ಈ ಸ್ಫೋಟಕ ಮಾಹಿತಿಯನ್ನು ಹೊರಹಾಕಿದ್ದಾರೆ. ಅದೇನೆಂದರೆ ಕುತುಬ್‌ ಮಿನಾರ್‌ ನಿರ್ಮಿಸಿದ್ದು ಕುತುಬ್‌ ಉದ್‌ ದೀನ್‌ ಐಬಕ್‌ ಅಲ್ಲ ಎಂದು ಹೇಳಿದ್ದಾರೆ.

5ನೇ ಶತಮಾನದಲ್ಲಿ ದೆಹಲಿಯಲ್ಲಿ ಆಳ್ವಿಕೆ ನಡೆಸುತ್ತಿದ್ದ  ವಿಕ್ರಮಾದಿತ್ಯ ಎಂಬ ರಾಜನು ಸೂರ್ಯನ ಪರಿವೀಕ್ಷಣೆಗೆ ಅದನ್ನು ನಿರ್ಮಾಣ ಮಾಡಿದ್ದಾನೆ. ಇದು ಕುತುಬ್ ಮಿನಾರ್ ಅಲ್ಲ ಸೂರ್ಯ ಗೋಪುರ (ವೀಕ್ಷಣಾ ಗೋಪುರ) ಎಂದು ಕರೆಯಲಾಗುತ್ತಿತ್ತು. ಈ ಬಗ್ಗೆ ಅನೇಕ ಪುರಾವೆಗಳಿವೆ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕ ಧರಂವೀರ್ ಶರ್ಮಾ ಹೇಳಿದ್ದಾರೆ. ಎಎಸ್ ಐ ಪರವಾಗಿ ಹಲವು ಬಾರಿ ಕುತುಬ್ ಮಿನಾರ್ ಸರ್ವೆ ಮಾಡಿದ್ದಾರೆ.

ಕುತುಬ್‌ ಗೋಪುರವು 25 ಇಂಚು ಓರೆಯಾಗಿದೆ. ಸೂರ್ಯನನ್ನು ವೀಕ್ಷಿಸಲು ಅನುಕೂಲವಾಗಲೆಂದು ಈ ರಚನೆಯಿದೆ. ಜೂನ್‌ 21ರಂದು ಅಯನ ಸಂಕ್ರಾಂತಿಯ ನಡುವೆ ಆ ಪ್ರದೇಶದ ಮೇಲೆ ಕನಿಷ್ಟ ಅರ್ಧಗಂಟೆ ನೆರಳು ಬೀಳುವುದಿಲ್ಲ. ಇದು ವಿಜ್ಞಾನ ಮತ್ತು ಪುರಾತತ್ತ್ವ ಶಾಸ್ತ್ರದ ಸತ್ಯ. ಕುತುಬ್‌ ಮಿನಾರ್‌ ಗೂ ಅದರ ಪಕ್ಕದಲ್ಲಿರುವ ಮಸೀದಿಗೂ ಯಾವುದೇ ಸಂಬಂಧವಿಲ್ಲ. ಕುತುಬ್‌ ಮಿನಾರ್‌ ಎಂದು ಕರೆಯಲ್ಪಡುವ ಕಟ್ಟಡವು ಸ್ವತಂತ್ರ ರಚನೆಯಾಗಿದೆ. ಕುತುಬ್ ಮಿನಾರ್‌ನ ಬಾಗಿಲು ಕೂಡ ಉತ್ತರಕ್ಕೆ ಮುಖ ಮಾಡಿದೆ. ಇದು ರಾತ್ರಿ ಸಮಯದಲ್ಲಿ ಧ್ರುವ ನಕ್ಷತ್ರವನ್ನು ನೋಡುವುದನ್ನು ಸೂಚಿಸುತ್ತದೆ.


ಈ ಮಾತುಗಳನ್ನಾಡಿರುವ ಶರ್ಮಾ ಅವರು ಹಲವು ಬಾರಿ ಎಎಸ್ ಐ ಪರವಾಗಿ ಕುತುಬ್ ಮಿನಾರ್ ಸರ್ವೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು