7:41 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ಬೆಂಗ್ರೆ: ಪುನರಾರಂಭಗೊಂಡ ಉಪ ಆರೋಗ್ಯ ಕೇಂದ್ರ ಶಾಸಕ ವೇದವ್ಯಾಸ್ ಕಾಮತ್ ಅವರಿಂದ ಉದ್ಘಾಟನೆ

20/05/2022, 23:38

ಮಂಗಳೂರು(reporterkarnataka.com):ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬೆಂಗ್ರೆಯಲ್ಲಿ ಪುನರಾರಂಭಗೊಂಡ ಉಪ ಆರೋಗ್ಯ ಕೇಂದ್ರವನ್ನು ಶಾಸಕ ವೇದವ್ಯಾಸ್ ಕಾಮತ್ ಉದ್ಘಾಟಿಸಿದರು. 

ಈ ಕುರಿತು ಮಾತನಾಡಿದ ಅವರು, ಬೆಂಗ್ರೆ ಭಾಗದ ಜನರ ಅನುಕೂಲಕ್ಕಾಗಿ ಈ ಹಿಂದೆ ನೀಡಿದ್ದ ಭರವಸೆಯಂತೆ ಉಪ ಆರೋಗ್ಯ ಕೇಂದ್ರ ಸ್ಥಾಪಿಸಲಾಗಿದೆ. ಎಂಸಿಎಫ್ ಸಂಸ್ಥೆಯ ಸಹಕಾರದೊಂದಿಗೆ ಆರೋಗ್ಯ ಕೇಂದ್ರವನ್ನು ಅಭಿವೃದ್ಧಿಪಡಿಸಲಾಗಿದ್ದು ಮುಕ್ಕ ಶ್ರೀನಿವಾಸ್ ಆಸ್ಪತ್ರೆಯ ಮುಖ್ಯಸ್ಥರು ವೈದ್ಯರನ್ನು ನೇಮಕಗೊಳಿಸಲು ಜಿಲ್ಲಾಡಳಿತದೊಂದಿಗೆ ಬಹಳಷ್ಟು ಸಹಕಾರ ನೀಡಿದ್ದಾರೆ. ಆರೋಗ್ಯ ಕೇಂದ್ರಕ್ಕೆ ಸದ್ಯ ಮುಕ್ಕ ಶ್ರೀನಿವಾಸ್ ಆಸ್ಪತ್ರೆಯ ವೈದ್ಯರನ್ನು ನೇಮಿಸಲಾಗಿದೆ ಎಂದರು.

ತೋಟ ಬೆಂಗ್ರೆ, ಕಸಬಾ ಬೆಂಗ್ರೆ ಹಾಗೂ ಬೊಕ್ಕಪಟ್ಣ ಬೆಂಗ್ರೆ ಪರಿಸರದ ನಾಗರಿಕರು ಚಿಕಿತ್ಸೆಗಾಗಿ ನಗರಕ್ಕೆ ಬರಬೇಕಾಗಿತ್ತು. ಬೆಂಗ್ರೆಯಲ್ಲಿ ಆರೋಗ್ಯ ಕೇಂದ್ರ ಪುನರಾರಂಭಿಸುವುದರಿಂದ ನಾಗರಿಕರಿಗೆ ಪ್ರಾಥಮಿಕ ಚಿಕಿತ್ಸೆ ಪಡೆಯುವ‌ ಸೌಲಭ್ಯ ಒದಗಿಸಲಾಗಿದೆ. ಬೆಂಗ್ರೆ ಪರಿಸರದ ಸಾರ್ವಜನಿಕರು ನಗರವನ್ನೇ ಅವಲಂಬಿಸಿರುವುದರಿಂದ ಬೇಡಿಕೆಗಳನ್ನು ಇಲ್ಲಿಯೇ ಪೂರೈಸಲು ಪ್ರಯತ್ನಿಸಲಾಗುವುದು. ಆರೋಗ್ಯ ಕೇಂದ್ರದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡಿದ ಎಂ.ಸಿ.ಎಫ್ ಸಂಸ್ಥೆಯ ಪ್ರಮುಖರಿಗೆ ಹಾಗೂ ಶ್ರೀನಿವಾಸ್ ಆಸ್ಪತ್ರೆಯ ಪ್ರಮುಖರಿಗೆ ಧನ್ಯವಾದಗಳನ್ನು ಸಲ್ಲಿಸಿದರು.

ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಮಾತನಾಡಿ, ಬೆಂಗ್ರೆಯ ನಾಗರಿಕರು ಪ್ರತಿಯೊಂದು ವಿಚಾರಕ್ಕೂ ಸುತ್ತು ಬಳಸಿ ಬರಬೇಕಾಗಿರುವುದರಿಂದ ಇಲ್ಲಿ ಆರೋಗ್ಯ ಕೇಂದ್ರ ಸ್ಥಾಪನೆ ಬಹಳಷ್ಟು ಉಪಯೋಗಕರವಾಗಿದೆ. ಈ ನಿಟ್ಟಿನಲ್ಲಿ ಶಾಸಕರ ಪ್ರಯತ್ನ ಶ್ಲಾಘನೀಯ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಮೀನುಗಾರಿಕಾ ನಿಗಮದ ಅಧ್ಯಕ್ಷರಾದ ನಿತಿನ್ ಕುಮಾರ್, ಎಂ.ಸಿ.ಎಫ್ ಮೆಡಿಕಲ್ ಚೀಫ್ ಡಾ. ಯೋಗೀಶ್ ಭಟ್, ಪಿ.ಆರ್.ಒ ಅವಿನಂದ್, ಶ್ರೀನಿವಾಸ್ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಶ್ರೀನಿವಾಸ್ ರಾವ್, ಆರೋಗ್ಯಾಧಿಕಾರಿ ಕಿಶೋರ್ ಕೊಟ್ಟಾರಿ, ತಾಲೂಕು ಆರೋಗ್ಯಧಿಕಾರಿ ಸುಜಯ್ ಭಂಡಾರಿ, ಸ್ಥಳೀಯ ಕಾರ್ಪೋರೇಟರ್ ಬೆಂಗ್ರೆ, ಮಹಾಜನ ಸಭಾ ಉಪಾಧ್ಯಕ್ಷರಾದ ನರಸಿಂಹ, ಮಾಜಿ ಕಾರ್ಪೋರೇಟರ್ ಮೀರಾ ಕರ್ಕೇರ, ಮುಖಂಡರಾದ ಹೇಮಚಂದ್ರ, ಕಸಬಾ ಬೆಂಗ್ರೆ ಮಸೀದಿಯ ಅಧ್ಯಕ್ಷರಾದ ಬಿಲಾಲ್, ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು