1:46 PM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಕೆನಡಾ ಸಂಸತ್ತಿನಲ್ಲಿ ಕನ್ನಡದ ಕಂಪು: ಮಾತೃಭಾಷೆಯಲ್ಲಿ ಮಾತನಾಡಿದ ಅಪ್ಪಟ ಕನ್ನಡಿಗ ಚಂದ್ರ ಆರ್ಯ

20/05/2022, 16:18

ಒಟ್ಟಾವ(reporterkarnataka.com): ಕೆನಡಾದ ಸಂಸತ್ತಿನಲ್ಲಿ ಕನ್ನಡದ ಧ್ವನಿ ಮೊಳಗಿದೆ. ಕೆನಡಾ ಸಂಸತ್ತಿನ ಸದಸ್ಯನಾಗಿ ಆಯ್ಕೆಯಾದ ಅಪ್ಪಟ ಕನ್ನಡಿಗರೊಬ್ಬರು ಸಂಸತ್ತಿನಲ್ಲಿ ಕನ್ನಡ ಮಾತನಾಡುವ ಮೂಲಕ ಇಡೀ ವಿಶ್ವ ಬೆರಗು ಆಗುವಂತೆ ಮಾಡಿದ್ದಾರೆ.

ನೆಪಿಯನ್ ಕ್ಷೇತ್ರದ ಪ್ರತಿನಿಧಿ, ರಾಜ್ಯಸಭೆ ಸದಸ್ಯರಾದ ಕನ್ನಡಿಗ ಚಂದ್ರ ಆರ್ಯ ಅವರು ಕನ್ನಡದಲ್ಲಿ ಮಾತನಾಡಿದರು. ಸ್ಪೀಕರ್ ಅವರ ಪೂರ್ವಾನುಮತಿ ಪಡೆದು ಅವರು ಸಂಸತ್ತನ್ನುದ್ದೇಶಿ ಮಾತನಾಡಿದರು. ರಾಷ್ಟ ಕವಿ ಕುವೆಂಪು ಅವರ ಎಲ್ಲದರು ಇರು,ಎಂಥಾದರು ಇರು, ಎಂದೆಂದಿಗೂ ನೀನು ಕನ್ನಡವಾಗಿರುವ ಕವನಗಳ ಸಾಲುಗಳನ್ನು ಉದ್ಘರಿಸುವ ಮೂಲಕ ಅವರು ಮಾತು ಮುಗಿಸಿದರು.

ನಮ್ಮ ದೇಶದ ಸಂಸತ್ತಿನಿಂದ ಮತ್ತು ರಾಜಕೀಯ‌ದಿಂದ ದೇಶಭಾಷೆಗಳನ್ನು ಕಣ್ಮರೆಯಾಗುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ಕೆನಡಾ ಸಂಸತ್ತಿನಲ್ಲಿ ಚಂದ್ರ ಆರ್ಯ ಅವರು ಕನ್ನಡದ ಕಂಪು ಬೀರಿದ್ದಾರೆ.

ಚಂದ್ರ ಆರ್ಯ ಅವರು ತುಮಕೂರು ಜಿಲ್ಲೆಯ ಶಿರಾ ತಾಲೂಕಿನವರು. ತಾಯಿನುಡಿಯ ಕುರಿತು ಅವರ ಕಾಳಜಿ, ಪ್ರೀತಿ ಉತ್ಸಾಹ ನಿಜಕ್ಕೂ ಅನುಕರಣೀಯ.

ಇತ್ತೀಚಿನ ಸುದ್ದಿ

ಜಾಹೀರಾತು