4:21 PM Tuesday16 - April 2024
ಬ್ರೇಕಿಂಗ್ ನ್ಯೂಸ್
ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ… ಮಂಗಳೂರಿನಲ್ಲಿ ನಾಳೆ ‘ಇಂಡಿಯಾ’ ಘಟಕ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ‘ಬಿಜೆಪಿ… ವಿಜಯ ಬ್ಯಾಂಕ್, ಕಾರ್ಪೊರೇಶನ್ ಬ್ಯಾಂಕ್‌ ಎಲ್ಲಿಗೆ ಹೋಯಿತು?; ಬಿಜೆಪಿ ನಾಯಕರು ಉತ್ತರಿಸಲಿ: ಮಾಜಿ… ಪ್ರಧಾನಿ ಮೋದಿ ರೋಡ್ ಶೋ: ಏರ್ ಪೋರ್ಟ್ ನಿಂದ ಲೇಡಿಹಿಲ್ ವರೆಗೆ ಎಸ್… ದ.ಕ.ಲೋಕಸಭೆ: ತಗ್ಗಿತೇ ಬಿಜೆಪಿ ಪ್ರಚಾರ?: ದಿನ ಕಳೆದಂತೆ ಸ್ಟ್ರಾಂಗ್ ಆಗುತ್ತಿದೆಯೇ ಪದ್ಮರಾಜ್ ಟೀಮ್… ಪೋಷಕರ ನಿರ್ಲಕ್ಷ್ಯ: ಏರ್ ಗನ್ ನಲ್ಲಿ ಶೂಟ್ ಮಾಡಿಕೊಂಡು 7 ವರ್ಷದ ಬಾಲಕ… ಬಾಳೆಹೊನ್ನೂರು ಭಾಗದಲ್ಲಿ ಭಾರೀ ವರ್ಷಧಾರೆ: ಕಾದ ನೆಲಕ್ಕೆ ತಂಪೆರಚಿದ ಮಳೆ; ಕೃಷಿಕರ ಮೊಗದಲ್ಲಿ… ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ…

ಇತ್ತೀಚಿನ ಸುದ್ದಿ

ಲಿವ್‌ ಇನ್‌ ಸಂಬಂಧದಲ್ಲಿ ಜನಿಸಿದ ಮಗು ತಂದೆಯ ಆಸ್ತಿಗೆ ಅರ್ಹ: ಸುಪ್ರೀಂ ಕೋರ್ಟ್‌  ಮಹತ್ವದ ತೀರ್ಪು

14/06/2022, 21:02

ಹೊಸದಿಲ್ಲಿ (reporterkarnataka.com): ಪುರುಷ ಮತ್ತು ಮಹಿಳೆಯ ದೀರ್ಘಕಾಲದ ಲಿವ್‌ ಇನ್‌(ಸಹಬಾಳ್ವೆ)  ಸಂಬಂಧದಲ್ಲಿ ಹುಟ್ಟಿದ ಮಗು ತಂದೆ ಆಸ್ತಿಯಲ್ಲಿ ಪಾಲನ್ನು ಪಡೆಯುವ ಹಕ್ಕು ಹೊಂದಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ತಂದೆ ಮತ್ತು ತಾಯಿ ಮದುವೆಯಾಗಿಲ್ಲ ಎಂಬ ಕಾರಣಕ್ಕೆ ಮಗುವಿಗೆ ಆಸ್ತಿಯಲ್ಲಿ ಹಕ್ಕಿಲ್ಲವೆಂದು ಕೇರಳ ಹೈಕೋರ್ಟ್‌ ನೀಡಿದ್ದ ತೀರ್ಪು ಅನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌, ಆದರೆ ಮಗುವಿನ ಪೋಷಕರು ಮದುವೆಯಾಗದಿದ್ದರೂ, ಅವರು ದೀರ್ಘಕಾಲದವರೆಗೆ ಪತಿ-ಪತ್ನಿಯಂತೆ ಒಟ್ಟಿಗೆ ವಾಸಿಸುತ್ತಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ಡಿಎನ್‌ಎ ಪರೀಕ್ಷೆಯಲ್ಲಿ ಮಗು ತಮ್ಮದೇ ಎಂದು ಸಾಬೀತುಪಡಿಸಿದರೆ, ಆ ಮಗು ತಂದೆಯ ಆಸ್ತಿಗೆ ಅರ್ಹವಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ.

ಕೇರಳದಲ್ಲಿ ವ್ಯಕ್ತಿಯೊಬ್ಬ ತಂದೆಯ ಆಸ್ತಿಯಿಂದ ವಂಚಿತನಾಗಿದ್ದೇನೆಂದು ಹೈಕೋರ್ಟ್‌ ಮೆಟ್ಟಿಲೇರಿದ್ದ. ತಾನು ಅಕ್ರಮ ಸಂತಾನ ಎಂದು ಹೇಳುವ ಮೂಲಕ ಆಸ್ತಿ ಹಕ್ಕುಗಳಿಂದ ತನ್ನನ್ನು ಹೊರಹಾಕಲಾಗಿದೆ ಎಂದು ಆತ ವಾದಿಸಿದ್ದ. ಆದರೆ ಆ ವ್ಯಕ್ತಿಯ ಹೆತ್ತವರು ಮದುವೆಯೇ ಆಗಿಲ್ಲ ಎಂದು ಉಲ್ಲೇಖಿಸಿದ್ದ ಕೇರಳ ಹೈಕೋರ್ಟ್‌, ಆಸ್ತಿಯ ಮೇಲೆ ಆತನಿಗೆ ಯಾವುದೇ ಹಕ್ಕಿಲ್ಲ ಎಂದು ತೀರ್ಪು ನೀಡಿತ್ತು.

ಇದನ್ನು ಪ್ರಶ್ನಿಸಿ ಆತ ಸುಪ್ರೀಂ ಮೆಟ್ಟಿಲೇರಿದ್ದ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್. ಅಬ್ದುಲ್ ನಜೀರ್ ಮತ್ತು ವಿಕ್ರಮ್ ನಾಥ್ ಅವರಿದ್ದ ಪೀಠ, ಕೇರಳ ಹೈಕೋರ್ಟ್‌ ತೀರ್ಪನ್ನು ತಳ್ಳಿ ಹಾಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು