4:44 PM Wednesday24 - April 2024
ಬ್ರೇಕಿಂಗ್ ನ್ಯೂಸ್
ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್…

ಇತ್ತೀಚಿನ ಸುದ್ದಿ

2 ದಿನಗಳ ರಾಜ್ಯ ಪ್ರವಾಸಕ್ಕೆ ತೆರೆ: ದೆಹಲಿಗೆ ನಿರ್ಗಮಿಸಿದ ಪ್ರಧಾನಿ ನರೇಂದ್ರ ಮೋದಿ

21/06/2022, 20:45

ಮೈಸೂರು(reporterkarnataka.com):

ಪ್ರಧಾನಿ ನರೇಂದ್ರ ಮೋದಿ ಅವರ 2 ದಿನಗಳ ಪ್ರವಾಸ ಮುಕ್ತಾಯಗೊಂಡಿದ್ದು, ಅವರು ಮೈಸೂರು ವಿಮಾನ ನಿಲ್ದಾಣದಿಂದ ದೆಹಲಿಗೆ ವಾಪಸಾಗಿದ್ದಾರೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಂಗಳವಾರ 8 ನೇ ಅಂತಾರಾಷ್ಟ್ರೀಯ ಯೋಗ ದಿನಾಚಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು, ರಾಜ್ಯದಲ್ಲಿ 33 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ ನೀಡಿದ್ದರು. ಅಲ್ಲದೆ ಮೈಸೂರಿನ ವಸ್ತುಪ್ರದರ್ಶನ ಮೈದಾನದಲ್ಲಿ ಸಮಗ್ರ ಡಿಜಿಟಲ್ ಯೋಗ ಪ್ರದರ್ಶನ ವೀಕ್ಷಣೆ, ವಸ್ತು ಸಂಗ್ರಹಾಲಯ ಉದ್ಘಾಟನೆ, ಮೊದಲಾದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು.

ಇದಲ್ಲದೆ ರಾಜಮಾತೆ ಪ್ರಮೋದಾ ದೇವಿ ಆಹ್ವಾನದಂತೆ ಮೈಸೂರು ಅರಮನೆಯಲ್ಲಿ ಉಪಹಾರವನ್ನೂ ಸೇವಿಸಿದ್ದರು. ಮೈಸೂರು ಅರಮನೆಯಿಂದ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿ, ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು