7:25 PM Thursday25 - April 2024
ಬ್ರೇಕಿಂಗ್ ನ್ಯೂಸ್
ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ…

ಇತ್ತೀಚಿನ ಸುದ್ದಿ

ತಮಿಳುನಾಡು:10 ರೂ.ಗಳ ನಾಣ್ಯ ಕೊಟ್ಟು 6 ಲಕ್ಷ ಮೌಲ್ಯದ ಕಾರು ಖರೀದಿಸಿದ ಅಂಗಡಿ ಮಾಲೀಕ!

21/06/2022, 17:51

ಚೆನ್ನೈ(reporterkarnataka.com): ಜನರು 10 ರೂ. ನಾಣ್ಯವನ್ನು ಸ್ವೀಕರಿಸಲು ನಿರಾಕರಿಸುತ್ತಿರುವುದರಿಂದ ಬೇಸತ್ತ ತಮಿಳುನಾಡಿನ ವ್ಯಕ್ತಿಯೊಬ್ಬರು 10 ರೂ. ನಾಣ್ಯಗಳನ್ನು ಸಂಗ್ರಹಿಸಿ ಅದರಿಂದಲೇ 6 ಲಕ್ಷ ರೂ.ಮೌಲ್ಯದ ಕಾರು ಖರೀದಿಸಿದ್ದಾರೆ.

ಅರೂರು ನಿವಾಸಿಯಾದ ವೆಟ್ರಿವೇಲ್‌ ಎಂಬವರು ತಾಯಿಯ ಅಂಗಡಿಯನ್ನು ನಡೆಸುತ್ತಿದ್ದರು. ಗ್ರಾಹಕರು 10 ರೂ. ನಾಣ್ಯವನ್ನು ಸ್ವೀಕರಿಸಲು ನಿರಾಕರಿಸಿದ್ದರು. ಹೀಗಾಗಿ ಅಂಗಡಿಯಲ್ಲಿ 10 ರೂ. ನಾಣ್ಯಗಳು ದೊಡ್ಡ ಮಟ್ಟದಲ್ಲಿ ಸಂಗ್ರಹವಾಗಿದ್ದವು. 10 ರೂ. ನಾಣ್ಯಗಳು ಇನ್ನೂ ಬಳಕೆಗೆ ಯೋಗ್ಯವಾಗಿವೆ ಎಂದು ಅರಿವು ಮೂಡಿಸಲು ಸುಮಾರು 6 ಲಕ್ಷ ರೂ. ಮೌಲ್ಯದ ನಾಣ್ಯಗಳನ್ನು ಸಂಗ್ರಹಿಸಿ ಅದರಿಂದ ವೆಟ್ರಿವೇಲ ಕಾರನ್ನು ಖರೀದಿಸಿದ್ದಾರೆ.

ದೊಡ್ಡ ಚೀಲದಲ್ಲಿ ನಾಣ್ಯಗಳೊಂದಿಗೆ ಧರ್ಮಪುರಿಯ ಕಾರು ಶೋ ರೂಮಿಗೆ ಕಾರು ಖರೀದಿಸಲು ಬಂದಾಗ ಮೊದಲು ಅಲ್ಲಿನ ಸಿಬ್ಬಂದಿಗಳಿಗೆ ಆಶ್ಚರ್ಯವಾಯಿತು. ನಂತರ ವೆಟ್ರಿವೇಲ್‌ ದೃಢ ನಿರ್ಣಯ ನೋಡಿ ಕಾರು ಮಾರಾಟ ಮಾಡಲು ಒಪ್ಪಿಕೊಂಡರು. ಚೀಲಗಟ್ಟಲೆ ನಾಣ್ಯಗಳನ್ನು ಎಣಿಸಿದ ನಂತರ ಕೊನೆಗೂ ಮಾರುತಿ ಸುಜುಕಿ ಇಕೋ ಕಾರನ್ನು ವೆಟ್ರಿವೇಲನಿಗೆ ಹಸ್ತಾಂತರಿಸಲಾಗಿದೆ’ ಎಂದು ಶೋ ರೂಂನವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು