4:55 PM Friday19 - April 2024
ಬ್ರೇಕಿಂಗ್ ನ್ಯೂಸ್
ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ…

ಇತ್ತೀಚಿನ ಸುದ್ದಿ

ವಾರದೊಳಗೆ ಕುಸಿದು ಬಿದ್ದ ಸೇತುವೆ!!: 30 ಲಕ್ಷ ರೂ. ಮಣ್ಣುಪಾಲು; ಜನಪ್ರತಿನಿಧಿ, ಗುತ್ತಿಗೆದಾರರ ವಿರುದ್ಧ ಜನರ ಆಕ್ರೋಶ

21/06/2022, 11:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸುಮಾರು 30 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿ ವಾರದ ಹಿಂದೆ ಸಂಚಾರಕ್ಕೆ ತೆರೆದಿದ್ದ ನೂತನ ಸೇತುವೆ ಕುಸಿದು ಬಿದ್ದ ಘಟನೆ ಕಳಸ ತಾಲೂಕಿನ ನೆಲ್ಲಿಬೀಡು ಗ್ರಾಮದಲ್ಲಿ ನಡೆದಿದೆ.

ಬರಿ ಪಿಕಪ್ ಹೋಗಿದ್ದಕ್ಕೆ ಸೇತುವೆಯ ಕಾಂಕ್ರೀಟ್ ಗೋಡೆಯೇ ಕಳಚಿ ಬಿದ್ದಿದೆ. ಕಂದಕಕ್ಕೆ ಬೀಳುವ ಹಂತದಲ್ಲಿದ್ದ ಪಿಕಪ್ ಗಾಡಿಯನ್ನು ಸ್ಥಳಿಯರ ಹರಸಾಹಸ ಮಾಡಿ ಬಚಾವ್ ಮಾಡಿದ್ದಾರೆ.

ಸ್ವಲ್ಪ ಹೆಚ್ಚು-ಕಡಿಮೆಯಾಗಿದ್ದರೂ ಗಾಡಿ ಕಂದಕಕ್ಕೆ ಉರುಳಿ ಸಂಪೂರ್ಣ ನಜ್ಜುಗುಜ್ಜಾಗುತ್ತಿತ್ತು. ಅದೃಷ್ಟವಶಾತ್ ಪಿಕಪ್ ಚಾಲಕ-ನಿರ್ವಾಹಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಳೆದ ವರ್ಷದ ಅತಿವೃಷ್ಠಿಯಿಂದ ಕೊಚ್ಚಿ ಹೋಗಿದ್ದ ಸೇತುವೆಯನ್ನು ಹೊಸತಾಗಿ ನಿರ್ಮಿಸಲಾಗಿತ್ತು. ಚೌಡಿಬಿಳಲ್, ಕಟ್ಟೆಮನೆ, ಕೊಣೆಮನೆ, ಈಚಲಹೊಳೆ ಸೇರಿದಂತೆ ಐದಾರು ಹಳ್ಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದೆ. 30 ಲಕ್ಷ ಹಣ ಒಂದೇ ವಾರಕ್ಕೆ ಮಣ್ಣುಪಾಲು, ಇಂಜಿನಿಯರ್, ಕಂಟ್ರಾಕ್ಟರ್ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕೂಲಿಕಾರ್ಮಿಕ ಪರಿಶಿಷ್ಟ ಪಂಗಡದವರು ಹೆಚ್ಚಿರುವ ಗ್ರಾಮಗಳು ಇದಾಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು