9:10 PM Tuesday23 - April 2024
ಬ್ರೇಕಿಂಗ್ ನ್ಯೂಸ್
ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್… ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ… ಗಾಳಿ ಮಳೆಗೆ ಮರ ಬಿದ್ದು ತಂಡಾದ ಪವರ್ ಲೈನ್: ವಿದ್ಯುತ್ ಶಾಕ್ ಹೊಡೆದು… ಕೊಲ್ಯದಿಂದ ಅಬ್ಬಕ್ಕ ರಾಣಿ ಸರ್ಕಲ್‌ ವರೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ… 91ರ ಹರೆಯದ ಮಾಜಿ ಪ್ರಧಾನಿ ದೇವೇಗೌಡರು ಮೋದಿ ಗೆಲ್ಲಿಸಿ ಎನ್ನುತ್ತಿದ್ದಾರೆ; ದಿನಬಳಕೆ ವಸ್ತುಗಳ…

ಇತ್ತೀಚಿನ ಸುದ್ದಿ

ಸರಕಾರಿ ಬಸ್ ಟಯರ್ ಸ್ಫೋಟಗೊಂಡು ಆಟೋಗೆ ಡಿಕ್ಕಿ;  ಇಬ್ಬರು ಸಾವು; ಹಲವರಿಗೆ ತೀವ್ರ ಗಾಯ

22/06/2022, 20:49

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ  ಜಿಲ್ಲೆ ಕೂಡ್ಲಿಗಿ ಪಟ್ಟಣದ ಹೊರವಲಯದಲ್ಲಿ ಇಂದು ಸಂಜೆ ಸಾರಿಗೆ ಬಸ್ ಮತ್ತು ಅಪೇ ಆಟೋ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತ ಪಟ್ಟಿದ್ದು,  ಹಲವರು ಗಾಯಗೊಂಡಿದ್ದಾರೆ.

ದಾವಣಗೆರೆಯಿಂದ ಬಳ್ಳಾರಿ ಕಡೆ ತೆರಳುತ್ತಿದ್ದ ಸಾರಿಗೆ ಬಸ್ ಹಾಗೂ ಕೂಡ್ಲಿಗಿಯಿಂದ ಈಚಲ ಬೊಮ್ಮನಹಳ್ಳಿಗೆ ತೆರಳುತ್ತಿದ್ದ ಅಪೇ ಆಟೋ ನಡುವೆ ಅಪಘಾತ ಸಂಭವಿಸಿದೆ. ಸಾರಿಗೆ ಬಸ್ ನ ಮುಂಬದಿ ಚಕ್ರದ ಟೈರ್ ಸ್ಫೋಟಗೊಂಡಿದ್ದು, ಪರಿಣಾಮ ಬಸ್ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ.  ಆಟೋದಲ್ಲಿದ್ದವರೆಲ್ಲರೂ ಈಚಲ ಬೊಮ್ಮನಹಳ್ಳಿ ವಾಸಿಗಳಾಗಿದ್ದು, ಬಹುತೇಕ ವಿದ್ಯಾರ್ಥಿಗಳಾಗಿದ್ದಾರೆ.

ತೀವ್ರ ಗಾಯಗೊಂಡಿದ್ದ ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯದಲ್ಲಿ ಮೃತರಾಗಿದ್ದಾರೆ.



ವಿದ್ಯಾರ್ಥಿನಿ ಪುಷ್ಪಲತಾ(22) ಕೂಡ್ಲಿಗಿ ಆಸ್ಪತ್ರೆಗೆ ದಾಖಲಿಸುವಾಗ ಮೃತಪಟ್ಟಿದ್ದಾಳೆ. ಬಳ್ಳಾರಿ ವಿಮ್ಸ್ ಗೆ ದಾಖಲಿಸುವಾಗ ಈಡಿಗರ ಮೀನಾಕ್ಷಿ(30) ಮೃತಪಟ್ಟಿದ್ದಾಳೆ. ರಮೇಶ ಎಂಬುವರು ಎರಡು ಕಾಲುಗಳು ಜಖಂಗೊಂಡಿದ್ದು, ಗಾಯಾಳುಗಾಳಾಗಿರುವ ಸ್ವಾತಿ, ಈಡಿಗರ ಅನುಷಾ, ಅಭಿಲಾಷಾ, ಪ್ರಭಾವತಿ, ಕೆ.ಚಂದನ, ಕೆ.ನಾಗವೇಣಿ ಸೇರಿದಂತೆ ಇತರರು ಗಾಯಗೊಂಡಿದ್ದಾರೆ, ಕೆಲವರನ್ನು ಕೂಡ್ಲಿಗಿ ಹಾಗೂ ಇನ್ನೂ ಕೆಲವರನ್ನು ಬಳ್ಳಾರಿ ವಿಮ್ಸ್ ಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಹಾಗೂ ಕೂಡ್ಲಿಗಿ ಆಸ್ಪತ್ರೆಗೆ ಕೂಡ್ಲಿಗಿ ಡಿವೈಎಸ್ಪಿ ಜಿ.ಹರೀಶ, ಸಿಪಿಐ ವಸಂತ ಅಸೋದೆ ಬೆಟ್ಟಿ ನೀಡಿದ್ದಾರೆ.ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಆಸ್ಪತ್ರೆ ಆವರಣದಲ್ಲಿ ಮೃತರ ಪೋಷಕರ ಹಾಗೂ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು