1:49 PM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ವಿರಾಜಪೇಟೆ: ವ್ಯಾಘ್ರ ದಾಳಿಗೆ 2 ಹಸು ಸಾವು; ಸಿಸಿಟಿವಿಯಲ್ಲಿ ಹುಲಿ ಚಿತ್ರ ಸೆರೆ; ಸ್ಥಳೀಯರಲ್ಲಿ ಆತಂಕ

24/06/2022, 19:35

ಸಾಂದರ್ಭಿಕ ಚಿತ್ರ
ಮಡಿಕೇರಿ(reporterkarnataka.com):
ಕೊಡುಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಘಟ್ಟದಳ ಬಳಿ ಟಾಟಾ ಸಂಸ್ಥೆಯ ಮಾರ್ಗೊಲ್ಲಿ ಎಸ್ಟೇಟ್ ಹಾಗೂ ಪಾಲಿಬೆಟ್ಟ ದ ದುಬಾರಿ ಎಸ್ಟೇಟ್ ನಲ್ಲಿ ಹುಲಿಯ ಹೆಜ್ಜೆ ಗುರುತುಗಳು ಪತ್ತೆಯಾಗಿವೆ. ಎರಡೂ ಕಡೆಯೂ‌ ಒಂದೊಂದು ಹಸುವನ್ನು ಕೊಂದಿದೆ.‌‌ ಎರಡೂ ಕಡೆಯೂ ಒಂದೇ ಹುಲಿ ದಾಳಿ ನಡೆಸಿದೆಯೆ ಅಥವಾ ಎರಡೂ ಬೇರೆ ಬೇರೆಯೆ ಎಂಬುದು ತಿಳಿದು ಬಂದಿಲ್ಲ.

ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪ 10 ಕಿ.ಮೀ ವ್ಯಾಪ್ತಿಯಲ್ಲಿ ಹುಲಿಯ ಚಲನವಲನಗಳು ಕಂಡು ಬಂದಿದ್ದು ಸ್ಥಳೀಯರಲ್ಲಿ ಆತಂಕ ಮೂಡಿದೆ. 

ಘಟ್ಟದಳ ಸಮೀಪದ ಟಾಟಾ ಸಂಸ್ಥೆಯ ಮಾರ್ಗೊಲ್ಲಿ ಎಸ್ಟೇಟ್ ನ ಸಿಸಿಟಿವಿ ಕ್ಯಾಮೆರಾದಲ್ಲಿ ಹುಲಿ ಚಿತ್ರ ಸೆರೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಕೆಲ ದಿನಗಳ ಹಿಂದೆ ಎಸ್ಟೇಟ್ ನಲ್ಲಿ ಹುಲಿ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದವು. ಸಂಸ್ಥೆಯ ವತಿಯಿಂದ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿತ್ತು. ಎಸ್ಟೇಟ್ ನ ತೋಟದ ಒಳಭಾಗದಲ್ಲಿ ಹಸುವೊಂದನ್ನು ಹುಲಿ ಬೇಟೆಯಾಡಿ ಕೊಂದಿದ್ದು, ಸಿ.ಸಿ.ಟಿ‌.ವಿ ಕ್ಯಾಮೆರಾದಲ್ಲಿ  ದೃಶ್ಯ ಸೆರೆಯಾಗಿದೆ. ದಷ್ಟಪುಷ್ಟವಾದ ಹುಲಿಯಾಗಿದ್ದು, 8 ವರ್ಷ ವಯಸ್ಸು ಇರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ತಿತಿಮತಿ ವಲಯ ಅರಣ್ಯಾಧಿಕಾರಿ ಅಶೋಕ್, ಉಪವಲಯ ಅರಣ್ಯಾಧಿಕಾರಿ ಶ್ರೀನಿವಾಸ್ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದು, ಕೂಂಬಿಂಗ್ ಆರಂಭಿಸುವುದಾಗಿ ತಿಳಿಸಿದ್ದಾರೆ. 

ಪಾಲಿಬೆಟ್ಟದಲ್ಲೂ ಆತಂಕ: ಬುಧವಾರ ರಾತ್ರಿ ಪಾಲಿಬೆಟ್ಟ ದ ದುಬಾರಿ ಎಸ್ಟೇಟ್ ನಲ್ಲಿ ಹುಲಿ ದಾಳಿ ನಡೆಸಿ  ಹಸುವೊಂದನ್ನು ಕೊಂದು ಹಾಕಿತ್ತು. ಹುಲಿಯ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಕ್ಯಾಮೆರಾ ಅಳವಡಿಸಿದೆ‌. ಶುಕ್ರವಾರ ಕ್ಯಾಮೆರಾದಲ್ಲಿ ಹುಲಿ ದೃಶ್ಯ ಸೆರೆಯಾಗಿಲ್ಲ. ಹುಲಿ ಇದೆ ಎಂಬ ಕಾರಣ ಕಾರ್ಮಿಕರು ಕೆಲಸಕ್ಕೆ ತೆರಳಲು ಹಿಂದೇಟು ಹಾಕುತ್ತಿದ್ದು, ಗ್ರಾಮಸ್ಥರು ಆತಂಕದಲ್ಲಿ ಇದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು