10:06 PM Saturday4 - May 2024
ಬ್ರೇಕಿಂಗ್ ನ್ಯೂಸ್
ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ…

ಇತ್ತೀಚಿನ ಸುದ್ದಿ

ಆರೆಸ್ಸೆಸ್‌ ಬೈಯುವ ಸಿದ್ದರಾಮಯ್ಯರ ಚಾಳಿ ಈಗ ಕುಮಾರಸ್ವಾಮಿಗೆ ಬಂದಿದೆ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ

27/06/2022, 19:10

ಬೆಂಗಳೂರು(reporterkarnataka.com): ಆರ್‌ಎಸ್‌ಎಸ್‌ ಬೈಯ್ಯೋದು ಮಾಜಿ ಮುಖ್ಯಮಂತ್ರಿ
ಸಿದ್ದರಾಮಯ್ಯರ ಕೆಟ್ಟಚಾಳಿ ಆಗಿತ್ತು. ಈಗ ಅದು ಕುಮಾರಸ್ವಾಮಿಗೂ ಬಂದಿದೆ. ಆರ್‌ಎಸ್‌ಎಸ್‌ ಬೈದರೆ ಸತ್ತ ಮೇಲೆ ಸ್ವರ್ಗಕ್ಕೆ ಹೋಗಬಹುದು ಎಂದು ಕುಮಾರಸ್ವಾಮಿ ತಿಳಿದಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಕುಟುಕಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರಗಳ ರಚನೆಗೆ ಆರ್‌ಎಸ್‌ಎಸ್‌ ಪರ್ಸೆಂಟೇಜ್‌ ರೂಪದಲ್ಲಿ ಹಣ ಸಂಗ್ರಹಿಸುತ್ತಿದೆ ಎಂದು ಎಚ್‌.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಆರ್‌ಎಸ್‌ಎಸ್‌ಗೆ ಬೈಯ್ಯದಿದ್ದರೆ ಅವರಿಗೆ ತಿಂದ ಅನ್ನ ಜೀರ್ಣ ಆಗಲ್ಲ. ಹೀಗಾಗಿ ಸಂಘಟನೆ ವಿರುದ್ಧ ವೃಥಾ ಆರೋಪ ಮಾಡುತ್ತಿದ್ದಾರೆ. ಅವರು ಸ್ವರ್ಗಕ್ಕೆ ಹೋಗಲಿ ಎಂಬುದು ನಮ್ಮ ಆಸೆ ಎಂದು ಲೇವಡಿ ಮಾಡಿದರು.

ವಿರೋಧ ಪಕ್ಷ ಇರಬೇಕು ಎಂಬುದು ನಮಗೂ ಆಸೆ. ನಿಮ್ಮ ಎಂಎಲ್‌ಎಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಆಗದಿದ್ದರೆ ನಾವೇನು ಮಾಡುವುದು. ತಮ್ಮ ಶಾಸಕರನ್ನು ಶಿಸ್ತುಬದ್ಧವಾಗಿ, ವಿಶ್ವಾಸದಿಂದ ಇಟ್ಟುಕೊಂಡರೆ, ಸ್ವಾತಂತ್ರ್ಯ ಕೊಟ್ಟರೆ ಅವರೇಕೆ ಬಿಟ್ಟು ಹೋಗುತ್ತಾರೆ. ಮಹಾರಾಷ್ಟ್ರದಲ್ಲಿ ಶಾಸಕರಿಗೆ ಮುಖ್ಯಮಂತ್ರಿ ಭೇಟಿಗೆ ಅವಕಾಶವೇ ಇರಲಿಲ್ಲ. ಬಿಜೆಪಿಯಲ್ಲಿ ಆ ಪ್ರಶ್ನೆಯೇ ಇಲ್ಲ. ಇಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ಎಲ್ಲರೊಂದಿಗೂ ಮುಕ್ತವಾಗಿ ಮಾತನಾಡಲು ಅವಕಾಶವಿದೆ. ಮೋದಿ ಅವರಂಥ ಒಳ್ಳೆಯ ನಾಯಕರು ಇದ್ದಾರೆ. ಹೀಗಾಗಿ ಬೇರೆ ಪಕ್ಷಗಳ ಶಾಸಕರು ಬಿಜೆಪಿಗೆ ಬರುತ್ತಾರೆ ಎಂದು ಮಹಾರಾಷ್ಟ್ರದಲ್ಲಿನ ಬೆಳವಣಿಗೆಗಳನ್ನು ಈಶ್ವರಪ್ಪ ಸಮರ್ಥಿಸಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು