4:05 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ಬ್ರಹ್ಮಶ್ರೀ ನಾರಾಯಣಗುರುಗಳ ಪಠ್ಯ ಮರು ಸೇರ್ಪಡೆಗೊಳಿಸದಿದ್ದರೆ ತೀವ್ರ ಹೋರಾಟ: ಪದ್ಮರಾಜ್ ಆರ್. ಎಚ್ಚರಿಕೆ

28/06/2022, 23:43

ಮಂಗಳೂರು(reporterkarnataka.com): ಬ್ರಹ್ಮಶ್ರಿ ನಾರಾಯಣಗುರುಗಳ ಪಠ್ಯವನ್ನು10ನೇ ತರಗತಿಯ ಪಠ್ಯದಲ್ಲಿ ಮರುಸೇರ್ಪಡೆಗೊಳಿಸಿ ಎನ್ನುವ ಬಿಲ್ಲವ ಸಮುದಾಯ ಹಾಗೂ ಗುರುಗಳ ಅನುಯಾಯಿಗಳ ಬೇಡಿಕೆಗೆ ರಾಜ್ಯ ಸರಕಾರ ಸ್ಪಂದಿಸಿಲ್ಲ. ಸರಕಾರದಲ್ಲಿ ಸಮುದಾಯಕ್ಕೆ ಸೇರಿದ ಇಬ್ಬರು ಸಚಿವರು ಇದ್ದರೂ ಈ ಬಗ್ಗೆ ಚಕಾರ ಎತ್ತಿಲ್ಲ. ಕರ್ನಾಟಕದಲ್ಲಿ ಬಿಲ್ಲವ, ಆರ್ಯ ಈಡಿಗ ಸೇರಿದಂತೆ 26 ಪಂಗಡಗಳ ಹಾಗೂ ಬ್ರಹ್ಮಶ್ರೀ ನಾರಾಯಣಗುರುಗಳ ಕೋಟ್ಯಂತರ ಮಂದಿ ಅನುಯಾಯಿಗಳ ಬಗ್ಗೆ ಸರಕಾರಕ್ಕೆ ಯಾಕೆ ತಾತ್ಸಾರ ಭಾವನೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಹಾಗೂ ನ್ಯಾಯವಾದಿ ಪದ್ಮರಾಜ್ ಆರ್. ಪ್ರಶ್ನಿಸಿದ್ದಾರೆ.

ಬಸವಣ್ಣ, ಡಾ.ಬಿ.ಆರ್.ಅಂಬೇಡ್ಕರ್, ಕುವೆಂಪು ಸೇರಿದಂತೆ ನಾಡಿನ ವಿವಿಧ ಸಮಾಜ ಸುಧಾರಕರ ಕುರಿತು ಪಠ್ಯ ಪರಿಷ್ಕರಣೆಯಲ್ಲಿ ಆಗಿರುವ ತಪ್ಪುಗಳಿಗೆ ಸಮಾಜದ ವಿವಿಧ ವಲಯಗಳಿಂದ ಕೇಳಿ ಬಂದ ವಿರೋಧಗಳಿಗೆ ಸ್ಪಂದಿಸಿರುವ ಶಿಕ್ಷಣ ಇಲಾಖೆ ಎಂಟು ತಿದ್ದುಪಡಿ ಮಾಡಿ ಪಠ್ಯದಲ್ಲಿ ಅಳವಡಿಸುವಂತೆ ಆದೇಶ ಹೊರಡಿಸಿದೆ.  ಇದನ್ನು ನಾವು ಸ್ವಾಗತಿಸುತ್ತೇವೆ.ಆದರೆ ಬ್ರಹ್ಮಶ್ರಿ ನಾರಾಯಣಗುರುಗಳ ಪಠ್ಯವನ್ನು10ನೇ ತರಗತಿಯ ಪಠ್ಯದಲ್ಲಿ ಮರುಸೇರ್ಪಡೆಗೊಳಿಸಿ ಎನ್ನುವ ಬಿಲ್ಲವ ಸಮುದಾಯ ಹಾಗೂ ಗುರುಗಳ ಅನುಯಾಯಿಗಳ ಬೇಡಿಕೆಗೆ ಸ್ಪಂದಿಸಿಲ್ಲ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

ನಾರಾಯಣಗುರುಗಳ ಕುರಿತ ಪಠ್ಯವನ್ನು 10ನೇ ತರಗತಿಯ ಕನ್ನಡ ಭಾಷಾ ಪಠ್ಯದಲ್ಲಿ ಸೇರಿಸಲಾಗಿದೆ ಎಂದು ಸರ್ಕಾರ ಹಾಗೂ ಪಕ್ಷದ ಮುಖಂಡರು ಸಮಜಾಯಿಷಿ ನೀಡುತ್ತಿದ್ದಾರೆ. ಆದರೆ ಕನ್ನಡ ಭಾಷಾ ಪಠ್ಯವನ್ನು ಶೇ.30ರಿಂದ 50ರಷ್ಟು ವಿದ್ಯಾರ್ಥಿಗಳು ಮಾತ್ರ ಓದುತ್ತಾರೆ. ಉಳಿದ ಭಾಷಾ ಮಾಧ್ಯಮದಲ್ಲಿ ಓದುವ ವಿದ್ಯಾರ್ಥಿಗಳು ಗುರುಗಳ ಕುರಿತ ಮಾಹಿತಿಯನ್ನು ಎಲ್ಲಿ ಪಡೆಯಬೇಕು ಎಂಬುದರ ಬಗ್ಗೆ ಸರ್ಕಾರ ಚಿಂತಿಸಿದೆಯೆ? ಯಾಕೆ  ಬಿಲ್ಲವ, ಈಡಿಗ ಹಾಗೂ ಸಮಸ್ತ ನಾರಾಯಣಗುರುಗಳ ಅನುಯಾಯಿಗಳನ್ನು ಮತ್ತೆ ಮತ್ತೆ ಕಡೆಗಣಿಸುತ್ತಿದ್ದೀರಿ?

ಪ್ರತಿಪಕ್ಷದ ಶಾಸಕರು, ಮುಖಂಡರು ಕೇವಲ ಪತ್ರಿಕಾ ಹೇಳಿಕೆ ನೀಡಿ ಸರ್ಕಾರದಿಂದ ಗುರುಗಳ ಅನುಯಾಯಿಗಳಿಗೆ ‌ಆಗುತ್ತಿರುವ ಅನ್ಯಾಯದ ಬಗ್ಗೆ ಸುಮ್ಮನೆ ಕುಳಿತಿದ್ದಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಪಠ್ಯವನ್ನು ಮತ್ತೆ 10ನೇ ತರಗತಿಯ ಸಮಾಜ ವಿಜ್ಞಾನ ಅಥವಾ ಎಲ್ಲ ಭಾಷಾ ಮಾಧ್ಯಮಕ್ಕೆ ಸೇರ್ಪಡೆಗೊಳಿಸುವ ಮೂಲಕ ಎಲ್ಲ ವಿದ್ಯಾರ್ಥಿಗಳು ಓದುವಂತೆ ಮಾಡುವ ನಿರ್ಧಾರ ಕೈಗೊಳ್ಳಲಿ. ಇಲ್ಲವಾದಲ್ಲಿ ತೀವ್ರ ಹೋರಾಟಕ್ಕೂ ಸಿದ್ಧರಿದ್ದೇವೆ ಎಂದು ಸರ್ಕಾರಕ್ಕೆ ಎಚ್ಚರಿಸುತ್ತಿದ್ದೇವೆ ಎಂದು ಪದ್ಮರಾಜ್ ಆರ್. ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು