9:21 PM Saturday18 - May 2024
ಬ್ರೇಕಿಂಗ್ ನ್ಯೂಸ್
ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ…

ಇತ್ತೀಚಿನ ಸುದ್ದಿ

ಈಡನ್ ಕ್ಲಬ್ ರಸ್ತೆ ಅಭಿವೃದ್ಧಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ: 50 ಲಕ್ಷ ರೂ. ಅನುದಾನ ಬಿಡುಗಡೆ

01/07/2022, 20:34

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಕದ್ರಿ ಉತ್ತರ ವಾರ್ಡಿನ ಈಡನ್ ಕ್ಲಬ್ ರಸ್ತೆ ಅಭಿವೃದ್ಧಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. 

ಬಳಿಕ ಮಾತನಾಡಿದ ಅವರು, ಈಡನ್ ಕ್ಲಬ್ ರಸ್ತೆ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಯಿಂದ 50 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ಸ್ಥಳೀಯ ಕಾರ್ಪೋರೇಟರ್ ಹಾಗೂ ಸಾರ್ವಜನಿಕರ ಬೇಡಿಕೆಯಂತೆ ಅನುದಾನ ಬಿಡುಗಡೆಗೊಳಿಸಲಾಗಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಶಾಸಕ ಕಾಮತ್ ಹೇಳಿದರು.

ಈಗಾಗಲೇ ನಗರದಲ್ಲಿ ಅನೇಕ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಮಂಗಳೂರು ನಗರವು ಅತೀ ವೇಗವಾಗಿ ಬೆಳೆಯುತ್ತಿರುವ ಕಾರಣ ಭವಿಷ್ಯದ ದೃಷ್ಟಿಯಿಂದ ರಸ್ತೆ ನಿರ್ಮಾಣ, ಫುಟ್ ಪಾತ್, ಪಾರ್ಕಿಂಗ್ ವ್ಯವಸ್ಥೆಗಳ ಒಂದಷ್ಟು ಬದಲಾವಣೆ ಅನಿವಾರ್ಯವಾಗಿದೆ ಎಂದು ಶಾಸಕ ಕಾಮತ್ ನುಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಸ್ಥಳೀಯ ಕಾರ್ಪೋರೇಟರ್ ಶಕಿಲಾ ಕಾವಾ, ಕಾರ್ಪೋರೇಟರ್ ವನಿತಾ ಪ್ರಸಾದ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ರಮೇಶ್ ಕಂಡೆಟ್ಟು, ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಶ್ರೀನಿವಾಸ್ ಶೇಟ್, ಪ್ರಸನ್ನ, ಪ್ರಸಾದ್, ರವಿಚಂದ್ರ, ವೆಂಕಟೇಶ್, ವಿಜಯ್ ಶೆಣೈ, ಚಂದ್ರಹಾಸ್ ಸೇಮಿತ, ನೈನಾ ವಿಶ್ವನಾಥ್, ಗಾಯತ್ರಿ, ಕಮಲಾಕ್ಷಿ, ಶಿಲ್ಪಾ, ಉಮಾ ಕಂಡೆಟ್ಟು, ವಿಜಯ ಕಲಿಯಾ, ಶೋಭಾ, ಜಗದೀಶ್ ಕಂಡೆಟ್ಟು, ಸತೀಶ್, ಕಿರಣ್, ಶ್ರವಣ್, ರವೀಂದ್ರ ಶೆಣೈ, ಸಂಜು ಸೇಮಿತ, ಬೇಬಿ ಸೇಮಿತ, ಪುಷ್ಪ, ವೀಣಾ ಗುಂಡಳಿಕೆ, ಹರೀಶ್, ನವೀನ್ ಗುಂಡಳಿಕೆ, ಪದ್ಮನಾಭ, ಶುಭಕರ್, ಯಶೋಧಾ, ಯಮುನಾ, ಸುಜಾತ, ಲತಾ ಕಾಮತ್, ಉಪೇಂದ್ರ, ಲೋಕಯ್ಯ, ಪ್ರಮೀಳಾ, ಪ್ರದೀಪ್, ಸರಸ್ವತಿ, ಪದ್ಮಿಣಿ, ಅಜಿತ್, ಯತೀಶ್, ದೀಪಕ್, ಲಾವಣ್ಯ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು