4:17 AM Friday19 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

ಕನ್ನಯ್ಯ ಲಾಲ್ ಸಾವಿಗೆ ರಾಜಸ್ಥಾನ ಸರಕಾರವೇ ನೇರ ಹೊಣೆ, ಆರೋಪಿಗಳ ಗಲ್ಲಿಗೇರಿಸಿ: ಶಾಸಕ ವೇದ್ಯಾಸ ಕಾಮತ್

01/07/2022, 19:46

ಮಂಗಳೂರು(reporterkarnataka.com): ರಾಜಸ್ಥಾನದ ಉದಯಪುರದಲ್ಲಿ ಬಡ ಟೈಲರ್ ಕನ್ನಯ್ಯ ಲಾಲ್ ಹತ್ಯೆಗೈದು ಪ್ರಧಾನಮಂತ್ರಿಗಳಿಗೆ ಬೆದರಿಕೆಯೊಡ್ಡಿದ ಹಂತಕರಿಗೆ ಮರಣ ದಂಡನೆ ವಿಧಿಸುವ ಮೂಲಕ ಮುಂದಿನ ದಿನಗಳಲ್ಲಿ ಇಂತಹ ಕುಕೃತ್ಯ ಎಸಗುವವರಿಗೆ ಎಚ್ಚರಿಕೆಯ ಸಂದೇಶ ನೀಡಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ಆಗ್ರಹಿಸಿದ್ದಾರೆ.

ಮತಾಂಧ ಮನೋಭಾವ ದೇಶದ ಆಂತರಿಕ ಭದ್ರತೆಗೆ ಸವಾಲಾಗಿ ಪರಿಣಮಿಸಿದೆ. ಇಂತಹ ಭಯೋತ್ಪಾದಕ ಕೃತ್ಯಗಳನ್ನು ರಾಜಕೀಯ ದೃಷ್ಟಿಯಿಂದ ಖಂಡಿಸದಿರುವ ನಾಯಕರ ಓಲೈಕೆಯ ರಾಜಕಾರಣದಿಂದ ಇಂತಹ ಕೃತ್ಯಗಳು ಮರುಕಳಿಸುತ್ತಿವೆ ಎಂದು ಹೇಳಿದ್ದಾರೆ.

ಕನ್ನಯ್ಯ ಲಾಲ್ ಸಾವಿಗೆ ರಾಜಸ್ಥಾನ ಸರಕಾರವೇ ನೇರ ಕಾರಣ. ಜೀವ ಬೆದರಿಕೆಯಿರುವ ಬಗ್ಗೆ ಕನ್ನಯ್ಯ ಲಾಲ್ ದೂರು ನೀಡಿದ್ದರೂ ಸೂಕ್ತ ಭದ್ರತೆ ಕಲ್ಪಿಸದ ರಾಜಸ್ಥಾನ ಸರಕಾರ ಘಟನೆಗೆ ನೇರ ಹೊಣೆಯಾಗಿದೆ. ಹಿಂದುಗಳ ಜೀವವನ್ನು ತೃಣದಂತೆ ಕಾಣುವ ಕಾಂಗ್ರೇಸ್ ನಾಯಕರು ಈ ಘಟನೆಗೆ ಜವಾಬ್ದಾರರು ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು