5:16 PM Tuesday16 - April 2024
ಬ್ರೇಕಿಂಗ್ ನ್ಯೂಸ್
ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ… ಮಂಗಳೂರಿನಲ್ಲಿ ನಾಳೆ ‘ಇಂಡಿಯಾ’ ಘಟಕ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ‘ಬಿಜೆಪಿ… ವಿಜಯ ಬ್ಯಾಂಕ್, ಕಾರ್ಪೊರೇಶನ್ ಬ್ಯಾಂಕ್‌ ಎಲ್ಲಿಗೆ ಹೋಯಿತು?; ಬಿಜೆಪಿ ನಾಯಕರು ಉತ್ತರಿಸಲಿ: ಮಾಜಿ… ಪ್ರಧಾನಿ ಮೋದಿ ರೋಡ್ ಶೋ: ಏರ್ ಪೋರ್ಟ್ ನಿಂದ ಲೇಡಿಹಿಲ್ ವರೆಗೆ ಎಸ್… ದ.ಕ.ಲೋಕಸಭೆ: ತಗ್ಗಿತೇ ಬಿಜೆಪಿ ಪ್ರಚಾರ?: ದಿನ ಕಳೆದಂತೆ ಸ್ಟ್ರಾಂಗ್ ಆಗುತ್ತಿದೆಯೇ ಪದ್ಮರಾಜ್ ಟೀಮ್… ಪೋಷಕರ ನಿರ್ಲಕ್ಷ್ಯ: ಏರ್ ಗನ್ ನಲ್ಲಿ ಶೂಟ್ ಮಾಡಿಕೊಂಡು 7 ವರ್ಷದ ಬಾಲಕ… ಬಾಳೆಹೊನ್ನೂರು ಭಾಗದಲ್ಲಿ ಭಾರೀ ವರ್ಷಧಾರೆ: ಕಾದ ನೆಲಕ್ಕೆ ತಂಪೆರಚಿದ ಮಳೆ; ಕೃಷಿಕರ ಮೊಗದಲ್ಲಿ… ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ…

ಇತ್ತೀಚಿನ ಸುದ್ದಿ

ಬೆಂಗಳೂರು ಸಹಿತ 14 ಜಿಲ್ಲೆಗಳ ಅಭ್ಯರ್ಥಿಗಳಿಗೆ ‘ಅಗ್ನಿವೀರ’ ಅವಕಾಶ: ಆ.10ರಿಂದ ಹಾಸನದಲ್ಲಿ ಭೂ ಸೇನಾ Rally

02/07/2022, 15:28

ಹಾಸನ(reporterkarnataka.com): ಆಗಸ್ಟ್ 10 ರಿಂದ ಆಗಸ್ಟ್ 22 ರವರೆಗೆ ಹಾಸನ ಜಿಲ್ಲಾ ಕ್ರೀಡಾ ಮೈದಾನದಲ್ಲಿ  ಅಗ್ನಿವೀರ ನೇಮಕಾತಿ ನಡೆಯಲಿದೆ.  ‘ಅಗ್ನಿಪಥ’ ಯೋಜನೆಯಡಿ ಭೂ ಸೇನಾ Rally ನಡೆಯಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಯ ಪುರುಷ ಅಭ್ಯರ್ಥಿಗಳು ಈ ರ್ಯಾಲಿಯಲ್ಲಿ ಭಾಗವಹಿಸಬಹುದಾಗಿದೆ ಎಂದು ತಿಳಿಸಲಾಗಿದೆ.

ಜನರಲ್ ಡ್ಯೂಟಿ, ಅಗ್ನಿವೀರ ತಾಂತ್ರಿಕ ನೇಮಕಾತಿ ಜೊತೆಗೆ 8ನೇ ತರಗತಿ ಮತ್ತು 10ನೇ ತರಗತಿ ಉತ್ತೀರ್ಣವಾಗಿರುವವರಿಗೆ ಅಗ್ನಿವೀರ ಕುಶಲಕರ್ಮಿ, ಅಗ್ನಿವೀರ ಕ್ಲರ್ಕ್ ಮತ್ತು ಸ್ಟೋರ್ ಕೀಪರ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಆನ್ಲೈನ್ ಮೂಲಕ ನೋಂದಣಿ ಕಡ್ಡಾಯವಾಗಿದ್ದು, ಜುಲೈ 1ರಿಂದ ಜುಲೈ 30ರವರೆಗೆ https//joinindianarmy.nic.in ವೆಬ್ಸೈಟ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಅಡ್ಮಿಟ್ ಕಾರ್ಡ್ ಗಳನ್ನು ನೋಂದಣಿ ವೇಳೆ ನೀಡಲಾದ ಇಮೇಲ್ ವಿಳಾಸಕ್ಕೆ ಆಗಸ್ಟ್ 1ರಿಂದ ಆಗಸ್ಟ್ 7ರ ಮಧ್ಯೆ ಕಳುಹಿಸಿಕೊಡಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು