ಇತ್ತೀಚಿನ ಸುದ್ದಿ
ಬಾಳೆಹೊನ್ನೂರು: ರಾಜಸ್ಥಾನದಲ್ಲಿ ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ
03/07/2022, 21:27
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಹಿನ್ನೆಲೆ ಹಿಂದೂಪರ ಸಂಘಟನೆಗಳಿಂದ ಮಳೆ ಮಧ್ಯೆಯೂ ಎನ್.ಆರ್.ಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಪ್ರತಿಭಟನೆ ನಡೆಯಿತು.
ವಿಶ್ವ ಹಿಂದೂ ಪರಿಷತ್, ಭಜರಂಗದಳ, ಶ್ರೀರಾಮ ಸೇನೆ ನೇತೃತ್ವದಲ್ಲಿ ಪ್ರತಿಭಟನೆ ಆಯೋಜಿಸಲಾಯಿತು.
ರಾಜಸ್ಥಾನದ ಕಾಂಗ್ರೆಸ್ ಸರ್ಕಾರ, ಹಂತಕರ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಹತ್ಯೆಯ ಹಂತಕರನ್ನ ಗಲ್ಲಿಗೇರಿಸವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು. ನೂರಾರು ಸಂಖ್ಯೆಯಲ್ಲಿ ಹಿಂದು ಕಾರ್ಯಕರ್ತರು ಭಾಗಿಯಾಗಿದ್ದರು. ಹಂತಕರ ಪ್ರಕೃತಿ ದಹನ ಮಾಡಿ ಆಕ್ರೋಶ ಹೊರಹಾಕಿದರು.