7:16 PM Thursday25 - April 2024
ಬ್ರೇಕಿಂಗ್ ನ್ಯೂಸ್
ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ…

ಇತ್ತೀಚಿನ ಸುದ್ದಿ

ಬೈಕ್ ಕಳ್ಳತನ ಮಾಡುತ್ತಿದ್ದ ಯುವ ಗ್ಯಾಂಗ್ ಪೊಲೀಸ್ ಬಲೆಗೆ: ಅಥಣಿ ಪೊಲೀಸರ ಯಶಸ್ವಿ ಕಾರ್ಯಾಚರಣೆ

03/07/2022, 02:16

ರಾಹುಲ್ ಬೆಳಗಾವಿ
info.reporterkarnataka@gmail.com

ಹಲವು ದಿನಗಳಿಂದ ಅಥಣಿ ತಾಲೂಕಿನಲ್ಲಿ ನಡೆಯುತ್ತಿದ್ದ ಬೈಕ್ ಕಳ್ಳತನಕ್ಕೆ ಅಥಣಿ ಪೊಲೀಸರು ಬ್ರೇಕ್ ಹಾಕಿದ್ದಾರೆ. 6ಕ್ಕೂ ಹೆಚ್ಚು ಬೈಕ್ ಕಳ್ಳತನ ಮಾಡಿದ ಗ್ಯಾಂಗ್ ನ್ನು ಬಂಧಿಸುವಲ್ಲಿ ಪೊಲೀಸರು ಸಫಲರಾಗಿದ್ದಾರೆ.

ಪೋಲಿಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ,  ಹೆಚ್ಚುವರಿ ಪೋಲಿಸ್ ಅಧಿಕ್ಷಕ ಮಹಾನಿಂಗ ನಂದಗಾವಿ, ಡಿವೈಎಸ್ಪಿ ಎಸ್ ವಿ ಗಿರೀಶ, ಸಿಪಿಐ ಶಂಕರಗೌಡ ಬಸನಗೌಡ, ಪಿಎಸ್ಐ ಕುಮಾರ ಹಾಡಕಾರ ಅವರ ನೇತೃತ್ವದಲ್ಲಿ ತಂಡ ಬಲೆ ಬೀಸಿ 3 ಮಂದಿ ಆರೋಪಿತರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಸತ್ತಿ ಗ್ರಾಮದ ಆನಂದ ಗುಳಗಾವಿ (20), ಪವನ ಗಾಯಕವಾಡ (20) ಹಾಗೂ ಬರಮಖೋಡಿ ಗ್ರಾಮದ ವಿಕ್ರಮ ಸಾಳುಂಕೆ (20) ಎಂದು ತಿಳಿದು ಬಂದಿದೆ.

ಹಿರಿಯ ಪೊಲೀಸ್ ಅಧಿಕಾರಿಗಳ ನಿರ್ದೇಶನದಂತೆ ಡಿವೈಎಸ್ಪಿ ಎಸ್. ವಿ. ಗಿರೀಶ್ ಹಾಗೂ ಸಿಪಿಐ ಶಂಕರಗೌಡ ಬಸನಗೌಡ ಅವರ ಮಾರ್ಗದರ್ಶನದಂತೆ ಪಿಎಸ್ಐ ಕುಮಾರ ಹಾಡಕರ ಅವರ ನೇತೃತ್ವದಲ್ಲಿ ಸಿಬ್ಬಂದಿಗಳ ತಂಡ ರಚನೆ ಮಾಡಿ ಸತತ ಕಾರ್ಯಾಚಣೆ ನಡೆಸಿ ಮೋಟಾರ್ ಸೈಕಲ್ ಕಳ್ಳರ ಹೆಡೆಮುರಿ ಕಟ್ಟುವಲ್ಲಿ ಅಥಣಿ ಪೋಲಿಸ್ ಇಲಾಖೆ ಯಶಸ್ವಿಯಾಗಿದೆ. 


ಈ ವೇಳೆ ವಿ ಜಿ ಆರೇರ, ಬಿ ಜೆ ತಳವಾರ, ಎ ಎ ಇರಕರ, ಜಿ ಎಚ್ ಹೊನವಾಡ, ಜಮೀರ ಡಾಂಗೆ, ಕೆ ಬಿ ಸಿರಗೂರ, ಆರ್ ಸಿ ಹಾದಿಮನಿ, ಎಮ್ ಎಮ್ ಖೋತ್ ಸೇರಿದಂತೆ ಇತರರು ತಂಡದಲ್ಲಿ ಭಾಗಿಯಾಗಿದ್ದರು.

ಪೊಲೀಸರ ಕಾರ್ಯಕ್ಕೆ ಜನ ಸಾಮಾನ್ಯರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು