12:33 PM Thursday18 - April 2024
ಬ್ರೇಕಿಂಗ್ ನ್ಯೂಸ್
ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ… ಮಂಗಳೂರಿನಲ್ಲಿ ನಾಳೆ ‘ಇಂಡಿಯಾ’ ಘಟಕ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ‘ಬಿಜೆಪಿ…

ಇತ್ತೀಚಿನ ಸುದ್ದಿ

ಚಿಕ್ಕಬಳ್ಳಾಪುರ -ದಿಬ್ಬೂರು- ಗುಂಡ್ಲಗುರ್ಕಿ ರಸ್ತೆಯಲ್ಲಿ ಮರಗಳ ಮಾರಣ ಹೋಮ!!: ಜೀವ ಸಂಕುಲಕ್ಕೆ ಕೊಳ್ಳಿ!

03/07/2022, 10:19

ಆಶಾ ಮಂಚನಬಲೆ ಚಿಕ್ಕಬಳ್ಳಾಪುರ

info.reporterkarnataka@gmail.com

ಸಾಮಾಜಿಕ ಅರಣ್ಯ ಇಲಾಖೆಯು ಎರಡು ವರ್ಷಗಳ ಹಿಂದೆ ಚಿಕ್ಕಬಳ್ಳಾಪುರ -ದಿಬ್ಬೂರು ಮಾರ್ಗದ -ಮಂಚನಬಲೆ -ಗುಂಡ್ಲಗುರ್ಕಿ ಕ್ರಾಸ್ ನಡುವಿನ ರಸ್ತೆ ಯುದ್ಧಕ್ಕೂ ನೂರಾರು ಸಸಿಗಳನ್ನು ನೆಟ್ಟಿತ್ತು. ನೆಟ್ಟ ಎಲ್ಲಾ ಸಸಿಗಳು ಅತ್ಯುತ್ತಮವಾಗಿ ಬೆಳೆಯುತ್ತಿದ್ದು ,ಭವಿಷ್ಯದಲ್ಲಿ ಅವು ಹೆಮ್ಮರವಾಗಿ ಬೆಳೆದು ಜೀವಿ ಸಂಕುಲಕ್ಕೆ ಅವು ಆಸರೆಯಾಗುತ್ತಿದ್ದವು. ಆದರೆ ರಸ್ತೆ ಬದಿಯಲ್ಲಿದ್ದ ಬಹುಪಾಲು ಮರಗಳನ್ನು ಇತ್ತೀಚೆಗೆ ಮಾರಣಹೋಮ ಮಾಡಲಾಗಿದೆ. 

ಸಾಮಾಜಿಕ ಅರಣ್ಯ ಇಲಾಖೆ ನೆಟ್ಟ ಗಿಡಗಳನ್ನು ಪಾಲನೆ, ಪೋಷಣೆ ಮತ್ತು ಸಂರಕ್ಷಣೆ ಮಾಡಲು ಹಲವಾರು ನೌಕರರನ್ನು ನೇಮಕ ಮಾಡಲಾಗಿದೆ. ಕಳೆದ ವಾರದಿಂದ ಬೆಳೆಯುತ್ತಿದ್ದ ನೂರಾರು ಮರಗಳು ಕಗ್ಗೊಲೆಯಾಗಿದೆ. ಇದು ಬೆಸ್ಕಾಂ ಕೃತ್ಯವೆಂದು ಅರಣ್ಯ ಇಲಾಖೆ ಸಿಬ್ಬಂದಿ ಹೇಳುತ್ತಾರೆ. ರಸ್ತೆಯ ಬದಿಯಲ್ಲಿ ವಿದ್ಯುತ್ ಕಂಬಗಳನ್ನು ಅಳವಡಿಸಲು ಸಾಕಷ್ಟು ಸ್ಥಳಾವಕಾಶವಿದೆ ಹಾಗೂ ಬೆಳೆಯುತ್ತಿರುವ ಸಸಿಗಳು ತಾಕುವಷ್ಟು ಅಷ್ಟು ಎತ್ತರಕ್ಕೆ ಬೆಳೆದಿಲ್ಲ. ಹಾಗಿದ್ದರೂ ಸಹ ಮರಗಳ ಮಾರಣಹೋಮ ನಡೆಸಿರುವುದು ಪರಿಸರ ಪ್ರೇಮಿಗಳಲ್ಲಿ ತೀವ್ರ ದುಃಖ ನೋವನ್ನು ಉಂಟು ಮಾಡಿದೆ. ಈ ಎರಡು ಇಲಾಖೆಗಳು ಈ ಕೃತ್ಯಕ್ಕೆ ಸಮಾನ ಪಾಲುದಾರರಾಗಿದ್ದು ಸಸಿಗಳನ್ನು ನೆಡಲು ಹಾಗೂ ಪೋಷಿಸಲು ಸಾರ್ವಜನಿಕ ಹಣವನ್ನು ಪೋಲು ಮಾಡಲಾಗಿದೆ.


ಆದಕಾರಣ ಕಗ್ಗೊಲೆಯಾದ ಎಲ್ಲಾ ಮರಗಳ ಐದು ಪಟ್ಟು ಸಸಿಗಳನ್ನು ನೆಟ್ಟು ಮೂರು ವರ್ಷಗಳ ಕಾಲ ಅವುಗಳನ್ನು ಪೋಷಿಸುವ ಜವಾಬ್ದಾರಿಯನ್ನು ಸಂಬಂಧಪಟ್ಟ ಇಲಾಖೆಗಳು ವಹಿಸಿಕೊಳ್ಳಬೇಕಾಗಿದೆ.

ಈ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರದ ಉಸಿರಿಗಾಗಿ ಹಸಿರು ಟ್ರಸ್ಟ್ ಮತ್ತು ಬಾಗೇಪಲ್ಲಿಯ ಹಸಿರು ಸ್ವಯಂ ಸೇವಾ ಸಂಸ್ಥೆ ಹಾಗೂ ಆಶಾ ಫೌಂಡೇಶನ್(ರಿ.) ಮಂಚನಬಲೆ ,ಇತರೆ ಸಮಾನ ಮನಸ್ಕ ಸಂಘಟನೆಗಳ ಸಹಯೋಗದಲ್ಲಿ ಜುಲೈ 3ರಂದು ಕೊಲೆಯಾದ ಹರೆಯದ ಮರಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಹಾಗೆ ಸಂಜೆ 4.30 ಗಂಟೆಗೆ ಗುಂಡ್ಲುಗುರ್ಕಿ ಕ್ರಾಸ್ ನಿಂದ ಆರಂಭವಾಗುವ ಕಾಲ್ನಡಿಗೆ ಜಾಥಾ ಮಂಚನ ಬಲೆ ಗ್ರಾಮದಲ್ಲಿ ಮುಕ್ತಾಯಗೊಳ್ಳಲಿದೆ. ಮಾರ್ಗದ ಮಧ್ಯದಲ್ಲಿ ಕೊಲೆಯಾದ ಮರಗಳಿಗೆ  ಪೂಜೆಯನ್ನು ಸಲ್ಲಿಸಿ ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಮರ್ಪಿಸಲಾಗುವುದು. ತದನಂತರ ಸಂಜೆ 6 ಗಂಟೆಗೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ವೃತ್ತದ ಮಧ್ಯದಲ್ಲಿ ಮಾನವ ಸರಪಳಿಯನ್ನು ರಚಿಸಿ ಮೊಂಬತ್ತಿಗಳನ್ನು ಬೆಳಗುವುದರ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಮರ್ಪಿಸಲಾಗುವುದು.


ಸದರಿ ಕಾರ್ಯಕ್ರಮದಲ್ಲಿ ಸಮಾನ ಮನಸ್ಕ ಪರಿಸರ ಪ್ರೇಮಿಗಳು, ಶಾಲಾ ವಿದ್ಯಾರ್ಥಿಗಳು, ಹಸಿರು ಸೇವಾ ಸಂಸ್ಥೆ ಉಸಿರಿಗಾಗಿ ಹಸಿರು ಟ್ರಸ್ಟ್ ಹಾಗೂ ಆಶಾ ಫೌಂಡೇಶನ್(ರಿ.) ಸದಸ್ಯರು ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು