ಇತ್ತೀಚಿನ ಸುದ್ದಿ
15 ಸಾವಿರ ಶಿಕ್ಷಕರ ನೇಮಕಾತಿ; ಜುಲೈ ಅಂತ್ಯದೊಳಗೆ ಸ್ಪರ್ಧಾತ್ಮಕ ಪರೀಕ್ಷೆ ಫಲಿತಾಂಶ ಪ್ರಕಟ: ಶಿಕ್ಷಣ ಸಚಿವ
04/07/2022, 16:49
ಬೆಂಗಳೂರು(reporterkarnataka.com): 15 ಸಾವಿರ ಶಾಲಾ ಶಿಕ್ಷಕರ ನೇಮಕಾತಿ ಸಂಬಂಧ ನಡೆದ ಸ್ಪರ್ಧಾತ್ಮಕ ಪರೀಕ್ಷೆಯ ಫಲಿತಾಂಶ ಜುಲೈ ಅಂತ್ಯ ದೊಳಗೆ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಪರೀಕ್ಷೆಯ ಮೌಲ್ಯಮಾಪನ ಕಾರ್ಯ ನಡೆಯುತ್ತಿದ್ದು ಎರಡು ಪತ್ರಿಕೆಯ ಮೌಲ್ಯಮಾಪನ ಕಾರ್ಯ ಮುಗಿದಿದೆ. ಜುಲೈ ಕೊನೆಯ ವಾರ ಮೌಲ್ಯಮಾಪನದ ಕಾರ್ಯ ಪೂರ್ಣಗೊಳ್ಳಲಿದ್ದು ,ಅಂತ್ಯದೊಳಗೆ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು ಈ ಹುದ್ದೆಗಳಿಗೆ ಒಟ್ಟಾಗಿ ರೂ.1,06,083 ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿದ್ದರು.