5:20 PM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ತೆರಿಗೆ ವಂಚನೆ, ದೇಶದ ಗೌಪ್ಯ ಮಾಹಿತಿ ಸೋರಿಕೆ: ಚೀನಾದ ಕಂಪನಿಗಳ ಮೇಲೆ ಇಡಿ ದಾಳಿ

06/07/2022, 12:11

ಹೊಸದಿಲ್ಲಿ(reporterkarnataka.com): ತೆರಿಗೆ ವಂಚನೆ ತನಿಖೆಯ ಭಾಗವಾಗಿ ದೇಶದಲ್ಲಿನ ಚೀನಾದ ಟೆಲಿಕಾಂ ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ ಬೆನ್ನೆಲ್ಲೇ ಇದೀಗ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.

ತೆರಿಗೆ ವಂಚನೆ ಮತ್ತು ದೇಶದ ಗೌಪ್ಯ ವಿಚಾರಗಳನ್ನು ಸೋರಿಕೆ ಮಾಡುತ್ತಿರುವ ಆರೋಪದ ಮೇಲೆ ಚೀನಾಗೆ ಸಂಬಂಧಿಸಿದ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಉತ್ತರಪ್ರದೇಶ, ಮಧ್ಯಪ್ರದೇಶ, ಬಿಹಾರ ಸೇರಿದಂತೆ ದಕ್ಷಿಣದ ಹಲವು ರಾಜ್ಯಗಳಲ್ಲಿನ ಚೀನಾ ಕಂಪನಿಗಳ ಮೇಲೆ ರೈಡ್​ ನಡೆಸಿ ಪರಿಶೀಲನೆಗೆ ಒಳಪಡಿಸಲಾಗಿದೆ.

ಕೋಟ್ಯಂತರ ರೂಪಾಯಿ ವಹಿವಾಟು ನಡೆಸುತ್ತಿರುವ ಚೀನಾ ಮೂಲದ ಟೆಲಿಕಾಂ ಕಂಪನಿಗಳ ಆದಾಯ ವಿವರ ಸಲ್ಲಿಕೆಯಲ್ಲಿ ಲೋಪದೋಷಗಳು ಕಂಡು ಬಂದಿರುವ ಆರೋಪದ ಮೇಲೆ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳ ಮೂಲಕ ಬಿಸಿ ಮುಟ್ಟಿಸಿದೆ.

ಕಳೆದ ಕೆಲ ವರ್ಷಗಳಿಂದ ಚೀನಿ ಮೂಲದ ಮೊಬೈಲ್​ ಕಂಪನಿಗಳು ಸಾವಿರಾರು ಕೋಟಿ ರೂಪಾಯಿ ಆದಾಯ ಗಳಿಸುತ್ತಿದ್ದರೂ, ನಷ್ಟವನ್ನು ತೋರಿಸುತ್ತಿವೆ. ಇದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಆದಾಯ ತೆರಿಗೆಯಿಂದ ನುಣುಚಿಕೊಳ್ಳಲು ಕಂಪನಿಗಳ ಈ ರೀತಿ ಮೋಸ ಮಾಡುತ್ತಿವೆ ಎಂಬ ಅನುಮಾನದ ಮೇಲೆ ತನಿಖೆಗೆ ಸೂಚಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು