10:01 AM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಶಾಸಕದ್ವಯರ ರಾಜಕೀಯ ಒತ್ತಡದಿಂದ ಎಎಸ್ಪಿ ವರ್ಗಾವಣೆ: ಮಾಜಿ ಸಚಿವ ರಮಾನಾಥ  ರೈ ಆರೋಪ

07/07/2022, 16:45

ಬಂಟ್ವಾಳ(reporterkarnataka.com):  ಬಂಟ್ವಾಳ ಹಾಗೂ ಬೆಳ್ತಂಗಡಿ ಶಾಸಕರ ಬೆಂಬಲದಿಂದ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ, ಮರಳು ದಂಧೆ, ಜುಗಾರಿ ದಂಧೆಗಳಿಗೆ ಕಡಿವಾಣ ಹಾಕುತ್ತಿದ್ದ ಎಎಸ್ಪಿ ಶಿವಾಂಶು ರಜಪೂತ್ ಅವರನ್ನು ರಾಜಕೀಯ ಒತ್ತಡದಿಂದ ವರ್ಗಾವಣೆ ಮಾಡಲಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಆರೋಪಿಸಿದ್ದಾರೆ.

ಬಿ.ಸಿ.ರೋಡ್‌ನ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು “ಇದೊಂದು ರಾಜಕೀಯ ಪ್ರೇರಿತ ವರ್ಗಾವಣೆ, ಒಳ್ಳೆಯ ಕೆಲಸ ಮಾಡುತ್ತಿದ್ದ ಅಧಿಕಾರಿಯನ್ನು ಹಠಾತ್ತಾಗಿ ವರ್ಗಾವಣೆ ಮಾಡಿದ್ದಾರೆ, ನಿರಂತರವಾಗಿ ಅಕ್ರಮ ಮರಳುಗಾರಿಕೆ ಕ್ಷೇತ್ರದಲ್ಲಿ ನಡೆಯುತ್ತಿದ್ದು,

ಅನಂತಾಡಿಯಲ್ಲಿ ಗಣಿಗಾರಿಕೆಯಿಂದ ಗುಹಾತೀರ್ಥಕ್ಕೆ ತೊಂದರೆ ಆಗುತ್ತಿದೆ ಎಂಬ ಆರೋಪವನ್ನು ಮಾಡಿ ಪ್ರತಿಭಟನೆಯನ್ನು ಮಾಡಿದ್ದೆವು ಎಂದು ನೆನಪಿಸಿದ ಅವರು ಬಿಜೆಪಿಯವರು ಬೇರೆಯವರಿಗೆ ಬುದ್ಧಿವಾದ ಹೇಳುತ್ತಾರೆ. ಆದರೆ ಅವರಿಗೆ ಬುದ್ಧಿ ಹೇಳಬೇಕಾದವರು ಜನರು ಎಂದರು.

ಒಂದು ಲೋಡ್ ಮರಳಿಗೆ 15 ಸಾವಿರ ರೂ. ಕೊಡಬೇಕಾದ ಪರಿಸ್ಥಿತಿ ಇದೆ, ಮನೆ ಕಟ್ಟುವವರು ಸಂಕಷ್ಟ ಪಡುತ್ತಿದ್ದಾರೆ. ತಾಲೂಕಿನ ಒಂದು ಕಡೆ ಪರವಾನಗಿ ತೆಗೆದುಕೊಂಡವರು ಎಲ್ಲ ಕಡೆಗಳಲ್ಲೂ ಮರಳುಗಾರಿಕೆ ಮಾಡುತ್ತಾರೆ ಎಂದು ರೈ ಆರೋಪಿಸಿದರು.

ಜೂಜು ಅಡ್ಡೆಯ ಬಳಿಯೇ ಕೊಲೆ ಯತ್ನ ಪ್ರಕರಣ, ಹಲ್ಲೆಗಳು ನಡೆದದ್ದು ವರದಿಯಾಗಿವೆ. ಹೆಣ್ಣುಮಕ್ಕಳ ಕರಿಮಣಿ ಅಡವಿಟ್ಟು ಜುಗಾರಿ ದಂಧೆಯಲ್ಲಿ ತೊಡಗಿಸಿಕೊಂಡವರಿದ್ದಾರೆ. ಮರಳುಗಾರಿಕೆಯ ಪಕ್ಕದ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ,ಈ ಭಾಗದ ಬೆಳ್ತಂಗಡಿ ಮತ್ತು ಬಂಟ್ವಾಳದ ಇಬ್ಬರೂ ಶಾಸಕರ ಬೆಂಬಲ ಇದೆ ಎಂದು ನಾನು ನೇರವಾಗಿ ಆರೋಪಿಸುತ್ತೇನೆ ಎಂದು ರೈ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು