12:16 PM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

20 ಎಕರೆ ತೋಟದಲ್ಲಿ ಉದುರಿದ ಕಾಫಿ ಫಸಲು- ಎಲೆಗಳು:  ಸ್ಥಳಕ್ಕೆ ಅಧಿಕಾರಿಗಳು, ವಿಜ್ಞಾನಿಗಳ ಭೇಟಿ

08/07/2022, 21:21

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಜಾವಳಿ ಗ್ರಾಮದ ಕಾಫಿ ಬೆಳೆಗಾರರಾದ ಸುರೇಶ್ ಎಂಬುವವರಿಗೆ ಸೇರಿದ ಸುಮಾರು 20 ಎಕರೆ ಕಾಫಿ ತೋಟದಲ್ಲಿ ಬಾರಿ ಪ್ರಮಾಣದಲ್ಲಿ ಕಾಫಿ ಫಸಲು ಮತ್ತು ಎಲೆಗಳು ಉದುರಿದ್ದು ಸ್ಥಳಕ್ಕೆ ಅಧಿಕಾರಿಗಳು ಹಾಗೂ ವಿಜ್ಞಾನಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಳೆದ ಒಂದು ವಾರದ ಹಿಂದೆ ಕಾಫಿ ತೋಟಕ್ಕೆ ಔಷಧಿ ಸಿಂಪಡಣೆ ಮಾಡಲಾಗಿದ್ದು, ಆ ನಂತರ ಸತತವಾಗಿ ಸುರಿದ ಮಳೆಯಿಂದಾಗಿ ಕಾಫಿ ಫಸಲು ಹಾಗೂ ಎಲೆಗಳು ಉದುರಿರುವ ಸಾಧ್ಯತೆ ಇದ್ದು ಖಾಫಿ ಸಂಶೋಧನಾ ಕೇಂದ್ರದ ವಿಜ್ಞಾನಿಗಳು ಕಾಫಿ ಕಾಯಿ ಮತ್ತು ಎಲೆಯ ಮಾದರಿಗಳನ್ನು ಸಂಗ್ರಹಿಸಿದ್ದು ಸಂಶೋಧನೆಯ ನಂತರವಷ್ಟೆ ನೈಜ್ಯ ಕಾರಣ ತಿಳಿಯಲಿದೆ.


ಈ ಸಂದರ್ಭದಲ್ಲಿ ಕಾಫಿ ಸಂಶೋಧನಾ ಕೇಂದ್ರದ ಸಸ್ಯರೋಗ ವಿಭಾಗದ ಮುಖ್ಯಸ್ಥರಾದ ಡಾ.ಸುಧಾ, ಸಸ್ಯರೋಗ ವಿಜ್ಞಾನಿಗಳಾದ ಡಾ.ಸಂತೋಷ್ ರೆಡ್ಡಿ, ಡಾ.ಸೋಮಶೇಖರ್ ಪಾಟೀಲ್, ರಸಾಯನ ಶಾಸ್ತ್ರ ವಿಜ್ಞಾನಿಗಳಾದ ಡಾ.ಎನ್.ಚಂದ್ರಶೇಖರ್, ಬೆಳೆಗಾರರ ಸಂಘದ ತಾಲ್ಲೂಕು ಅಧ್ಯಕ್ಷ ಬಾಲಕೃಷ್ಣ ಬಾಳೂರು, ಕಾಫಿ ಬೆಳೆಗಾರರಾದ ಶಶಿ ಜಾವಳಿ, ಚನ್ನಕೇಶವಗೌಡ, ಪರೀಕ್ಷಿತ್ ಜಾವಳಿ, ಪ್ರದೀಪ್, ರಾಜೇಶ್, ಸತೀಶ್  ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಗೆ ಕಾಫಿ ಬೆಳೆ ಸೇರಿಸಿ

ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಗೆ ಕಾಫಿ ಬೆಳೆಯನ್ನು ಸೇರಿಸಬೇಕು ಎಂದು ಬೆಳೆಗಾರರ ಸಂಘದ ತಾಲ್ಲೂಕು ಅಧ್ಯಕ್ಷ ಬಾಲಕೃಷ್ಣ ಬಾಳೂರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಅವರು ಕಳೆದ ಹಲವಾರು ವರ್ಷಗಳಿಂದ ಅಕಾಲಿಕ ಮಳೆಯಿಂದ ಕಾಫಿ ಫಸಲು ನೆಲಕಚ್ಚುತ್ತಿದೆ. ಕಾಫಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಲೆನಾಡು ಭಾಗದಲ್ಲಿ ಹೆಚ್ಚು ಮಳೆಯಾಗುವುದರಿಂದ ಮಳೆಯಿಂದ ಕಾಫಿ ಬೆಳೆಯನ್ನು ರಕ್ಷಿಸುವುದು ಸವಾಲಿನ ಕೆಲಸವಾಗಿದೆ. ಆದ್ದರಿಂದ ಕಾಫಿ ಬೆಳೆಯನ್ನು ಹವಾಮಾನ ಆಧಾರಿತ ಬೆಳೆವಿಮಾ ವ್ಯಾಪ್ತಿಗೆ ಸೇರಿಸಬೇಕು ಎಂದು ತಿಳಿಸಿದ್ದಾರೆ.

ಇತರ ಬೆಳೆಗಳಿಗೆ ಈಗಾಗಲೇ ಹವಾಮಾನ ಆಧಾರಿತ ಬೆಳೆ ವಿಮೆ ಇದ್ದರೂ ಕೂಡ ವಿಮೆಯ ಮಾನದಂಡಗಳ ಬಗ್ಗೆ ಗೊಂದಲವಿದೆ. ವಿಮೆ ಕಂಪನಿಗಳು ಕೂಡ ಸರಿಯಾದ ಮಾಹಿತಿ ನೀಡುತ್ತಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳು ವಿಮಾ ಕಂಪನಿಗಳು, ರೈತರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಮಾಹಿತಿಯನ್ನು ರೈತರಿಗೆ ನೀಡುವ ಕಾರ್ಯವನ್ನು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು