1:54 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಚಾತುರ್ಮಾಸ ಪ್ರಯುಕ್ತ ಕಾಶೀ ಮಠಾಧೀಶರ ಪುರ ಪ್ರವೇಶ: ಮಂಗಳೂರಿನಲ್ಲಿ ಶ್ರೀಗಳಿಗೆ ಪೂರ್ಣಕುಂಭ ಸ್ವಾಗತ

09/07/2022, 22:54

ಚಿತ್ರ : ಮಂಜು ನೀರೇಶ್ವಾಲ್ಯ
ಮಂಗಳೂರು(reporterkarnataka.com):  ಶ್ರೀ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶುಭ ಕೃತ ನಾಮ ಸಂವತ್ಸರದ ಚಾತುರ್ಮಾಸ ವ್ರತಾಚರಣೆಯು ಜುಲೈ 18ರಿಂದ  ಈ ಬಾರಿ ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಯಲಿದ್ದು, ಈ ಪ್ರಯುಕ್ತ ಶ್ರೀಗಳವರ ಪುರ ಪ್ರವೇಶ ಶನಿವಾರ ನಗರದ ರಥಬೀದಿಯಲ್ಲಿ ನಡೆಯಿತು. 

ಶ್ರೀಗಳವರು ಕೊಂಚಾಡಿ ಮೊಕ್ಕಾಂ ನಿಂದ ಆಗಮಿಸಿದ್ದು ಶ್ರೀಗಳವರಿಗೆ ಭವ್ಯ ಪೂರ್ಣಕುಂಭ ಸ್ವಾಗತ ನೀಡಲಾಯಿತು.  ಪುರ ಪ್ರವೇಶ ಕಾರ್ಯಕ್ರಮವು ಸ್ವದೇಶೀ ಸ್ಟೋರ್ಸ್ ಬಳಿಯಿಂದ ಪ್ರಾರಂಭಗೊಂಡು ಶ್ರೀ ದೇವಳದ ವರೆಗೆ ನಡೆಯಿತು. ಈ  ಸಂದರ್ಭದಲ್ಲಿ ವಿಶೇಷ ಚಂಡೆವಾದನ, ವಾರ್ಕರಿ ತಂಡದಿಂದ ಹಾಗೂ ವಿವಿಧ ಭಜನಾ ಮಂಡಳಿಗಳಿಂದ ಭಜನೆ ಬಳಿಕ ಶ್ರೀಗಳವರು ಶ್ರೀ ದೇವರ ದರ್ಶನ ಪಡೆದು , ದೇವಳದ ಆಡಳಿತ ಮಂಡಳಿ ಯ ಪದಾಧಿಕಾರಿಗಳು ಪಾದಪೂಜೆ ನೆರವೇರಿಸಿದರು .  

ಇತ್ತೀಚಿನ ಸುದ್ದಿ

ಜಾಹೀರಾತು