5:35 AM Saturday20 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

ಕೂಡ್ಲಿಗಿ: ನಾಗರ ಚೌತಿ ಪ್ರಯುಕ್ತ ಮನೆ ಮನೆಗಳಲ್ಲಿ, ದೇಗುಲಗಳಲ್ಲಿ ನಾಗರ ಮೂರ್ತಿಗೆ ಹಾಲೆರೆದ ಭಕ್ತರ ದಂಡು

01/08/2022, 20:30

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ನಾಗರ ಚೌತಿ  ಪ್ರಯುಕ್ತ ನಾಗರ ಮೂರ್ತಿಗೆ ಆಸ್ತಿಕರು ಹಾಲೆರೆಯೋ ಮೂಲಕ ತಮ್ಮ ಭಕ್ತಿ ಸಮರ್ಪಿಸಿದರು. 

ಪಟ್ಟಣದ ಶ್ರೀಬಸವಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿರುವ ಶ್ರೀ ನಾಗದೇವತೆಯ ಮೂರ್ತಿಗೆ ಭಕ್ತರು ಹಾಲೆರದು ಭಕ್ತಿ ಮೆರೆದರು. ಹಲವರು ತಮ್ಮ ಮನೆಯ ದೇವರ ಜಗುಲಿಯಲ್ಲಿ ನಾಗರ ದೇವರ ಮೂರ್ತಿ ಪ್ರತಿಷ್ಠಾಪಿಸಿ, ನಾಗರ ಮೂರ್ತಿಗೆ ಭಕ್ತಿಯಿಂದ ಹಾಲೆರು ಹಬ್ಬ ಆಚರಿಸಿದರು. ಕೆಲವರು ನಾಗರ ಚೌತಿಯಂದು ಹಾಲೆರದು ಹಬ್ಬ ಆಚರಿಸಿದೆರೆ ಉಳಿದವರು ನಾಗ ಪಂಚಮಿಯಂದು ಹಾಲೆರೆದು ಹಬ್ಬ ಆಚರಿಸುತ್ತಾರೆ. ಕುಟುಂಬ ಸಮೇತರಾಗಿ ಬಂಧು ಬಳಗದೊಂದಿಗೆ ಸಾಮೂಹಿಕವಾಗಿ ಹಾಲೆರೆಯೋ ಸಾಂಪ್ರದಾಯ, ಅವಿಭಕ್ತ ಕುಟುಂಬದಲ್ಲಿ ಈಗಲೂ ಕಾಣಬಹುದಾಗಿದೆ. ಅವಿಭಕ್ತ ಕುಟುಂಬ ಕಾಣೆಯಾಗೋ ಸಂದರ್ಭದಲ್ಲಿ, ವಿಭಕ್ತ ಕುಟುಂಬದ ಸದಸ್ಯರು ಮನೆಯಲ್ಲಿಯೆರ ನಾಗದೇವರ ಆರಾಧನೆ ಮಾಡೋದು ಇತ್ತೀಚೆಗೆ ಸಮಾನ್ಯವಾಗಿದೆ. ನಾಗರ ಪಂಚಮಿ ಪ್ರಯುಕ್ತ ಪಟ್ಟಣ ಸೇರಿದಂತೆ ,ತಾಲೂಕಿನೆಲ್ಲೆಡೆ ನಾಗ ದೇವರಾಧನೆ ಜರುಗಿದೆ. ಮಕ್ಕಳು, ಯುವಕ ಯುವತಿಯರು, ಮಹಿಳೆಯರು, ನಾಗರ ಪಂಚಮಿಯನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಿದರು. ಅಂತೆಯೇ ಪಟ್ಟಣದ ಶ್ರೀಬಸವ ಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ನಾಗ ಪ್ರತಿಮೆಗೆ, ಹಾಗೂ ತಮ್ಮ ಮನೆಯ ದೇವರ ಜಗುಲಿಯಲ್ಲಿರುವ ನಾಗ ಪ್ರತಿಮೆಗೆ. ಪುಟಾಣಿ ಅರಣಿ ತನ್ನ ತಾಯಿ ರೇಣುಕಾ ಹಾಗೂ ಸಹೋದರ ವಿನಾಯಕನೊಂದಿಗೆ ನಾಗದೆವತೆಗೆ ಶಾಸ್ತ್ರೋಕ್ತವಾಗಿ ಪೂಜೆಗೈದು ಶ್ರದ್ಧಾ ಭಕ್ತಿಯಿಂದ ಹಾಲೆರದು, ತಮ್ಮ  ಭಕ್ತಿ ಸಮರ್ಪಿಸಿ ಹಬ್ಬಕ್ಕೆ ಮತ್ತಷ್ಟು ಮೆರೆಗುತಂದಿದ್ದಾಳೆ. 

ಇತ್ತೀಚಿನ ಸುದ್ದಿ

ಜಾಹೀರಾತು