8:50 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ಪ್ರವೀಣ್ ಹತ್ಯೆ ಪ್ರಕರಣ: ಎನ್ಐಎ ತನಿಖೆ ಆರಂಭ; ಮಂಗಳೂರು, ಕೇರಳದಲ್ಲಿ ಮಾಹಿತಿ ಸಂಗ್ರಹ

04/08/2022, 13:54


ಮಂಗಳೂರು(reporterkarnataka.com)

ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಪ್ರಾಥಮಿಕ ತನಿಖೆ ಆರಂಭಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಹಾಗೂ ಮಂಗಳೂರಿನಲ್ಲಿ ಎನ್‌ಐಎ ಅಧಿಕಾರಿಗಳ ತಂಡ ಮಾಹಿತಿ ಸಂಗ್ರಹಿಸಿದೆ. 

ಆರೋಪಿಗಳಿಗೆ ಪಿಎಫ್‌ಐ ಸೇರಿದಂತೆ ಯಾವುದಾದರೂ ಪ್ರಮುಖ ಸಂಘಟನೆಗಳ ಜತೆ ನಂಟು ಇದೆಯೇ ಎಂಬ ಕುರಿತು ಎನ್‌ಐಎ ಮಾಹಿತಿ ಕಲೆ ಹಾಕುತ್ತಿದೆ. ವಿವಿಧ ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು, ಶೀಘ್ರದಲ್ಲೇ ಪ್ರಮುಖ ಹಂತಕರು ಬಂಧನಕ್ಕೊಳಗಾಗುವ ಸಾಧ್ಯತೆಯಿದೆ ಎಂದು ರಿಪೋರ್ಟರ್ ಕರ್ನಾಟಕಕ್ಕೆ ಮಾಹಿತಿ ಲಭಿಸಿದೆ.

ಈಗಾಗಲೇ ಬಂಧಿತರಾಗಿರುವ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಒಬ್ಬ ಆರೋಪಿಗೆ ಪೊಲೀಸ್ ಕಸ್ಟಡಿ ಅವಧಿಯನ್ನು 5 ದಿನ ವಿಸ್ತರಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಆರಂಭದಲ್ಲಿ ಬಂಧಿತರಾಗಿ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಗಳಾದ ಸವಣೂರಿನ ಝಾಕಿರ್ ಮತ್ತು ಬೆಳ್ಳಾರೆ ಪೇಟೆ ನಿವಾಸಿ ಶಫೀಕ್‌ನನ್ನು ಆ.2ರಂದು ಸಂಜೆ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಬೆಳ್ಳಾರೆ ಪೊಲೀಸರು ಆರೋಪಿ ಶಫೀಕ್‌ ನ್ನು ಮತ್ತೆ ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಝಾಕಿರ್ ಮತ್ತು ಆ.2ರಂದು ಬಂಧಿತರಾಗಿರುವ ಬೆಳ್ಳಾರೆ ಪಲ್ಲಿಮಜಲು ನಿವಾಸಿಗಳಾದ ಸದ್ದಾಂ(32) ಮತ್ತು ಹಾರಿಸ್(42)ಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಆರಂಭದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗಳಾದ ಶಫೀಕ್ ಮತ್ತು ಜಾಕೀರ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದರು. ಈ ಅವಧಿಯಲ್ಲಿ ಆರೋಪಿಗಳು ವಿಚಾರಣೆ ವೇಳೆ ನೀಡಿದ್ದ ಮಾಹಿತಿಯಾಧರಿಸಿ ತನಿಖೆ ಮುಂದುವರಿಸಿದ್ದ ಪೊಲೀಸರು ಬೆಳ್ಳಾರೆ ಪಳ್ಳಿಮಜಲು ನಿವಾಸಿಗಳಾದ ಸದ್ದಾಂ ಮತ್ತು ಹ್ಯಾರೀಸ್‌ರನ್ನು ಬಂಧಿಸಿದ್ದರು. ಪೊಲೀಸ್ ಕಸ್ಟಡಿಯ ಅವಧಿ ಮುಕ್ತಾಯಗೊಂಡಿದ್ದ ಹಿನ್ನೆಲೆಯಲ್ಲಿ ಶಫೀಕ್ ಮತ್ತು ಝಾಕಿರ್‌ರನ್ನು ಆ.2ರಂದು ಹಾಜರುಪಡಿಸಲಾಗಿತ್ತು.

ಮತ್ತೆ ಪೊಲೀಸ್ ಕಸ್ಟಡಿಗೆ: ಕೃತ್ಯ ನಡೆದು ವಾರ ಕಳೆದರೂ ಆರೋಪಿಗಳು ಇನ್ನೂ ಬಂಧನವಾಗದೇ ಇರುವ ಹಿನ್ನೆಲೆಯಲ್ಲಿ ಬಂಧಿತ ಆರೋಪಿ ಶಫೀಕ್‌ನನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಮತ್ತೆ ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಎರಡನೇ ಬಾರಿ ಆರೋಪಿಯನ್ನು ಪೊಲೀಸರ ಕಸ್ಟಡಿಗೆ ನೀಡುವುದಕ್ಕೆ ಆರೋಪಿ ಪರ ವಕೀಲರು ಪ್ರಬಲವಾಗಿ ಆಕ್ಷೇಪಿಸಿದರು. ಆದರೆ, ಪ್ರಮುಖ ಆರೋಪಿಗಳ ಕುರಿತು ಹೆಚ್ಚಿನ ಮಾಹಿತಿ ಪಡೆದುಕೊಳ್ಳುವುದು ಸೇರಿದಂತೆ ಇನ್ನಷ್ಟು ವಿಚಾರಣೆ ನಡೆಸಬೇಕಾದ ಅಗತ್ಯವಿರುವುದರಿಂದ ಆರೋಪಿ ಶಫೀಕ್‌ ಪೊಲೀಸ್ ಕಸ್ಟಡಿ ಅವಧಿಯನ್ನು ವಿಸ್ತರಿಸುವಂತೆ ಪೊಲೀಸರ ಪರ ಸಹಾಯಕ ಸರಕಾರಿ ಅಭಿಯೋಜಕರು ಮಾಡಿದ್ದ ವಾದವನ್ನು ಪುರಸ್ಕರಿಸಿದ ನ್ಯಾಯಾಲಯ ಆರೋಪಿ ಶಫೀಕ್‌ನನ್ನು ಆ.2ರಿಂದ ಮತ್ತೆ 5 ದಿನಗಳ ಅವಧಿಗೆ ಪೊಲೀಸರ ಕಸ್ಟಡಿಗೆ ನೀಡಿ ಆದೇಶಿಸಿದೆ.

ಪ್ರಮುಖ ಆರೋಪಿಗಳು ನಾಪತ್ತೆ: ಜು.26ರಂದು ರಾತ್ರಿ ಪ್ರವೀಣ್ ಅವರ ಹತ್ಯೆ ನಡೆದಿದೆ. ಘಟನೆ ನಡೆದು ವಾರ ಕಳೆದರೂ ಇನ್ನೂ ಪ್ರಮುಖ ಆರೋಪಿಗಳ ಬಂಧನವಾಗಿಲ್ಲ. ಪ್ರಮುಖ ಆರೋಪಿಗಳ ಕುರಿತು ಪೊಲೀಸರಿಗೆ ಮಹತ್ವದ ಮಾಹಿತಿ ಲಭಿಸಿರುವುದಾಗಿ ಮುಖ್ಯಮಂತ್ರಿ, ಗೃಹ ಸಚಿವರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿಕೊಂಡಿದ್ದರೂ ಇನ್ನೂ ಪ್ರಮುಖ ಆರೋಪಿಗಳ ಬಂಧನವಾಗಿಲ್ಲ. ಆ.5ರೊಳಗೆ ನೈಜ ಆರೋಪಿಗಳ ಬಂಧನವಾಗದೇ ಇದ್ದಲ್ಲಿ ತಾನೇ ಖುದ್ದು ಬಂದು ದ.ಕ.ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸುವುದಾಗಿ ಹೆಚ್.ಡಿ.ಕುಮಾರಸ್ವಾಮಿಯವರು ಹೇಳಿದ್ದಾರೆ. ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

…..

ಇತ್ತೀಚಿನ ಸುದ್ದಿ

ಜಾಹೀರಾತು